Homeಮುಖಪುಟ‘ಹೊಸ ಶಿಕ್ಷಣ ನೀತಿ’ಯ ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ

‘ಹೊಸ ಶಿಕ್ಷಣ ನೀತಿ’ಯ ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ

- Advertisement -
- Advertisement -

ರಾಜ್ಯ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಆನ್‌ಲೈನ್‌‌ ಸಭೆಯನ್ನು ತಮಿಳುನಾಡು ಸರ್ಕಾರ ಸೋಮವಾರ ಬಹಿಷ್ಕರಿಸಿದೆ. ಕೇಂದ್ರ ಸಚಿವರು ರಾಜ್ಯದ ಸಚಿವರ ಬದಲು ಅಧಿಕಾರಿಗಳೊಂದಿಗೆ ನೇರವಾಗಿ ಸಂವಹನ ನಡೆಸುತ್ತಿರುವುದನ್ನು ಪ್ರತಿಭಟಿಸಿ ತಮಿಳುನಾಡು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

ಹೊಸ ಶಿಕ್ಷಣ ನೀತಿ-2020 ಅನುಷ್ಠಾನ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಶಿಕ್ಷಣ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರದಿಂದ ತಮ್ಮ ಇಲಾಖೆಗೆ ತಿಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪಯ್ಯಮೊಳಿ ಮಾಧ್ಯಮಗಳಿಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಅವರು ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಾಗಿನಿಂದ ಅಧಿಕಾರಿಗಳ ಮಟ್ಟದಲ್ಲಿ ಸಭೆ ಮಾಡುವ ಬದಲು ರಾಜ್ಯ ಸಚಿವರೊಂದಿಗೆ ಚರ್ಚೆ ನಡೆಸಿದರೆ ಉತ್ತಮ ಎಂಬ ಅಂಶವನ್ನು ಕೇಂದ್ರಕ್ಕೆ ಒತ್ತಿಹೇಳಿದ್ದಾರೆ. ಆದರೆ ಅವರ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ: ‘ನಾರದ ಪ್ರಕರಣ’: ಬಂಗಾಳ ಸಚಿವ ಫಿರ್ಹಾದ್ ಹಕೀಮ್‌ ಸಿಬಿಐ ವಶಕ್ಕೆ

“ಸಚಿವರ ಮಟ್ಟದಲ್ಲಿ ಚರ್ಚೆಗಳನ್ನು ನಡೆಸಬೇಕೆಂಬ ನಮ್ಮ ವಿನಂತಿಯ ಹೊರತಾಗಿಯೂ, ಕೇಂದ್ರವು ಅಧಿಕಾರಿಗಳೊಂದಿಗೆ ಮಾತ್ರ ಚರ್ಚೆ ನಡೆಸುವ ಯೋಜನೆಯನ್ನು ಹಾಕಿಕೊಂಡಿದೆ. ಇದನ್ನು ವಿರೋಧಿಸಿ, ನಾವು ಈ ಸಭೆಯನ್ನು ಬಹಿಷ್ಕರಿಸಿದ್ದೇವೆ. ಇದು ನಮ್ಮ ತತ್ವಗಳಿಗೆ ವಿರುದ್ದವಾಗಿರುವುದರಿಂದ ನಾವು ಇದನ್ನು ವಿರೋಧಿಸುತ್ತಿದ್ದೇವೆಯೆ ಹೊರತು, ಕೇಂದ್ರ ಸರ್ಕಾರಕ್ಕೆ ವಿರುದ್ದವಾಗಿ ನಿಲ್ಲಬೇಕು ಎಂಬುವುದು ನಮ್ಮ ಉದ್ದೇಶವಲ್ಲ”ಎಂದು ಸಚಿವರು ಹೇಳಿದ್ದಾರೆ.

ಮೂರು ಭಾಷಾ ನೀತಿ, 3, 5, ಮತ್ತು 8 ನೆ ತರಗತಿಗೆ ಪಬ್ಲಿಕ್ ಪರೀಕ್ಷೆ ಸೇರಿದಂತೆ, ಹೊಸ ಶಿಕ್ಷಣ ನೀತಿ-2020 ಯಲ್ಲಿ ಹಲವು ಸಮಸ್ಯೆಗಳಿವೆ ಎಂದು ಸಚಿವರು ಹೇಳಿದ್ದಾರೆ. ಡಿಎಂಕೆ ಈಗಾಗಲೇ ಹೊಸ ಶಿಕ್ಷಣ ನೀತಿ-2020 ರ ಹಲವು ಅಂಶಗಳನ್ನು ವಿರೋಧಿಸಿದೆ. ಪಕ್ಷ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಕೇಂದ್ರ ಪರಿಗಣಿಸಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ಕೊರೊನಾ ಅವಧಿಯಲ್ಲಿ ಆನ್‌ಲೈನ್ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅನುಷ್ಠಾನ ಮತ್ತು ಹನ್ನೆರಡನೇ ತರಗತಿಯ ಪರೀಕ್ಷೆಗಳು ಪ್ರಸ್ತುತ ಸನ್ನಿವೇಶದಲ್ಲಿ ಕಾರ್ಯಸಾಧ್ಯವಾಗಿದೆಯೇ ಎಂಬುದು ಕೇಂದ್ರ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗುತ್ತಿರುವ ಪ್ರಮುಖ ವಿಷಯಗಳು.

ಕೇಂದ್ರ ಸಚಿವರು ಮಂಗಳವಾರ ಕೇಂದ್ರ ವಿಶ್ವವಿದ್ಯಾಲಯಗಳ ಉಪಕುಲಪತಿಗಳೊಂದಿಗೆ ಸಂವಹನ ನಡೆಸಲು ನಿರ್ಧರಿಸಿದ್ದು, ಈ ವಾರದ ಕೊನೆಯಲ್ಲಿ ಐಐಟಿ ಮತ್ತು ಐಐಎಂಗಳ ನಿರ್ದೇಶಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಮಿಳುನಾಡಿನ ಈ ಕ್ರಮ ಸ್ವಾಗತಾರ್ಹ. ರಾಜ್ಯ ಸರ್ಕಾರಗಳನ್ನು ಕಡೆಗಣಿಸಿ, ರಾಜ್ಯ ಸರ್ಕಾರಗಳ ಅಧಿಕಾರಿಗಳೊಡನೆ ನೇರ ಸಂಪರ್ಕ ಸಾಧಿಸಿ, ತನ್ನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಹೊರಟಿರುವ ಒಕ್ಕೂಟ ಸರ್ಕಾರದ ಈ ಕ್ರಮ, ಹಾಲಿ ಅಸ್ತಿತ್ವದಲ್ಲಿ ಇರುವ ನಮ್ಮ ಒಕ್ಕೂಟ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯೇತರ ಎಲ್ಲ ರಾಜ್ಯ ಸರ್ಕಾರಗಳೂ, ತಮಿಳುನಾಡಿನ ಈ ಕ್ರಮವನ್ನು ಅನುಸರಿಸಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...