Homeಮುಖಪುಟನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ. ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ, ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನವನ್ನು ಮಾಡುವ ಅಗತ್ಯವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಪತ್ರವನ್ನು ಅವರು ಬರೆದಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ.

ಸ್ಟಾಲಿನ್ ಅವರು, ಆಂಧ್ರಪ್ರದೇಶ, ಛತ್ತೀಸ್‌ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ತಮ್ಮ ಬೆಂಬಲವನ್ನು ನೀಡುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ಗ್ರಾಮೀಣ ಪ್ರದೇಶದವರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಕಷ್ಟ ಪಡಬಾರದು. ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ, ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನವನ್ನು ಮಾಡಬೇಕಾಗಿದೆ” ಎಂದು ಅವರು ಬರೆದಿದ್ದಾರೆ.

“ನೀಟ್‌ ಅನ್ನು ಪರಿಚಯಿಸುವ ಒಕ್ಕೂಟ ಸರ್ಕಾರದ ಕ್ರಮವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳು ಸ್ಥಾಪಿಸಿರುವ ಮತ್ತು ನಡೆಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶದ ವಿಧಾನವನ್ನು ನಿರ್ಧರಿಸುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ನಿರ್ಬಂಧಿಸುವುದು, ಸಾಂವಿಧಾನಿಕ ಅಧಿಕಾರದ ಸಮತೋಲನವನ್ನು ಉಲ್ಲಂಘಿಸುತ್ತದೆ ಎಂಬುದು ನಮ್ಮ ನಿಲುವು” ಎಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೀಟ್‌ ಆಧಾರಿತ ಪ್ರವೇಶ ಪ್ರಕ್ರಿಯೆಯು, ಕಳೆದ ಕೆಲವು ವರ್ಷಗಳಲ್ಲಿ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆಯೇ ಎಂದು ತಮಿಳುನಾಡು ಸರ್ಕಾರ ಅಧ್ಯಯನ ನಡೆಸಿತ್ತು. ಈ ಅಧ್ಯಯನಕ್ಕೆ, ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಕೆ ರಾಜನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿ ಸಲ್ಲಿಸಿದ ವರದಿಯನ್ನು ಸ್ಟಾಲಿನ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಲಗತ್ತಿಸಿದ್ದಾರೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿವಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

  2. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...