Homeಮುಖಪುಟಬಿಜೆಪಿಯೊಂದಿಗೆ ಮೈತ್ರಿ ಸಾಧ್ಯತೆ ತಳ್ಳಿ ಹಾಕಿದ ಸ್ಟಾಲಿನ್; ಆದರೆ ರಾಜನಾಥ್ ಸಿಂಗ್ ಗುಣಗಾನ

ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯತೆ ತಳ್ಳಿ ಹಾಕಿದ ಸ್ಟಾಲಿನ್; ಆದರೆ ರಾಜನಾಥ್ ಸಿಂಗ್ ಗುಣಗಾನ

- Advertisement -
- Advertisement -

ಡಿಎಂಕೆ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೋಮವಾರ ತಳ್ಳಿ ಹಾಕಿದ್ದಾರೆ. ಆದರೆ, ಭಾನುವಾರ ಚೆನ್ನೈನಲ್ಲಿ ದಿವಂಗತ ಡಿಎಂಕೆ ನಾಯಕ ಎಂ ಕರುಣಾನಿಧಿ ಅವರ ಜನ್ಮದಿನದ ಶತಮಾನೋತ್ಸವದ ನೆನಪಿಗಾಗಿ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸ್ಟಾಲಿನ್ ಶ್ಲಾಘಿಸಿದ್ದಾರೆ.

“ರಾಜನಾಥ್ ಸಿಂಗ್ ಅವರು ಕಲೈನರ್ ಸ್ಮಾರಕಕ್ಕೆ ಭೇಟಿ ನೀಡಬೇಕೆಂದು ನಾವು ಒತ್ತಾಯಿಸಿರಲಿಲ್ಲ. ಆದರೆ, ಅವರಾಗಿಯೇ ಬಂದಿದ್ದಾರೆ. ಅವರು ಸ್ಮಾರಕವನ್ನು ಸಂಪೂರ್ಣವಾಗಿ ನೋಡಿ, ಈ ರೀತಿ ಯಾವುದೇ ಸ್ಮಾರಕಗಳಿಲ್ಲ ಎಂಬ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ” ಎಂದು ಸ್ಟಾಲಿನ್ ಹೇಳಿದ್ದಾರೆ.

“ಕಲೈನರ್ ಅವರಿಗೆ ಗೌರವ ಸೂಚಕವಾಗಿ ಎಲ್ಲರೂ ಎದ್ದು ನಿಲ್ಲುವಂತೆ ರಾಜನಾಥ್ ಸಿಂಗ್ ಹೇಳಿದಾಗ ನಾವೆಲ್ಲರೂ ಆಶ್ಚರ್ಯಗೊಂಡೆವು. ಸಿಂಗ್ ಅವರ ಈ ನಡೆ ಬಹಳ ಇಷ್ಟವಾಯಿತು. ನಮ್ಮ ಮೈತ್ರಿ ಪಕ್ಷಗಳ ನಾಯಕರು ಕೂಡ ಮಾತನಾಡದ ರೀತಿಯಲ್ಲಿ ಸಿಂಗ್ ಕರುಣಾನಿಧಿಯವರ ಬಗ್ಗೆ ಮಾತನಾಡಿದ್ದಾರೆ” ಎಂದು ಸ್ಟಾಲಿನ್ ಹೊಗಳಿದ್ದಾರೆ.

ಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವಿಪಕ್ಷಗಳ ಹೇಳಿಕೆಯನ್ನು ಖಂಡಿಸಿದ ಸ್ಟಾಲಿನ್, “ನಾವು ರಾಜನಾಥ್ ಸಿಂಗ್ ಅವರನ್ನು ಆಹ್ವಾನಿಸಿದ ಮಾತ್ರಕ್ಕೆ ಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದಲ್ಲ. ವಿಪಕ್ಷಗಳು ತಪ್ಪು ಮಾಹಿತಿ ಹರಡುತ್ತಿವೆ. ನಾವು ಬಿಜೆಪಿಯೊಂದಿಗೆ ಯಾವುದೇ ರಹಸ್ಯ ಮಾತುಕತೆ ನಡೆಸಿಲ್ಲ. ಮೈತ್ರಿ ಮಾಡಿಕೊಳ್ಳುವ ಪ್ರಮೇಯವೇ ಇಲ್ಲ ಎಂದಿದ್ದಾರೆ.

ಡಿಎಂಕೆ ಕುರಿತು ಇಂದಿರಾ ಗಾಂಧಿಯವರ ಮಾತುಗಳನ್ನು ನೆನಪಿಸಿಕೊಂಡ ಸ್ಟಾಲಿನ್, “ಕರುಣಾನಿಧಿ ಅವರು ಎಂದಾದರೂ ಪಕ್ಷವನ್ನು ಬೆಂಬಲಿಸಲು ಅಥವಾ ವಿರೋಧಿಸಲು ನಿರ್ಧರಿಸಿದರೆ ಅದು ಸಿದ್ಧಾಂತವನ್ನು ಆಧರಿಸಿದೆ ಎಂದು ಮಾಜಿ ಪ್ರಧಾನಿ ಡಿಎಂಕೆಯನ್ನು ಹೊಗಳಿದ್ದರು. ಕಾಂಗ್ರೆಸ್‌ ಜೊತೆಗಿನ ಮೈತ್ರಿ ಬಗ್ಗೆ ಡಿಎಂಕೆ ನಿಲುವನ್ನು ವಿವರಿಸಲು ಈ ಮಾತುಗಳು ಸಾಕು” ಎಂದು ಸ್ಟಾಲಿನ್ ಹೇಳಿದ್ದಾರೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ವಿರುದ್ದ ಕಿಡಿಕಾರಿದ ಸ್ಟಾಲಿನ್, “ಕೇಂದ್ರವನ್ನು ಖಂಡಿಸುವ ಮೂಲಕ ಮೈತ್ರಿ ವದಂತಿಯ ಬಗ್ಗೆ ಡಿಎಂಕೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಪಳನಿಸ್ವಾಮಿಯಂತೆ ಹುದ್ದೆ ಪಡೆಯುವ ತೆವಲು ಡಿಎಂಕೆಗೆ ಇಲ್ಲ ಎಂದಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ದಿವಂಗತ ಡಿಎಂಕೆ ನಾಯಕ ಎಂ ಕರುಣಾನಿಧಿ ಅವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ 100 ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದು, ಕರುಣಾನಿಧಿ ಅವರನ್ನು ಭಾರತೀಯ ರಾಜಕೀಯದ “ಟೈಟಾನ್” ಎಂದು ಕರೆದಿದ್ದಾರೆ.

ಸೈದ್ದಾಂತಿಕ ಮತ್ತು ರಾಜಕೀಯವಾಗಿ ವಿರೋಧಿಯಾಗಿರುವ ದ್ರಾವಿಡ ಪಕ್ಷ ಡಿಎಂಕೆಯ ನಾಯಕನ ಸ್ಮರಣಾರ್ಥ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಾಣ್ಯ ಬಿಡುಗಡೆ ಮಾಡಿರುವುದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...