Homeಮುಖಪುಟಪ್ರತಿದಿನ ಹೊಸ ಸುಳ್ಳು, ಪ್ರತಿ ಗಂಟೆಗೆ ದ್ವೇಷ ಬಿತ್ತುವ ಮೋದಿ ಬಗ್ಗೆ ಚು.ಆಯೋಗ ಮೌನವಾಗಿದೆ: ಸ್ಟ್ಯಾಲಿನ್‌...

ಪ್ರತಿದಿನ ಹೊಸ ಸುಳ್ಳು, ಪ್ರತಿ ಗಂಟೆಗೆ ದ್ವೇಷ ಬಿತ್ತುವ ಮೋದಿ ಬಗ್ಗೆ ಚು.ಆಯೋಗ ಮೌನವಾಗಿದೆ: ಸ್ಟ್ಯಾಲಿನ್‌ ತರಾಟೆ

- Advertisement -
- Advertisement -

ರಾಜ್ಯಗಳ ನಡುವೆ ಘರ್ಷಣೆಯನ್ನು ಉಂಟುಮಾಡಲು ಪ್ರಧಾನಿ ನರೇಂದ್ರ ಮೋದಿ ಕೆಳಮಟ್ಟದ ತಂತ್ರಗಳನ್ನು ಬಳಸುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಪ್ರಧಾನಿಯವರ ಬೇಜವಾಬ್ದಾರಿ ಭಾಷಣಗಳು ಮತ್ತು ಅವುಗಳನ್ನು ತಡೆಯುವಲ್ಲಿ ಚುನಾವಣಾ ಆಯೋಗದ ಮೌನವನ್ನು ದೇಶದ ನಾಗರಿಕರು ಆಘಾತ ಮತ್ತು ನಿರಾಶೆಯಿಂದ ನೋಡುತ್ತಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

ದಕ್ಷಿಣದ ರಾಜ್ಯಗಳ ನಾಯಕರು ಉತ್ತರ ಪ್ರದೇಶದ ಜನರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂಬ ಪ್ರಧಾನಿಯ ಆರೋಪಗಳನ್ನು ಪ್ರಸ್ತಾಪಿಸಿದ ಸ್ಟ್ಯಾಲಿನ್‌ ಇದು ಮೋದಿಯ ಕಾಲ್ಪನಿಕ ಕಥೆ ಮತ್ತು ಸುಳ್ಳಿನ ಚೀಲ ಎಂದು ವಾಗ್ದಾಳಿ ನಡೆಸಿದ್ದಾರೆ. ಮೋದಿ ಪ್ರಧಾನಿ ಕಚೇರಿಯ ಘನತೆಯನ್ನು ಮರೆತಿದ್ದಾರೆ. ಪ್ರತಿದಿನ ಹೊಸ ಸುಳ್ಳು ಮತ್ತು ಪ್ರತಿ ಗಂಟೆಗೆ ದ್ವೇಷದ ಬೀಜಗಳನ್ನು ಬಿತ್ತುತ್ತಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ, ಎಸ್‌ಪಿ ಮತ್ತು ಕಾಂಗ್ರೆಸ್‌ನ ದಕ್ಷಿಣ ರಾಜ್ಯಗಳ ಮಿತ್ರಪಕ್ಷಗಳು ಉತ್ತರಪ್ರದೇಶ ಮತ್ತು ಸನಾತನ ಧರ್ಮವನ್ನು ಅವಮಾನಿಸಿದೆ ಎಂದು ಮೋದಿ ಆರೋಪಿಸಿದ್ದರು.

ಉತ್ತರಪ್ರದೇಶದ ಜನರಿಗೆ ಪ್ರಯೋಜನಕಾರಿಯಾಗಿರುವ ವಿಷಯದ ಬಗ್ಗೆ ಪ್ರಧಾನಿ ಮೋದಿ ಎಂದಾದರೂ ಮಾತನಾಡಿದ್ದಾರೆಯೇ ಅಥವಾ ಯಾವುದೇ ಭರವಸೆ ನೀಡಿದ್ದಾರೆಯೇ? ಇಲ್ಲ. ಆದರೆ ಅವರು ದ್ವೇಷವನ್ನು ಹರಡುತ್ತಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿಯು ನಕಲಿ ಸುದ್ದಿಗಳನ್ನು ಬೆಂಬಲಿಸುತ್ತಿದೆ ಮತ್ತು ಪ್ರೋತ್ಸಾಹಿಸುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದು, ಯೂಟ್ಯೂಬರ್ ಮನೀಶ್ ಕಶ್ಯಪ್ ಅವರ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ. ಬಿಹಾರದ ಕಾರ್ಮಿಕರ ಮೇಲೆ ದಾಳಿ ನಡೆದಿದೆ ಎಂದು ಸುಳ್ಳು ಸುದ್ದಿ ಹಬ್ಬಿ ತಮಿಳುನಾಡು ಪೊಲೀಸರಿಂದ ಬಂಧಿತರಾಗಿದ್ದ ಕಶ್ಯಪ್ ಅವರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಮೋದಿಯವರ ದ್ವೇಷಪೂರಿತ ಪ್ರಚಾರ ವಿಫಲವಾಗಿದೆ ಮತ್ತು ಅವರ ಸರ್ಕಾರ ಕಳೆದ 10 ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಸಾಧನೆ ಏನು ಮಾಡಿಲ್ಲ, ಪ್ರಧಾನಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಲ್ಲಿ ಜಾರಿಗೆ ತಂದ ಕಲ್ಯಾಣ ಯೋಜನೆಗಳನ್ನು ಕಡಿಮೆ ಮಾಡಲು ಮುಂದಾಗಿ ತನ್ನನ್ನು ತಾನು ಮೋದಿ ಬಡವರ ಶತ್ರು ಎಂದು ಬಹಿರಂಗಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಮೋದಿ ತನ್ನ ಬಲಪಂಥೀಯ, ಪ್ರತಿಗಾಮಿ ಸಿದ್ಧಾಂತದಿಂದ ಮಹಿಳಾ ಕೇಂದ್ರಿತ ಯೋಜನೆಗಳನ್ನು ಬೆಂಬಲಿಸಲು ಹಿಂಜರಿಯುತ್ತಾರೆ. ಅವರು ಮಹಿಳೆಯರ ಪ್ರಗತಿ ಮತ್ತು ಸಾಮಾಜಿಕ ಬೆಳವಣಿಗೆಗೆ ಹೆದರುತ್ತಾರೆ. ಬಿಜೆಪಿಯ ವಿಭಜಕ ಕನಸುಗಳು ಎಂದಿಗೂ ಯಶಸ್ವಿಯಾಗುವುದಿಲ್ಲ, ಸುಳ್ಳನ್ನು ಛಿದ್ರಗೊಳಿಸಲಾಗುತ್ತದೆ ಮತ್ತು ದ್ವೇಷವನ್ನು ಹೊರಹಾಕಲಾಗುತ್ತದೆ. ಇಂಡಿಯಾ ಮೈತ್ರಿಕೂಟವು ಮೇಲುಗೈ ಸಾಧಿಸುತ್ತದೆ ಎಂದು ಸ್ಟ್ಯಾಲಿನ್‌ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...