Homeಮುಖಪುಟಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

- Advertisement -
- Advertisement -

ಏಪ್ರಿಲ್ 6 ರಂದು ತಮಿಳುನಾಡಿನಲ್ಲಿ ಮತದಾನ ಮುಗಿದಿದ್ದು, ಇದೀಗ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಇವಿಎಂ ಮತ್ತು ಸ್ಟ್ರಾಂಗ್ ರೂಮ್‌ಗಳ ಸುರಕ್ಷತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಅವರು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದು, ಇವಿಎಂ ಮತ್ತು ಸ್ಟ್ರಾಂಗ್‌ ರೂಮ್‌ಗಳ ಸುರಕ್ಷತೆಗಾಗಿ ರೂಪಿಸಿದ ಮಾರ್ಗಸೂಚಿಗಳು ತಮಿಳುನಾಡಿನಲ್ಲಿ ಅನುಸರಿಸಲಾಗುತ್ತಿಲ್ಲ ಎಂದು ದೂರಿದ್ದಾರೆ.

“ರಾಜ್ಯದಾದ್ಯಂತ ಇರುವ ಮತದಾನದ ಇವಿಎಂಗಳನ್ನು ಸಂಗ್ರಹಿಸಲಾಗಿರುವ ಅನೇಕ ಸ್ಟ್ರಾಂಗ್‌‌ ರೂಮ್‌ ಕ್ಯಾಂಪಸ್‌ಗಳಲ್ಲಿ ಒಟ್ಟು ಪ್ರೋಟೋಕಾಲ್ ಕೊರತೆ ಇದೆ” ಎಂದು ಸ್ಟಾಲಿನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ರಾತ್ರಿಯ ಸಮಯದಲ್ಲಿ “ನಿಗೂಢವಾಗಿ” ಸ್ಟ್ರಾಂಗ್‌ ರೂಂಗಳ ಒಳಗೆ ಕೆಲವು ಮುಚ್ಚಲ್ಪಟ್ಟಿರುವ ಕಂಟೈನರುಗಳು ಹೋಗಿದೆ ಎಂದು ಅವರು ಆರೋಪಿಸಿದ್ದು, ಕೆಲವು ಘಟನೆಗಳನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

“ರಾಮನಾಥಪುರಂನಲ್ಲಿ, 31 ಜನರು ಎರಡು ಲ್ಯಾಪ್‌ಟಾಪ್‌ಗಳೊಂದಿಗೆ ಸ್ಟ್ರಾಂಗ್ ರೂಮ್ ಕ್ಯಾಂಪಸ್‌ಗೆ ಪ್ರವೇಶಿಸಿದರು. ಅವರನ್ನು ವಿಚಾರಿಸಿದಾಗ ಇವಿಎಂಗಳನ್ನು ಸಂಗ್ರಹಿಸಿರುವ ಅದೇ ಮಹಡಿಯಲ್ಲಿ ಲಭ್ಯವಿರುವ ಕೆಲವು ಕಂಪ್ಯೂಟರ್‌ಗಳನ್ನು ನಿರ್ವಹಿಸಲು ಅವರು ಸ್ಟ್ರಾಂಗ್‌ ರೂಂ ಪ್ರವೇಶಿಸಿದ್ದಾರೆ ಎಂದು ತಿಳಿದುಬಂದಿದೆ” ಎಂದು ಅವರು ಹೇಳಿದ್ದಾರೆ.

“ಮತ್ತೊಂದು ಘಟನೆಯಲ್ಲಿ ಇವಿಯಂ ಇರುವ ನೇವೆಲಿಯ ಅಣ್ಣಾ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ, ಮೂವರು ಕಂಪ್ಯೂಟರ್-ತಜ್ಞರನ್ನು ಯಾವುದೋ ಕಾರಣಗಳಿಗಾಗಿ ಅಧಿಕಾರಿಗಳು ನೀಡಿದ ಪಾಸ್‌‌ನೊಂದಿಗೆ ಆವರಣಕ್ಕೆ ಪ್ರವೇಶಿಸಲು ಅವಕಾಶ ನೀಡಲಾಯಿತು” ಎಂದು ಸ್ಟಾಲಿನ್ ಪತ್ರದಲ್ಲಿ ಆರೋಪಿಸಿದ್ದಾರೆ.‘

“ಬಹಿರಂಗಪಡಿಸದ ಕಾರಣಗಳಿಗಾಗಿ ಹಲವಾರು ಅನಧಿಕೃತ ಜನರಿಗೆ ತಿರುವಳ್ಳೂರಿನಲ್ಲಿ ಸ್ಟ್ರಾಂಗ್‌ ರೂಮ್‌ಗಳಿಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಸುಮಾರು 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ಇವಿಎಂ ಮತ್ತು ಸ್ಟ್ರಾಂಗ್‌ ರೂಮ್‌ಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಯಾವುದೇ ಅನಧಿಕೃತ ವ್ಯಕ್ತಿಗೆ ಸ್ಟ್ರಾಂಗ್‌‌ ರೂಮ್‌ಗೆ ಪ್ರವೇಶಿಸಲು ಚುನಾವಣಾ ಆಯೋಗವು ಅವಕಾಶ ನೀಡಬಾರದು ಎಂದು ಡಿಎಂಕೆ ಮುಖ್ಯಸ್ಥ ಒತ್ತಾಯಿಸಿದ್ದಾರೆ.

ಯಾವುದೇ ವಾಹನಗಳು ಸ್ಟ್ರಾಂಗ್‌ ರೂಂ ಕ್ಯಾಂಪಸ್‌ಗಳಿಗೆ ಪ್ರವೇಶಿಸಲು ಚುನಾವಣಾ ಆಯೋಗವು ಅನುಮತಿಸಬಾರದು ಮತ್ತು ಸ್ಟ್ರಾಂಗ್‌ ರೂಮ್‌ಗಳಲ್ಲಿನ ಎಲ್ಲಾ ವೈಫೈ ಸಂಪರ್ಕಗಳನ್ನು ನಿರ್ಬಂಧಿಸಿ ನಿಷ್ಕ್ರಿಯಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಯೋಗವು ಅಧಿಕೃತ ವ್ಯಕ್ತಿಗಳ ಪಟ್ಟಿಯನ್ನು ಸಹ ಒದಗಿಸಬೇಕು ಮತ್ತು ಇದರಿಂದಾಗಿ ಅಭ್ಯರ್ಥಿಗಳು ಯಾವುದೇ ಅನಧಿಕೃತ ವ್ಯಕ್ತಿಗಳು ಬಲವಾದ ಕೊಠಡಿ ಕ್ಯಾಂಪಸ್‌ಗಳಿಗೆ ಪ್ರವೇಶಿಸುತ್ತಾರೆಯೇ ಎಂದು ಮೇಲ್ವಿಚಾರಣೆ ಮಾಡಬಹುದು ಮತ್ತು ಪರಿಶೀಲಿಸಬಹುದು ಎಂದು ಪಕ್ಷವು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: 2ನೆ ಬಾರಿ ಮಾಸ್ಕ್ ನಿಯಮ ಉಲ್ಲಂಘಿಸಿದರೆ 10 ಸಾವಿರ ರೂ. ದಂಡ

ವೀಡಿಯೋ ನೋಡಿ: ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...