Homeಮುಖಪುಟನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ. ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ, ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನವನ್ನು ಮಾಡುವ ಅಗತ್ಯವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಪತ್ರವನ್ನು ಅವರು ಬರೆದಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ.

ಸ್ಟಾಲಿನ್ ಅವರು, ಆಂಧ್ರಪ್ರದೇಶ, ಛತ್ತೀಸ್‌ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ತಮ್ಮ ಬೆಂಬಲವನ್ನು ನೀಡುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ಗ್ರಾಮೀಣ ಪ್ರದೇಶದವರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಕಷ್ಟ ಪಡಬಾರದು. ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ, ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನವನ್ನು ಮಾಡಬೇಕಾಗಿದೆ” ಎಂದು ಅವರು ಬರೆದಿದ್ದಾರೆ.

“ನೀಟ್‌ ಅನ್ನು ಪರಿಚಯಿಸುವ ಒಕ್ಕೂಟ ಸರ್ಕಾರದ ಕ್ರಮವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳು ಸ್ಥಾಪಿಸಿರುವ ಮತ್ತು ನಡೆಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶದ ವಿಧಾನವನ್ನು ನಿರ್ಧರಿಸುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ನಿರ್ಬಂಧಿಸುವುದು, ಸಾಂವಿಧಾನಿಕ ಅಧಿಕಾರದ ಸಮತೋಲನವನ್ನು ಉಲ್ಲಂಘಿಸುತ್ತದೆ ಎಂಬುದು ನಮ್ಮ ನಿಲುವು” ಎಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೀಟ್‌ ಆಧಾರಿತ ಪ್ರವೇಶ ಪ್ರಕ್ರಿಯೆಯು, ಕಳೆದ ಕೆಲವು ವರ್ಷಗಳಲ್ಲಿ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆಯೇ ಎಂದು ತಮಿಳುನಾಡು ಸರ್ಕಾರ ಅಧ್ಯಯನ ನಡೆಸಿತ್ತು. ಈ ಅಧ್ಯಯನಕ್ಕೆ, ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಕೆ ರಾಜನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿ ಸಲ್ಲಿಸಿದ ವರದಿಯನ್ನು ಸ್ಟಾಲಿನ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಲಗತ್ತಿಸಿದ್ದಾರೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿವಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

  2. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...