Homeಮುಖಪುಟಕುಂಭ ಮೇಳದಲ್ಲಿ ಕಾಲ್ತುಳಿತ | ಕನಿಷ್ಠ 15 ಜನರು ಸಾವು ; ವರದಿ

ಕುಂಭ ಮೇಳದಲ್ಲಿ ಕಾಲ್ತುಳಿತ | ಕನಿಷ್ಠ 15 ಜನರು ಸಾವು ; ವರದಿ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಬುಧವಾರ (ಜ.29) ಬೆಳಗ್ಗಿನ ಜಾವ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

‘ಮೌನಿ ಅಮಾವಾಸ್ಯೆ’ ಪ್ರಯುಕ್ತ ಪವಿತ್ರ ಸ್ನಾನಕ್ಕಾಗಿ (ಎರಡನೇ ಶಾಹಿ ಸ್ನಾನ) ತ್ರಿವೇಣಿ ಸಂಗಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಪ್ರದೇಶದ ಸುಮಾರು 12 ಕಿ.ಮೀ ವ್ಯಾಪ್ತಿಯಲ್ಲಿ ನದಿ ತೀರದಲ್ಲಿ ಮಹಾ ಕುಂಭ ಮೇಳ ಪ್ರಯುಕ್ತ ಲಕ್ಷಾಂತರ ಜನರು ಸೇರಿದ್ದರು. ಬುಧವಾರ ಬೆಳಗಿನ ಜಾವ 1ರಿಂದ 2 ಗಂಟೆಯ ಸುಮಾರಿಗೆ ಕಾಲ್ತುಳಿತ ದುರಂತ ಸಂಭವಿಸಿದೆ. ಈ ವೇಳೆ ಹಲವಾರು ಜನರು ಗಾಯಗೊಂಡಿದ್ದು, ಅನೇಕ ಕುಟುಂಬಗಳು ಬೇರ್ಪಟ್ಟಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸುಮಾರು 10 ಮಂದಿ ಸಾವನ್ನಪ್ಪಿರುವ ಶಂಕೆಯಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಘಟನೆ ನಡೆದ ತಕ್ಷಣ ಆಂಬ್ಯಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಕುಂಭಮೇಳ ಪ್ರದೇಶದ ತಾತ್ಕಾಲಿಕ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು. ಎರಡನೇ ಪವಿತ್ರ ಸ್ನಾನವನ್ನು ತಾತ್ಕಾಲಿಕ ನಿಲ್ಲಿಸಲಾಯಿತು. ಸ್ನಾನ ಮಾಡಿದವರು ಸ್ಥಳದಿಂದ ದೂರ ಹೋಗುವಂತೆ ಅಧಿಕಾರಿಗಳು ಮನವಿ ಮಾಡಿದರು ಎಂದು ವರದಿ ಹೇಳಿದೆ.

ಬೆಳಗಾವಿಯ ಮೂವರು ಸಾವು :

ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಬೆಳಗಾವಿಯ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50), ಅವರ ಪುತ್ರಿ ಮೇಘಾ ಹತ್ತರವಾಠ (18) ಮತ್ತು ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಎಂಬವರು ಸಾವನ್ನಪ್ಪಿದ್ದಾಗಿ ಪ್ರಜಾವಾಣಿ ವರದಿ ಮಾಡಿದೆ.

ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು?

ಕೆಲವು ಭಕ್ತರು ಬ್ಯಾರಿಕೇಡ್‌ಗಳನ್ನು ದಾಟಿ ಹಾರಿದ್ದರಿಂದ ಕಾಲ್ತುಳಿತ ಉಂಟಾಯಿತು. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಹಾ ಕುಂಭ ಮೇಳದ ಬಗ್ಗೆ ವದಂತಿಗಳನ್ನು ಹರಡದಂತೆ ಅವರು ಮನವಿ ಮಾಡಿದ್ದಾರೆ.

ವಿಐಪಿ ಸಂಪ್ರದಾಯಕ್ಕೆ ಲಗಾಮು ಹಾಕಿ: ರಾಹುಲ್ ಗಾಂಧಿ

ಕಾಲ್ತುಳಿತ ದುರಂತಕ್ಕೆ ಅಸಮರ್ಪಕ ವ್ಯವಸ್ಥೆ ಮತ್ತು ಸಾಮಾನ್ಯ ಭಕ್ತರ ಬದಲಿಗೆ ವಿಐಪಿ ಚಲನವಲನಕ್ಕೆ ವಿಶೇಷ ಆದ್ಯತೆ ನೀಡಿರುವುದು ಕಾರಣ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರಗಳ ವಿರುದ್ದ ಕಿಡಿಕಾರಿದ್ದಾರೆ. ವಿಐಪಿ ಸಂಪ್ರದಾಯಕ್ಕೆ ಸಂಪೂರ್ಣ ಲಗಾಮು ಹಾಕಬೇಕಿದ್ದು, ಭಕ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕಿದೆ ಎಂದಿದ್ದಾರೆ.

ಸಾವು ನೋವುಗಳ ಸಂಖ್ಯೆಯ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಮೌನ ವಹಿಸಿದ್ದರೂ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅನೇಕ ಕೇಂದ್ರ ಸಚಿವರು, ಹಲವಾರು ಮುಖ್ಯಮಂತ್ರಿಗಳು ಮತ್ತು ಪಕ್ಷಾತೀತವಾಗಿ ವಿರೋಧ ಪಕ್ಷದ ನಾಯಕರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಕಾಲ್ತುಳಿತದಿಂದಾಗಿ ಮುಂದೂಡಲ್ಪಟ್ಟಿದ್ದ ಅಖಾಡಗಳ ಸಾಂಪ್ರದಾಯಿಕ ಸ್ನಾನ ‘ಅಮೃತ ಸ್ನಾನ’ ಮಧ್ಯಾಹ್ನ 2.30ಕ್ಕೆ ಪುನರಾರಂಭವಾಗಿದೆ ಎಂದು ದಿ ಹಿಂದೂ ವರದಿ ಹೇಳಿದೆ.

ತ್ರಿವಳಿ ತಲಾಖ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...