Homeಮುಖಪುಟ‘ಹೊಸ ಶಿಕ್ಷಣ ನೀತಿ’ಯ ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ

‘ಹೊಸ ಶಿಕ್ಷಣ ನೀತಿ’ಯ ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ

- Advertisement -
- Advertisement -

ರಾಜ್ಯ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಆನ್‌ಲೈನ್‌‌ ಸಭೆಯನ್ನು ತಮಿಳುನಾಡು ಸರ್ಕಾರ ಸೋಮವಾರ ಬಹಿಷ್ಕರಿಸಿದೆ. ಕೇಂದ್ರ ಸಚಿವರು ರಾಜ್ಯದ ಸಚಿವರ ಬದಲು ಅಧಿಕಾರಿಗಳೊಂದಿಗೆ ನೇರವಾಗಿ ಸಂವಹನ ನಡೆಸುತ್ತಿರುವುದನ್ನು ಪ್ರತಿಭಟಿಸಿ ತಮಿಳುನಾಡು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

ಹೊಸ ಶಿಕ್ಷಣ ನೀತಿ-2020 ಅನುಷ್ಠಾನ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಶಿಕ್ಷಣ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರದಿಂದ ತಮ್ಮ ಇಲಾಖೆಗೆ ತಿಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪಯ್ಯಮೊಳಿ ಮಾಧ್ಯಮಗಳಿಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಅವರು ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಾಗಿನಿಂದ ಅಧಿಕಾರಿಗಳ ಮಟ್ಟದಲ್ಲಿ ಸಭೆ ಮಾಡುವ ಬದಲು ರಾಜ್ಯ ಸಚಿವರೊಂದಿಗೆ ಚರ್ಚೆ ನಡೆಸಿದರೆ ಉತ್ತಮ ಎಂಬ ಅಂಶವನ್ನು ಕೇಂದ್ರಕ್ಕೆ ಒತ್ತಿಹೇಳಿದ್ದಾರೆ. ಆದರೆ ಅವರ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ: ‘ನಾರದ ಪ್ರಕರಣ’: ಬಂಗಾಳ ಸಚಿವ ಫಿರ್ಹಾದ್ ಹಕೀಮ್‌ ಸಿಬಿಐ ವಶಕ್ಕೆ

“ಸಚಿವರ ಮಟ್ಟದಲ್ಲಿ ಚರ್ಚೆಗಳನ್ನು ನಡೆಸಬೇಕೆಂಬ ನಮ್ಮ ವಿನಂತಿಯ ಹೊರತಾಗಿಯೂ, ಕೇಂದ್ರವು ಅಧಿಕಾರಿಗಳೊಂದಿಗೆ ಮಾತ್ರ ಚರ್ಚೆ ನಡೆಸುವ ಯೋಜನೆಯನ್ನು ಹಾಕಿಕೊಂಡಿದೆ. ಇದನ್ನು ವಿರೋಧಿಸಿ, ನಾವು ಈ ಸಭೆಯನ್ನು ಬಹಿಷ್ಕರಿಸಿದ್ದೇವೆ. ಇದು ನಮ್ಮ ತತ್ವಗಳಿಗೆ ವಿರುದ್ದವಾಗಿರುವುದರಿಂದ ನಾವು ಇದನ್ನು ವಿರೋಧಿಸುತ್ತಿದ್ದೇವೆಯೆ ಹೊರತು, ಕೇಂದ್ರ ಸರ್ಕಾರಕ್ಕೆ ವಿರುದ್ದವಾಗಿ ನಿಲ್ಲಬೇಕು ಎಂಬುವುದು ನಮ್ಮ ಉದ್ದೇಶವಲ್ಲ”ಎಂದು ಸಚಿವರು ಹೇಳಿದ್ದಾರೆ.

ಮೂರು ಭಾಷಾ ನೀತಿ, 3, 5, ಮತ್ತು 8 ನೆ ತರಗತಿಗೆ ಪಬ್ಲಿಕ್ ಪರೀಕ್ಷೆ ಸೇರಿದಂತೆ, ಹೊಸ ಶಿಕ್ಷಣ ನೀತಿ-2020 ಯಲ್ಲಿ ಹಲವು ಸಮಸ್ಯೆಗಳಿವೆ ಎಂದು ಸಚಿವರು ಹೇಳಿದ್ದಾರೆ. ಡಿಎಂಕೆ ಈಗಾಗಲೇ ಹೊಸ ಶಿಕ್ಷಣ ನೀತಿ-2020 ರ ಹಲವು ಅಂಶಗಳನ್ನು ವಿರೋಧಿಸಿದೆ. ಪಕ್ಷ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಕೇಂದ್ರ ಪರಿಗಣಿಸಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ಕೊರೊನಾ ಅವಧಿಯಲ್ಲಿ ಆನ್‌ಲೈನ್ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅನುಷ್ಠಾನ ಮತ್ತು ಹನ್ನೆರಡನೇ ತರಗತಿಯ ಪರೀಕ್ಷೆಗಳು ಪ್ರಸ್ತುತ ಸನ್ನಿವೇಶದಲ್ಲಿ ಕಾರ್ಯಸಾಧ್ಯವಾಗಿದೆಯೇ ಎಂಬುದು ಕೇಂದ್ರ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗುತ್ತಿರುವ ಪ್ರಮುಖ ವಿಷಯಗಳು.

ಕೇಂದ್ರ ಸಚಿವರು ಮಂಗಳವಾರ ಕೇಂದ್ರ ವಿಶ್ವವಿದ್ಯಾಲಯಗಳ ಉಪಕುಲಪತಿಗಳೊಂದಿಗೆ ಸಂವಹನ ನಡೆಸಲು ನಿರ್ಧರಿಸಿದ್ದು, ಈ ವಾರದ ಕೊನೆಯಲ್ಲಿ ಐಐಟಿ ಮತ್ತು ಐಐಎಂಗಳ ನಿರ್ದೇಶಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಮಿಳುನಾಡಿನ ಈ ಕ್ರಮ ಸ್ವಾಗತಾರ್ಹ. ರಾಜ್ಯ ಸರ್ಕಾರಗಳನ್ನು ಕಡೆಗಣಿಸಿ, ರಾಜ್ಯ ಸರ್ಕಾರಗಳ ಅಧಿಕಾರಿಗಳೊಡನೆ ನೇರ ಸಂಪರ್ಕ ಸಾಧಿಸಿ, ತನ್ನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಹೊರಟಿರುವ ಒಕ್ಕೂಟ ಸರ್ಕಾರದ ಈ ಕ್ರಮ, ಹಾಲಿ ಅಸ್ತಿತ್ವದಲ್ಲಿ ಇರುವ ನಮ್ಮ ಒಕ್ಕೂಟ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯೇತರ ಎಲ್ಲ ರಾಜ್ಯ ಸರ್ಕಾರಗಳೂ, ತಮಿಳುನಾಡಿನ ಈ ಕ್ರಮವನ್ನು ಅನುಸರಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...