Homeಮುಖಪುಟನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ. ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ, ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನವನ್ನು ಮಾಡುವ ಅಗತ್ಯವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಪತ್ರವನ್ನು ಅವರು ಬರೆದಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ.

ಸ್ಟಾಲಿನ್ ಅವರು, ಆಂಧ್ರಪ್ರದೇಶ, ಛತ್ತೀಸ್‌ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ತಮ್ಮ ಬೆಂಬಲವನ್ನು ನೀಡುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ಗ್ರಾಮೀಣ ಪ್ರದೇಶದವರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಕಷ್ಟ ಪಡಬಾರದು. ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ, ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನವನ್ನು ಮಾಡಬೇಕಾಗಿದೆ” ಎಂದು ಅವರು ಬರೆದಿದ್ದಾರೆ.

“ನೀಟ್‌ ಅನ್ನು ಪರಿಚಯಿಸುವ ಒಕ್ಕೂಟ ಸರ್ಕಾರದ ಕ್ರಮವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳು ಸ್ಥಾಪಿಸಿರುವ ಮತ್ತು ನಡೆಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶದ ವಿಧಾನವನ್ನು ನಿರ್ಧರಿಸುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ನಿರ್ಬಂಧಿಸುವುದು, ಸಾಂವಿಧಾನಿಕ ಅಧಿಕಾರದ ಸಮತೋಲನವನ್ನು ಉಲ್ಲಂಘಿಸುತ್ತದೆ ಎಂಬುದು ನಮ್ಮ ನಿಲುವು” ಎಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೀಟ್‌ ಆಧಾರಿತ ಪ್ರವೇಶ ಪ್ರಕ್ರಿಯೆಯು, ಕಳೆದ ಕೆಲವು ವರ್ಷಗಳಲ್ಲಿ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆಯೇ ಎಂದು ತಮಿಳುನಾಡು ಸರ್ಕಾರ ಅಧ್ಯಯನ ನಡೆಸಿತ್ತು. ಈ ಅಧ್ಯಯನಕ್ಕೆ, ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಕೆ ರಾಜನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿ ಸಲ್ಲಿಸಿದ ವರದಿಯನ್ನು ಸ್ಟಾಲಿನ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಲಗತ್ತಿಸಿದ್ದಾರೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿವಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

  2. ತಮಿಳುನಾಡಿನ ಮೆಡಿಕಲ್ ಲಾಬಿಗೆ ಮಣಿದು ಸ್ಟಾಲಿನ್ ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದೊಡನೆಯೇ ನೀಟ್ ರದ್ದು ಮಾಡುವುದಾಗಿ ಆಣೆ ಪ್ರಮಾಣ ಮಾಡಿ ಹೇಳಿದ್ದರು. ಅಧಿಕಾರಕ್ಕೋಸ್ಕರವಾಗಿ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು ಸ್ಟಾಲಿನ್. ಚುನಾವಣಾ ಆಶ್ವಾಸನೆಯನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಈಗ ಅವರಿಗೆ ಅರಿವಾಗಿದೆ ಹೀಗಾಗಿ ಇಂತಹ ಪ್ರಚೋದಿಸುವ ಆಟಗಳನ್ನು ಆಡುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದರೆ ತಮಿಳುನಾಡಿನಲ್ಲಿ ಮೆಡಿಕಲ್ ಕಾಲೇಜುಗಳು ಅಧಿಕ, ಅದರಲ್ಲಿ ಸ್ವತಹ ಸ್ಟಾಲಿನ್ ಕುಟುಂಬಕ್ಕೆ ಮೂರು ಕಾಲೇಜುಗಳು ಇವೆ. ಅವರ ಸಚಿವ ಸಂಪುಟದಲ್ಲಿ ಇರುವ ಸುಮಾರು ನಾಲ್ಕು ಕಿಂತ ಹೆಚ್ಚು ಸಚಿವರುಗಳಿಗೆ ಎರಡಕ್ಕಿಂತ ಅಧಿಕ ಮೆಡಿಕಲ್ ಕಾಲೇಜುಗಳು ಇವೆ. ಕೋಟ್ಯಾಂತರ ರೂಪಾಯಿ ಹಣ ಹೂಡಿ ಈಗ ನೀಟ್ ಗೆ ಸೀಟ್ ಗಳನ್ನು ಬಿಟ್ಟುಕೊಡಲು ಅವರುಗಳು ತಯಾರಿಲ್ಲ. ವಿಧಾನಸಭೆಯಲ್ಲಿ ತಾವು ಮಂಡಿಸಿದ ಮಸೂದೆಗೆ ಯಾವುದೇ ಬೆಲೆ ಇಲ್ಲ ಎಂದು ಅರಿವಾದ ಕ್ಷಣವೇ, ಇಂತಹ ದೇಶವಿರೋಧಿ ಚಟುವಟಿಕೆಗೆ ಸ್ಟಾಲಿನ್ ಮುಂದಾಗಿದ್ದಾರೆ. ನೀಟ್ ರದ್ದು ಮಾಡಲು ಆಗದಿದ್ದರೆ ಅದನ್ನು ಒಪ್ಪಿಕೊಂಡು ಮುಂದೆ ಹೋಗುವುದನ್ನು ಬಿಟ್ಟು ಸ್ಟಾಲಿನ್ ಈ ರೀತಿ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಾಮಾನ್ಯ ಮಕ್ಕಳ ವೈದ್ಯಕೀಯ ಕನಸನ್ನು ನುಚ್ಚು ನೂರಾಗಿ ಸುವುದೇ ಇದರ ಹಿಂದಿನ ಮರ್ಮವಾಗಿದೆ. ಬಡ ಜನರ ಪರವಾಗಿ ನಿಲ್ಲಬೇಕಿದ್ದ ನಾನುಗೌರಿ ಸ್ಟಾಲಿನ್ ಅಂತಹ ಕಾರ್ಪೊರೇಟ್ ಪಕ್ಷ ಹಿಂದೆ ನಿಂತಿರುವುದು ಬೀಸರದ ವಿಷಯ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...