Homeಮುಖಪುಟನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ. ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ, ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನವನ್ನು ಮಾಡುವ ಅಗತ್ಯವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಪತ್ರವನ್ನು ಅವರು ಬರೆದಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ.

ಸ್ಟಾಲಿನ್ ಅವರು, ಆಂಧ್ರಪ್ರದೇಶ, ಛತ್ತೀಸ್‌ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ತಮ್ಮ ಬೆಂಬಲವನ್ನು ನೀಡುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ಗ್ರಾಮೀಣ ಪ್ರದೇಶದವರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಕಷ್ಟ ಪಡಬಾರದು. ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ, ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನವನ್ನು ಮಾಡಬೇಕಾಗಿದೆ” ಎಂದು ಅವರು ಬರೆದಿದ್ದಾರೆ.

“ನೀಟ್‌ ಅನ್ನು ಪರಿಚಯಿಸುವ ಒಕ್ಕೂಟ ಸರ್ಕಾರದ ಕ್ರಮವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳು ಸ್ಥಾಪಿಸಿರುವ ಮತ್ತು ನಡೆಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶದ ವಿಧಾನವನ್ನು ನಿರ್ಧರಿಸುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ನಿರ್ಬಂಧಿಸುವುದು, ಸಾಂವಿಧಾನಿಕ ಅಧಿಕಾರದ ಸಮತೋಲನವನ್ನು ಉಲ್ಲಂಘಿಸುತ್ತದೆ ಎಂಬುದು ನಮ್ಮ ನಿಲುವು” ಎಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೀಟ್‌ ಆಧಾರಿತ ಪ್ರವೇಶ ಪ್ರಕ್ರಿಯೆಯು, ಕಳೆದ ಕೆಲವು ವರ್ಷಗಳಲ್ಲಿ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆಯೇ ಎಂದು ತಮಿಳುನಾಡು ಸರ್ಕಾರ ಅಧ್ಯಯನ ನಡೆಸಿತ್ತು. ಈ ಅಧ್ಯಯನಕ್ಕೆ, ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಕೆ ರಾಜನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿ ಸಲ್ಲಿಸಿದ ವರದಿಯನ್ನು ಸ್ಟಾಲಿನ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಲಗತ್ತಿಸಿದ್ದಾರೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿವಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

  2. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...