Homeಮುಖಪುಟಮೊಸರಿಗೆ ʻದಹಿʼ ಎಂದು ಬಳಸುವಂತೆ ಕೇಂದ್ರದ ಒತ್ತಡಕ್ಕೆ ಸ್ಟಾಲಿನ್, ಹೆಚ್‌ಡಿಕೆ ಕಿಡಿ: ಹಿಂದಿ ಹೇರಿಕೆಗೆ ತೀವ್ರ...

ಮೊಸರಿಗೆ ʻದಹಿʼ ಎಂದು ಬಳಸುವಂತೆ ಕೇಂದ್ರದ ಒತ್ತಡಕ್ಕೆ ಸ್ಟಾಲಿನ್, ಹೆಚ್‌ಡಿಕೆ ಕಿಡಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ

- Advertisement -
- Advertisement -

ಮೊಸರು ಬದಲಿಗೆ ಹಿಂದಿ ಪದ ದಹಿ ಎಂದು ಬಳಸಬೇಕೆಂದು ಕರ್ನಾಟಕ ಮತ್ತು ತಮಿಳುನಾಡು ಹಾಲು ಒಕ್ಕೂಟಗಳಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಫುಡ್‌ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ ಅಥಾರಿಟಿ ಆಫ್ ಇಂಡಿಯಾ) ವಿರುದ್ಧ ತಮಿಳು ನಾಡು ಸಿಎಂ ಎಂ.ಕೆ ಸ್ಟಾಲಿನ್ ಕಿಡಿಕಾರಿದ್ದಾರೆ. ಕರ್ನಾಟಕದ ಜೆಡಿಎಸ್ ಪಕ್ಷ ಸಹ ವಿರೋಧ ವ್ಯಕ್ತಪಡಿಸಿದೆ.

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾರವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ? ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು ಎಂದು ಕಿಡಿಕಾರಿದ್ದಾರೆ.

ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ಬಿಜೆಪಿ ಸರಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಮಾರಾಟವಾಗುವ ನಂದಿನಿ ಮೊಸರಿಗೆ ಹಿಂದಿಯಲ್ಲಿ ಕಡ್ಡಾಯವಾಗಿ ‘ದಹಿ’ ಎಂದು ಹಾಕಬೇಕೆಂಬ ಕೇಂದ್ರ ಸರ್ಕಾರದ ಆದೇಶ ಮೂರ್ಖತನದ ಪರಮಾವಧಿ. ನಿಧಾನವಾಗಿ ನಂದಿನಿಯನ್ನು ಅಮುಲ್ ಜೊತೆ ವಿಲೀನಗೊಳಿಸುವ ಹುನ್ನಾರ. ಈ ರೀತಿಯ ಹಿಂದಿ ಹೇರಿಕೆ ಸಲ್ಲ. ಇದನ್ನು ನಾವು ವಿರೋಧಿಸುತ್ತೇವೆ. ಈ ಆದೇಶವನ್ನು ಕೇಂದ್ರ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಇನ್ನೊಂದೆಡೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಹ ಹಿಂದಿ ಹೇರಿಕೆಯನ್ನು ವಿರೋಧಿಸಿದ್ದಾರೆ. “ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡವನ್ನು ಹಿಮ್ಮೆಟ್ಟಿಸುವ, ಮೊಸರು ಪೊಟ್ಟಣಕ್ಕೂ ಹಿಂದಿಯಲ್ಲಿ ಬರೆಯುವಂತೆ ನಿರ್ದೇಶಿಸುವ ಮಟ್ಟಕ್ಕೆ ನಾಚಿಕೆಯಿಲ್ಲದೆ ಹಿಂದಿ ಹೇರಿಕೆ ಬಂದು ನಿಂತಿದೆ. ನಮ್ಮ ಮಾತೃಭಾಷೆಯನ್ನು ನಿರ್ಲಕ್ಷಿಸುವ ಇಂತಹ ನಿರ್ಲಜ್ಜ ಹೊಣೆಗಾರರನ್ನು ದಕ್ಷಿಣದಿಂದ ಶಾಶ್ವತವಾಗಿ ಬಹಿಷ್ಕರಿಸುವುದನ್ನು ಈ ಆದೇಶ ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗೌರಿಶಂಕರ್‌ ಆಯ್ಕೆ ಅಸಿಂಧು ಆದೇಶವನ್ನ ಒಂದು ತಿಂಗಳು ಅಮಾನತಿನಲ್ಲಿರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...