Homeಮುಖಪುಟನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ. ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ, ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನವನ್ನು ಮಾಡುವ ಅಗತ್ಯವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಪತ್ರವನ್ನು ಅವರು ಬರೆದಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ.

ಸ್ಟಾಲಿನ್ ಅವರು, ಆಂಧ್ರಪ್ರದೇಶ, ಛತ್ತೀಸ್‌ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ತಮ್ಮ ಬೆಂಬಲವನ್ನು ನೀಡುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ಗ್ರಾಮೀಣ ಪ್ರದೇಶದವರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಕಷ್ಟ ಪಡಬಾರದು. ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ, ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನವನ್ನು ಮಾಡಬೇಕಾಗಿದೆ” ಎಂದು ಅವರು ಬರೆದಿದ್ದಾರೆ.

“ನೀಟ್‌ ಅನ್ನು ಪರಿಚಯಿಸುವ ಒಕ್ಕೂಟ ಸರ್ಕಾರದ ಕ್ರಮವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳು ಸ್ಥಾಪಿಸಿರುವ ಮತ್ತು ನಡೆಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶದ ವಿಧಾನವನ್ನು ನಿರ್ಧರಿಸುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ನಿರ್ಬಂಧಿಸುವುದು, ಸಾಂವಿಧಾನಿಕ ಅಧಿಕಾರದ ಸಮತೋಲನವನ್ನು ಉಲ್ಲಂಘಿಸುತ್ತದೆ ಎಂಬುದು ನಮ್ಮ ನಿಲುವು” ಎಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೀಟ್‌ ಆಧಾರಿತ ಪ್ರವೇಶ ಪ್ರಕ್ರಿಯೆಯು, ಕಳೆದ ಕೆಲವು ವರ್ಷಗಳಲ್ಲಿ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆಯೇ ಎಂದು ತಮಿಳುನಾಡು ಸರ್ಕಾರ ಅಧ್ಯಯನ ನಡೆಸಿತ್ತು. ಈ ಅಧ್ಯಯನಕ್ಕೆ, ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಕೆ ರಾಜನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿ ಸಲ್ಲಿಸಿದ ವರದಿಯನ್ನು ಸ್ಟಾಲಿನ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಲಗತ್ತಿಸಿದ್ದಾರೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿವಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

  2. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...