Homeಮುಖಪುಟನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ. ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ, ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನವನ್ನು ಮಾಡುವ ಅಗತ್ಯವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಪತ್ರವನ್ನು ಅವರು ಬರೆದಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ.

ಸ್ಟಾಲಿನ್ ಅವರು, ಆಂಧ್ರಪ್ರದೇಶ, ಛತ್ತೀಸ್‌ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ತಮ್ಮ ಬೆಂಬಲವನ್ನು ನೀಡುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ಗ್ರಾಮೀಣ ಪ್ರದೇಶದವರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಕಷ್ಟ ಪಡಬಾರದು. ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ, ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನವನ್ನು ಮಾಡಬೇಕಾಗಿದೆ” ಎಂದು ಅವರು ಬರೆದಿದ್ದಾರೆ.

“ನೀಟ್‌ ಅನ್ನು ಪರಿಚಯಿಸುವ ಒಕ್ಕೂಟ ಸರ್ಕಾರದ ಕ್ರಮವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳು ಸ್ಥಾಪಿಸಿರುವ ಮತ್ತು ನಡೆಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶದ ವಿಧಾನವನ್ನು ನಿರ್ಧರಿಸುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ನಿರ್ಬಂಧಿಸುವುದು, ಸಾಂವಿಧಾನಿಕ ಅಧಿಕಾರದ ಸಮತೋಲನವನ್ನು ಉಲ್ಲಂಘಿಸುತ್ತದೆ ಎಂಬುದು ನಮ್ಮ ನಿಲುವು” ಎಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೀಟ್‌ ಆಧಾರಿತ ಪ್ರವೇಶ ಪ್ರಕ್ರಿಯೆಯು, ಕಳೆದ ಕೆಲವು ವರ್ಷಗಳಲ್ಲಿ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆಯೇ ಎಂದು ತಮಿಳುನಾಡು ಸರ್ಕಾರ ಅಧ್ಯಯನ ನಡೆಸಿತ್ತು. ಈ ಅಧ್ಯಯನಕ್ಕೆ, ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಕೆ ರಾಜನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿ ಸಲ್ಲಿಸಿದ ವರದಿಯನ್ನು ಸ್ಟಾಲಿನ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಲಗತ್ತಿಸಿದ್ದಾರೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿವಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

  2. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...