Homeಮುಖಪುಟಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಕೈಗೆ "ಮುದ್ರೆ"

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಕೈಗೆ “ಮುದ್ರೆ”

- Advertisement -
- Advertisement -

ಕರ್ನಾಟಕ ಸರ್ಕಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು “ಗೃಹ ಬಂಧನ …” ಎಂದು ಅಳಿಸಲಾಗದ ಶಾಯಿ ಬಳಸಿ “ಮುದ್ರೆ” ಮಾಡುತ್ತಿದೆ ಎಂದು ತಿಳಿದುಬಂದಿದೆ. ಈ ಮುದ್ರೆಯನ್ನು ಎಡಗೈಯ ಹಿಂಭಾಗಕ್ಕೆ ಒತ್ತಲಾಗುತ್ತದೆ. ಈಗಾಗಲೇ ಮಹಾರಾಷ್ಟ್ರ ಸರಕಾರವೂ ಈ ನಿಯಮವನ್ನು ತಂದಿದೆ.

“ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅಳಿಸಲಾಗದ ಶಾಯಿಯೊಂದಿಗೆ ‘ಗೃಹ ಬಂಧನ’ ಮುದ್ರೆ ಪ್ರಾರಂಭವಾಗಿದೆ. ಈ ಮುದ್ರೆಯೂ ಕ್ಯಾರೆಂಟೈನ್‌ನ ಕೊನೆಯ ದಿನಾಂಕವನ್ನು ಒಳಗೊಂಡಿದೆ” ಎಂದು ಎಎನ್‌ಐ ಟ್ವೀಟ್ ಮಾಡಿದೆ.

ರಕ್ಷಣಾತ್ಮಕವಾಗಿರುವುದಕ್ಕೆ ಹೆಮ್ಮೆ ಪಡುತ್ತೇನೆ. ಬೆಂಗಳೂರು, ಹೋಮ್‌ ಕ್ವಾರಂಟೈನ್ಡ್‌ ಏಪ್ರಿಲ್‌ 03, 2020ರವರೆಗೂ ಎಂದು ಮುದ್ರೆಯಲ್ಲಿ ಬರೆಯಲಾಗಿದೆ.

ಈಗಾಗಲೇ ದೇಶದಲ್ಲಿ ಸುಮಾರು 170 ದೃಡೀಕೃತ ಕೊರೊನ ವೈರಸ್ ಪ್ರಕರಣಗಳಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕೇರಳ ಮತ್ತು ಮಹಾರಾಷ್ಟ್ರ ಅತೀ ಪೀಡಿತ ರಾಜ್ಯಗಳಾಗಿದ್ದು, ಕ್ರಮವಾಗಿ 42 ಮತ್ತು 25 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 14 ಪ್ರಕರಣಗಳು ದಾಖಲಾಗಿವೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ರಾಜ್ಯದಲ್ಲಿ ಕೊರೊನ ವೈರಸನ್ನು ನಿಭಾಯಿಸಲು ಎಲ್ಲಾ ಸಭೆ ಸಮಾರಂಭಗಳನ್ನು ಮಾರ್ಚ್ 31 ರ ವರೆಗೆ ಮುಂದೂಡುವಂತೆ ಆದೇಶಿಸಿದ್ದಾರೆ.

ಕೊರೊನ ವೈರಸ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್ ಜಿಲ್ಲೆಯ ಆಹಾರ ಮಾರುಕಟ್ಟೆಯಲ್ಲಿ ಹುಟ್ಟಿಕೊಂಡಿದೆ ಎಂದು ನಂಬಲಾಗಿದೆ. ಡಬ್ಲ್ಯುಎಚ್‌ಒ ಮಾಹಿತಿಯ ಪ್ರಕಾರ, ವಿಶ್ವಾದ್ಯಂತ 8,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 2 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...