Homeಮುಖಪುಟನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ. ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ, ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನವನ್ನು ಮಾಡುವ ಅಗತ್ಯವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಪತ್ರವನ್ನು ಅವರು ಬರೆದಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ.

ಸ್ಟಾಲಿನ್ ಅವರು, ಆಂಧ್ರಪ್ರದೇಶ, ಛತ್ತೀಸ್‌ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ತಮ್ಮ ಬೆಂಬಲವನ್ನು ನೀಡುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ಗ್ರಾಮೀಣ ಪ್ರದೇಶದವರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಕಷ್ಟ ಪಡಬಾರದು. ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ, ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನವನ್ನು ಮಾಡಬೇಕಾಗಿದೆ” ಎಂದು ಅವರು ಬರೆದಿದ್ದಾರೆ.

“ನೀಟ್‌ ಅನ್ನು ಪರಿಚಯಿಸುವ ಒಕ್ಕೂಟ ಸರ್ಕಾರದ ಕ್ರಮವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳು ಸ್ಥಾಪಿಸಿರುವ ಮತ್ತು ನಡೆಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶದ ವಿಧಾನವನ್ನು ನಿರ್ಧರಿಸುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ನಿರ್ಬಂಧಿಸುವುದು, ಸಾಂವಿಧಾನಿಕ ಅಧಿಕಾರದ ಸಮತೋಲನವನ್ನು ಉಲ್ಲಂಘಿಸುತ್ತದೆ ಎಂಬುದು ನಮ್ಮ ನಿಲುವು” ಎಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೀಟ್‌ ಆಧಾರಿತ ಪ್ರವೇಶ ಪ್ರಕ್ರಿಯೆಯು, ಕಳೆದ ಕೆಲವು ವರ್ಷಗಳಲ್ಲಿ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆಯೇ ಎಂದು ತಮಿಳುನಾಡು ಸರ್ಕಾರ ಅಧ್ಯಯನ ನಡೆಸಿತ್ತು. ಈ ಅಧ್ಯಯನಕ್ಕೆ, ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಕೆ ರಾಜನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿ ಸಲ್ಲಿಸಿದ ವರದಿಯನ್ನು ಸ್ಟಾಲಿನ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಲಗತ್ತಿಸಿದ್ದಾರೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿವಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

  2. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...