Homeಮುಖಪುಟಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

- Advertisement -
- Advertisement -

ಏಪ್ರಿಲ್ 6 ರಂದು ತಮಿಳುನಾಡಿನಲ್ಲಿ ಮತದಾನ ಮುಗಿದಿದ್ದು, ಇದೀಗ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಇವಿಎಂ ಮತ್ತು ಸ್ಟ್ರಾಂಗ್ ರೂಮ್‌ಗಳ ಸುರಕ್ಷತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಅವರು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದು, ಇವಿಎಂ ಮತ್ತು ಸ್ಟ್ರಾಂಗ್‌ ರೂಮ್‌ಗಳ ಸುರಕ್ಷತೆಗಾಗಿ ರೂಪಿಸಿದ ಮಾರ್ಗಸೂಚಿಗಳು ತಮಿಳುನಾಡಿನಲ್ಲಿ ಅನುಸರಿಸಲಾಗುತ್ತಿಲ್ಲ ಎಂದು ದೂರಿದ್ದಾರೆ.

“ರಾಜ್ಯದಾದ್ಯಂತ ಇರುವ ಮತದಾನದ ಇವಿಎಂಗಳನ್ನು ಸಂಗ್ರಹಿಸಲಾಗಿರುವ ಅನೇಕ ಸ್ಟ್ರಾಂಗ್‌‌ ರೂಮ್‌ ಕ್ಯಾಂಪಸ್‌ಗಳಲ್ಲಿ ಒಟ್ಟು ಪ್ರೋಟೋಕಾಲ್ ಕೊರತೆ ಇದೆ” ಎಂದು ಸ್ಟಾಲಿನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ರಾತ್ರಿಯ ಸಮಯದಲ್ಲಿ “ನಿಗೂಢವಾಗಿ” ಸ್ಟ್ರಾಂಗ್‌ ರೂಂಗಳ ಒಳಗೆ ಕೆಲವು ಮುಚ್ಚಲ್ಪಟ್ಟಿರುವ ಕಂಟೈನರುಗಳು ಹೋಗಿದೆ ಎಂದು ಅವರು ಆರೋಪಿಸಿದ್ದು, ಕೆಲವು ಘಟನೆಗಳನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

“ರಾಮನಾಥಪುರಂನಲ್ಲಿ, 31 ಜನರು ಎರಡು ಲ್ಯಾಪ್‌ಟಾಪ್‌ಗಳೊಂದಿಗೆ ಸ್ಟ್ರಾಂಗ್ ರೂಮ್ ಕ್ಯಾಂಪಸ್‌ಗೆ ಪ್ರವೇಶಿಸಿದರು. ಅವರನ್ನು ವಿಚಾರಿಸಿದಾಗ ಇವಿಎಂಗಳನ್ನು ಸಂಗ್ರಹಿಸಿರುವ ಅದೇ ಮಹಡಿಯಲ್ಲಿ ಲಭ್ಯವಿರುವ ಕೆಲವು ಕಂಪ್ಯೂಟರ್‌ಗಳನ್ನು ನಿರ್ವಹಿಸಲು ಅವರು ಸ್ಟ್ರಾಂಗ್‌ ರೂಂ ಪ್ರವೇಶಿಸಿದ್ದಾರೆ ಎಂದು ತಿಳಿದುಬಂದಿದೆ” ಎಂದು ಅವರು ಹೇಳಿದ್ದಾರೆ.

“ಮತ್ತೊಂದು ಘಟನೆಯಲ್ಲಿ ಇವಿಯಂ ಇರುವ ನೇವೆಲಿಯ ಅಣ್ಣಾ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ, ಮೂವರು ಕಂಪ್ಯೂಟರ್-ತಜ್ಞರನ್ನು ಯಾವುದೋ ಕಾರಣಗಳಿಗಾಗಿ ಅಧಿಕಾರಿಗಳು ನೀಡಿದ ಪಾಸ್‌‌ನೊಂದಿಗೆ ಆವರಣಕ್ಕೆ ಪ್ರವೇಶಿಸಲು ಅವಕಾಶ ನೀಡಲಾಯಿತು” ಎಂದು ಸ್ಟಾಲಿನ್ ಪತ್ರದಲ್ಲಿ ಆರೋಪಿಸಿದ್ದಾರೆ.‘

“ಬಹಿರಂಗಪಡಿಸದ ಕಾರಣಗಳಿಗಾಗಿ ಹಲವಾರು ಅನಧಿಕೃತ ಜನರಿಗೆ ತಿರುವಳ್ಳೂರಿನಲ್ಲಿ ಸ್ಟ್ರಾಂಗ್‌ ರೂಮ್‌ಗಳಿಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಸುಮಾರು 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ಇವಿಎಂ ಮತ್ತು ಸ್ಟ್ರಾಂಗ್‌ ರೂಮ್‌ಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಯಾವುದೇ ಅನಧಿಕೃತ ವ್ಯಕ್ತಿಗೆ ಸ್ಟ್ರಾಂಗ್‌‌ ರೂಮ್‌ಗೆ ಪ್ರವೇಶಿಸಲು ಚುನಾವಣಾ ಆಯೋಗವು ಅವಕಾಶ ನೀಡಬಾರದು ಎಂದು ಡಿಎಂಕೆ ಮುಖ್ಯಸ್ಥ ಒತ್ತಾಯಿಸಿದ್ದಾರೆ.

ಯಾವುದೇ ವಾಹನಗಳು ಸ್ಟ್ರಾಂಗ್‌ ರೂಂ ಕ್ಯಾಂಪಸ್‌ಗಳಿಗೆ ಪ್ರವೇಶಿಸಲು ಚುನಾವಣಾ ಆಯೋಗವು ಅನುಮತಿಸಬಾರದು ಮತ್ತು ಸ್ಟ್ರಾಂಗ್‌ ರೂಮ್‌ಗಳಲ್ಲಿನ ಎಲ್ಲಾ ವೈಫೈ ಸಂಪರ್ಕಗಳನ್ನು ನಿರ್ಬಂಧಿಸಿ ನಿಷ್ಕ್ರಿಯಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಯೋಗವು ಅಧಿಕೃತ ವ್ಯಕ್ತಿಗಳ ಪಟ್ಟಿಯನ್ನು ಸಹ ಒದಗಿಸಬೇಕು ಮತ್ತು ಇದರಿಂದಾಗಿ ಅಭ್ಯರ್ಥಿಗಳು ಯಾವುದೇ ಅನಧಿಕೃತ ವ್ಯಕ್ತಿಗಳು ಬಲವಾದ ಕೊಠಡಿ ಕ್ಯಾಂಪಸ್‌ಗಳಿಗೆ ಪ್ರವೇಶಿಸುತ್ತಾರೆಯೇ ಎಂದು ಮೇಲ್ವಿಚಾರಣೆ ಮಾಡಬಹುದು ಮತ್ತು ಪರಿಶೀಲಿಸಬಹುದು ಎಂದು ಪಕ್ಷವು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: 2ನೆ ಬಾರಿ ಮಾಸ್ಕ್ ನಿಯಮ ಉಲ್ಲಂಘಿಸಿದರೆ 10 ಸಾವಿರ ರೂ. ದಂಡ

ವೀಡಿಯೋ ನೋಡಿ: ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...