Homeಮುಖಪುಟನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ. ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ, ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನವನ್ನು ಮಾಡುವ ಅಗತ್ಯವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಪತ್ರವನ್ನು ಅವರು ಬರೆದಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ.

ಸ್ಟಾಲಿನ್ ಅವರು, ಆಂಧ್ರಪ್ರದೇಶ, ಛತ್ತೀಸ್‌ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ತಮ್ಮ ಬೆಂಬಲವನ್ನು ನೀಡುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ಗ್ರಾಮೀಣ ಪ್ರದೇಶದವರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಕಷ್ಟ ಪಡಬಾರದು. ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ, ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನವನ್ನು ಮಾಡಬೇಕಾಗಿದೆ” ಎಂದು ಅವರು ಬರೆದಿದ್ದಾರೆ.

“ನೀಟ್‌ ಅನ್ನು ಪರಿಚಯಿಸುವ ಒಕ್ಕೂಟ ಸರ್ಕಾರದ ಕ್ರಮವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳು ಸ್ಥಾಪಿಸಿರುವ ಮತ್ತು ನಡೆಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶದ ವಿಧಾನವನ್ನು ನಿರ್ಧರಿಸುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ನಿರ್ಬಂಧಿಸುವುದು, ಸಾಂವಿಧಾನಿಕ ಅಧಿಕಾರದ ಸಮತೋಲನವನ್ನು ಉಲ್ಲಂಘಿಸುತ್ತದೆ ಎಂಬುದು ನಮ್ಮ ನಿಲುವು” ಎಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೀಟ್‌ ಆಧಾರಿತ ಪ್ರವೇಶ ಪ್ರಕ್ರಿಯೆಯು, ಕಳೆದ ಕೆಲವು ವರ್ಷಗಳಲ್ಲಿ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆಯೇ ಎಂದು ತಮಿಳುನಾಡು ಸರ್ಕಾರ ಅಧ್ಯಯನ ನಡೆಸಿತ್ತು. ಈ ಅಧ್ಯಯನಕ್ಕೆ, ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಕೆ ರಾಜನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿ ಸಲ್ಲಿಸಿದ ವರದಿಯನ್ನು ಸ್ಟಾಲಿನ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಲಗತ್ತಿಸಿದ್ದಾರೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿವಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

  2. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...