Homeಮುಖಪುಟಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

- Advertisement -
- Advertisement -

ಏಪ್ರಿಲ್ 6 ರಂದು ತಮಿಳುನಾಡಿನಲ್ಲಿ ಮತದಾನ ಮುಗಿದಿದ್ದು, ಇದೀಗ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಇವಿಎಂ ಮತ್ತು ಸ್ಟ್ರಾಂಗ್ ರೂಮ್‌ಗಳ ಸುರಕ್ಷತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಅವರು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದು, ಇವಿಎಂ ಮತ್ತು ಸ್ಟ್ರಾಂಗ್‌ ರೂಮ್‌ಗಳ ಸುರಕ್ಷತೆಗಾಗಿ ರೂಪಿಸಿದ ಮಾರ್ಗಸೂಚಿಗಳು ತಮಿಳುನಾಡಿನಲ್ಲಿ ಅನುಸರಿಸಲಾಗುತ್ತಿಲ್ಲ ಎಂದು ದೂರಿದ್ದಾರೆ.

“ರಾಜ್ಯದಾದ್ಯಂತ ಇರುವ ಮತದಾನದ ಇವಿಎಂಗಳನ್ನು ಸಂಗ್ರಹಿಸಲಾಗಿರುವ ಅನೇಕ ಸ್ಟ್ರಾಂಗ್‌‌ ರೂಮ್‌ ಕ್ಯಾಂಪಸ್‌ಗಳಲ್ಲಿ ಒಟ್ಟು ಪ್ರೋಟೋಕಾಲ್ ಕೊರತೆ ಇದೆ” ಎಂದು ಸ್ಟಾಲಿನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ರಾತ್ರಿಯ ಸಮಯದಲ್ಲಿ “ನಿಗೂಢವಾಗಿ” ಸ್ಟ್ರಾಂಗ್‌ ರೂಂಗಳ ಒಳಗೆ ಕೆಲವು ಮುಚ್ಚಲ್ಪಟ್ಟಿರುವ ಕಂಟೈನರುಗಳು ಹೋಗಿದೆ ಎಂದು ಅವರು ಆರೋಪಿಸಿದ್ದು, ಕೆಲವು ಘಟನೆಗಳನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

“ರಾಮನಾಥಪುರಂನಲ್ಲಿ, 31 ಜನರು ಎರಡು ಲ್ಯಾಪ್‌ಟಾಪ್‌ಗಳೊಂದಿಗೆ ಸ್ಟ್ರಾಂಗ್ ರೂಮ್ ಕ್ಯಾಂಪಸ್‌ಗೆ ಪ್ರವೇಶಿಸಿದರು. ಅವರನ್ನು ವಿಚಾರಿಸಿದಾಗ ಇವಿಎಂಗಳನ್ನು ಸಂಗ್ರಹಿಸಿರುವ ಅದೇ ಮಹಡಿಯಲ್ಲಿ ಲಭ್ಯವಿರುವ ಕೆಲವು ಕಂಪ್ಯೂಟರ್‌ಗಳನ್ನು ನಿರ್ವಹಿಸಲು ಅವರು ಸ್ಟ್ರಾಂಗ್‌ ರೂಂ ಪ್ರವೇಶಿಸಿದ್ದಾರೆ ಎಂದು ತಿಳಿದುಬಂದಿದೆ” ಎಂದು ಅವರು ಹೇಳಿದ್ದಾರೆ.

“ಮತ್ತೊಂದು ಘಟನೆಯಲ್ಲಿ ಇವಿಯಂ ಇರುವ ನೇವೆಲಿಯ ಅಣ್ಣಾ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ, ಮೂವರು ಕಂಪ್ಯೂಟರ್-ತಜ್ಞರನ್ನು ಯಾವುದೋ ಕಾರಣಗಳಿಗಾಗಿ ಅಧಿಕಾರಿಗಳು ನೀಡಿದ ಪಾಸ್‌‌ನೊಂದಿಗೆ ಆವರಣಕ್ಕೆ ಪ್ರವೇಶಿಸಲು ಅವಕಾಶ ನೀಡಲಾಯಿತು” ಎಂದು ಸ್ಟಾಲಿನ್ ಪತ್ರದಲ್ಲಿ ಆರೋಪಿಸಿದ್ದಾರೆ.‘

“ಬಹಿರಂಗಪಡಿಸದ ಕಾರಣಗಳಿಗಾಗಿ ಹಲವಾರು ಅನಧಿಕೃತ ಜನರಿಗೆ ತಿರುವಳ್ಳೂರಿನಲ್ಲಿ ಸ್ಟ್ರಾಂಗ್‌ ರೂಮ್‌ಗಳಿಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಸುಮಾರು 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ಇವಿಎಂ ಮತ್ತು ಸ್ಟ್ರಾಂಗ್‌ ರೂಮ್‌ಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಯಾವುದೇ ಅನಧಿಕೃತ ವ್ಯಕ್ತಿಗೆ ಸ್ಟ್ರಾಂಗ್‌‌ ರೂಮ್‌ಗೆ ಪ್ರವೇಶಿಸಲು ಚುನಾವಣಾ ಆಯೋಗವು ಅವಕಾಶ ನೀಡಬಾರದು ಎಂದು ಡಿಎಂಕೆ ಮುಖ್ಯಸ್ಥ ಒತ್ತಾಯಿಸಿದ್ದಾರೆ.

ಯಾವುದೇ ವಾಹನಗಳು ಸ್ಟ್ರಾಂಗ್‌ ರೂಂ ಕ್ಯಾಂಪಸ್‌ಗಳಿಗೆ ಪ್ರವೇಶಿಸಲು ಚುನಾವಣಾ ಆಯೋಗವು ಅನುಮತಿಸಬಾರದು ಮತ್ತು ಸ್ಟ್ರಾಂಗ್‌ ರೂಮ್‌ಗಳಲ್ಲಿನ ಎಲ್ಲಾ ವೈಫೈ ಸಂಪರ್ಕಗಳನ್ನು ನಿರ್ಬಂಧಿಸಿ ನಿಷ್ಕ್ರಿಯಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಯೋಗವು ಅಧಿಕೃತ ವ್ಯಕ್ತಿಗಳ ಪಟ್ಟಿಯನ್ನು ಸಹ ಒದಗಿಸಬೇಕು ಮತ್ತು ಇದರಿಂದಾಗಿ ಅಭ್ಯರ್ಥಿಗಳು ಯಾವುದೇ ಅನಧಿಕೃತ ವ್ಯಕ್ತಿಗಳು ಬಲವಾದ ಕೊಠಡಿ ಕ್ಯಾಂಪಸ್‌ಗಳಿಗೆ ಪ್ರವೇಶಿಸುತ್ತಾರೆಯೇ ಎಂದು ಮೇಲ್ವಿಚಾರಣೆ ಮಾಡಬಹುದು ಮತ್ತು ಪರಿಶೀಲಿಸಬಹುದು ಎಂದು ಪಕ್ಷವು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: 2ನೆ ಬಾರಿ ಮಾಸ್ಕ್ ನಿಯಮ ಉಲ್ಲಂಘಿಸಿದರೆ 10 ಸಾವಿರ ರೂ. ದಂಡ

ವೀಡಿಯೋ ನೋಡಿ: ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...