Homeಮುಖಪುಟನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ. ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ, ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನವನ್ನು ಮಾಡುವ ಅಗತ್ಯವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಪತ್ರವನ್ನು ಅವರು ಬರೆದಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ.

ಸ್ಟಾಲಿನ್ ಅವರು, ಆಂಧ್ರಪ್ರದೇಶ, ಛತ್ತೀಸ್‌ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ತಮ್ಮ ಬೆಂಬಲವನ್ನು ನೀಡುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ಗ್ರಾಮೀಣ ಪ್ರದೇಶದವರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಕಷ್ಟ ಪಡಬಾರದು. ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ, ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನವನ್ನು ಮಾಡಬೇಕಾಗಿದೆ” ಎಂದು ಅವರು ಬರೆದಿದ್ದಾರೆ.

“ನೀಟ್‌ ಅನ್ನು ಪರಿಚಯಿಸುವ ಒಕ್ಕೂಟ ಸರ್ಕಾರದ ಕ್ರಮವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳು ಸ್ಥಾಪಿಸಿರುವ ಮತ್ತು ನಡೆಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶದ ವಿಧಾನವನ್ನು ನಿರ್ಧರಿಸುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ನಿರ್ಬಂಧಿಸುವುದು, ಸಾಂವಿಧಾನಿಕ ಅಧಿಕಾರದ ಸಮತೋಲನವನ್ನು ಉಲ್ಲಂಘಿಸುತ್ತದೆ ಎಂಬುದು ನಮ್ಮ ನಿಲುವು” ಎಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೀಟ್‌ ಆಧಾರಿತ ಪ್ರವೇಶ ಪ್ರಕ್ರಿಯೆಯು, ಕಳೆದ ಕೆಲವು ವರ್ಷಗಳಲ್ಲಿ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆಯೇ ಎಂದು ತಮಿಳುನಾಡು ಸರ್ಕಾರ ಅಧ್ಯಯನ ನಡೆಸಿತ್ತು. ಈ ಅಧ್ಯಯನಕ್ಕೆ, ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಕೆ ರಾಜನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿ ಸಲ್ಲಿಸಿದ ವರದಿಯನ್ನು ಸ್ಟಾಲಿನ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಲಗತ್ತಿಸಿದ್ದಾರೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿವಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

  2. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...