Homeಮುಖಪುಟಬಿಜೆಪಿಯೊಂದಿಗೆ ಮೈತ್ರಿ ಸಾಧ್ಯತೆ ತಳ್ಳಿ ಹಾಕಿದ ಸ್ಟಾಲಿನ್; ಆದರೆ ರಾಜನಾಥ್ ಸಿಂಗ್ ಗುಣಗಾನ

ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯತೆ ತಳ್ಳಿ ಹಾಕಿದ ಸ್ಟಾಲಿನ್; ಆದರೆ ರಾಜನಾಥ್ ಸಿಂಗ್ ಗುಣಗಾನ

- Advertisement -
- Advertisement -

ಡಿಎಂಕೆ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೋಮವಾರ ತಳ್ಳಿ ಹಾಕಿದ್ದಾರೆ. ಆದರೆ, ಭಾನುವಾರ ಚೆನ್ನೈನಲ್ಲಿ ದಿವಂಗತ ಡಿಎಂಕೆ ನಾಯಕ ಎಂ ಕರುಣಾನಿಧಿ ಅವರ ಜನ್ಮದಿನದ ಶತಮಾನೋತ್ಸವದ ನೆನಪಿಗಾಗಿ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸ್ಟಾಲಿನ್ ಶ್ಲಾಘಿಸಿದ್ದಾರೆ.

“ರಾಜನಾಥ್ ಸಿಂಗ್ ಅವರು ಕಲೈನರ್ ಸ್ಮಾರಕಕ್ಕೆ ಭೇಟಿ ನೀಡಬೇಕೆಂದು ನಾವು ಒತ್ತಾಯಿಸಿರಲಿಲ್ಲ. ಆದರೆ, ಅವರಾಗಿಯೇ ಬಂದಿದ್ದಾರೆ. ಅವರು ಸ್ಮಾರಕವನ್ನು ಸಂಪೂರ್ಣವಾಗಿ ನೋಡಿ, ಈ ರೀತಿ ಯಾವುದೇ ಸ್ಮಾರಕಗಳಿಲ್ಲ ಎಂಬ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ” ಎಂದು ಸ್ಟಾಲಿನ್ ಹೇಳಿದ್ದಾರೆ.

“ಕಲೈನರ್ ಅವರಿಗೆ ಗೌರವ ಸೂಚಕವಾಗಿ ಎಲ್ಲರೂ ಎದ್ದು ನಿಲ್ಲುವಂತೆ ರಾಜನಾಥ್ ಸಿಂಗ್ ಹೇಳಿದಾಗ ನಾವೆಲ್ಲರೂ ಆಶ್ಚರ್ಯಗೊಂಡೆವು. ಸಿಂಗ್ ಅವರ ಈ ನಡೆ ಬಹಳ ಇಷ್ಟವಾಯಿತು. ನಮ್ಮ ಮೈತ್ರಿ ಪಕ್ಷಗಳ ನಾಯಕರು ಕೂಡ ಮಾತನಾಡದ ರೀತಿಯಲ್ಲಿ ಸಿಂಗ್ ಕರುಣಾನಿಧಿಯವರ ಬಗ್ಗೆ ಮಾತನಾಡಿದ್ದಾರೆ” ಎಂದು ಸ್ಟಾಲಿನ್ ಹೊಗಳಿದ್ದಾರೆ.

ಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವಿಪಕ್ಷಗಳ ಹೇಳಿಕೆಯನ್ನು ಖಂಡಿಸಿದ ಸ್ಟಾಲಿನ್, “ನಾವು ರಾಜನಾಥ್ ಸಿಂಗ್ ಅವರನ್ನು ಆಹ್ವಾನಿಸಿದ ಮಾತ್ರಕ್ಕೆ ಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದಲ್ಲ. ವಿಪಕ್ಷಗಳು ತಪ್ಪು ಮಾಹಿತಿ ಹರಡುತ್ತಿವೆ. ನಾವು ಬಿಜೆಪಿಯೊಂದಿಗೆ ಯಾವುದೇ ರಹಸ್ಯ ಮಾತುಕತೆ ನಡೆಸಿಲ್ಲ. ಮೈತ್ರಿ ಮಾಡಿಕೊಳ್ಳುವ ಪ್ರಮೇಯವೇ ಇಲ್ಲ ಎಂದಿದ್ದಾರೆ.

ಡಿಎಂಕೆ ಕುರಿತು ಇಂದಿರಾ ಗಾಂಧಿಯವರ ಮಾತುಗಳನ್ನು ನೆನಪಿಸಿಕೊಂಡ ಸ್ಟಾಲಿನ್, “ಕರುಣಾನಿಧಿ ಅವರು ಎಂದಾದರೂ ಪಕ್ಷವನ್ನು ಬೆಂಬಲಿಸಲು ಅಥವಾ ವಿರೋಧಿಸಲು ನಿರ್ಧರಿಸಿದರೆ ಅದು ಸಿದ್ಧಾಂತವನ್ನು ಆಧರಿಸಿದೆ ಎಂದು ಮಾಜಿ ಪ್ರಧಾನಿ ಡಿಎಂಕೆಯನ್ನು ಹೊಗಳಿದ್ದರು. ಕಾಂಗ್ರೆಸ್‌ ಜೊತೆಗಿನ ಮೈತ್ರಿ ಬಗ್ಗೆ ಡಿಎಂಕೆ ನಿಲುವನ್ನು ವಿವರಿಸಲು ಈ ಮಾತುಗಳು ಸಾಕು” ಎಂದು ಸ್ಟಾಲಿನ್ ಹೇಳಿದ್ದಾರೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ವಿರುದ್ದ ಕಿಡಿಕಾರಿದ ಸ್ಟಾಲಿನ್, “ಕೇಂದ್ರವನ್ನು ಖಂಡಿಸುವ ಮೂಲಕ ಮೈತ್ರಿ ವದಂತಿಯ ಬಗ್ಗೆ ಡಿಎಂಕೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಪಳನಿಸ್ವಾಮಿಯಂತೆ ಹುದ್ದೆ ಪಡೆಯುವ ತೆವಲು ಡಿಎಂಕೆಗೆ ಇಲ್ಲ ಎಂದಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ದಿವಂಗತ ಡಿಎಂಕೆ ನಾಯಕ ಎಂ ಕರುಣಾನಿಧಿ ಅವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ 100 ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದು, ಕರುಣಾನಿಧಿ ಅವರನ್ನು ಭಾರತೀಯ ರಾಜಕೀಯದ “ಟೈಟಾನ್” ಎಂದು ಕರೆದಿದ್ದಾರೆ.

ಸೈದ್ದಾಂತಿಕ ಮತ್ತು ರಾಜಕೀಯವಾಗಿ ವಿರೋಧಿಯಾಗಿರುವ ದ್ರಾವಿಡ ಪಕ್ಷ ಡಿಎಂಕೆಯ ನಾಯಕನ ಸ್ಮರಣಾರ್ಥ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಾಣ್ಯ ಬಿಡುಗಡೆ ಮಾಡಿರುವುದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...