Homeಮುಖಪುಟಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ; ಒಂಬತ್ತು ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ; ಒಂಬತ್ತು ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

- Advertisement -
- Advertisement -

ಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಾಹಿತಿಯ ಪ್ರಕಾರ, ಭಾನುವಾರ ಮುಂಜಾನೆ ಮುಂಬೈನಿಂದ ಗೋರಖ್‌ಪುರಕ್ಕೆ ಹೋಗುತ್ತಿದ್ದ ರೈಲು ಪ್ಲಾಟ್‌ಫಾರ್ಮ್ ತಲುಪಿದಾಗ ಈ ಘಟನೆ ಸಂಭವಿಸಿದೆ. ಆದರೆ, ಪ್ರಯಾಣಿಕರು ರೈಲು ಹತ್ತಲು ಆತುರಪಡುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಸುಮಾರು ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಮುಂಬೈನ ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದ್ರಜಿತ್ ಸಹಾನಿ ಮತ್ತು ನೂರ್ ಮೊಹಮ್ಮದ್ ಶೇಖ್ ಎಂದು ಗುರುತಿಸಲಾದ ಇಬ್ಬರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ನಾಗರಿಕ ಅಧಿಕಾರಿಗಳ ಪ್ರಕಾರ, ಭಾನುವಾರದಂದು ಘಟನೆ ವರದಿಯಾಗಿದೆ, ಹಬ್ಬದ ಋತುವಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಾಂದ್ರಾ-ಗೋರಖ್‌ಪುರ ಅಂತ್ಯೋದಯ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಣಿಸಲು ಜನರಲ್ ಕೋಚ್‌ಗಳಿಗೆ ಹತ್ತಲು ಪ್ಲಾಟ್‌ಫಾರ್ಮ್ ನಂ. 1 ಕ್ಕೆ ಧಾವಿಸಿದ್ದರು.

ಪ್ರಯಾಣಿಕರು ಅಂತ್ಯೋದಯ ಎಕ್ಸ್‌ಪ್ರೆಸ್ ಅನ್ನು ಹತ್ತಲು ಪ್ರಯತ್ನಿಸಿದಾಗ (ಎಲ್ಲಾ 22 ಸಾಮಾನ್ಯ ದರ್ಜೆಯ ಬೋಗಿಗಳನ್ನು ಹೊಂದಿರುವ) ಒಳಗಿನಿಂದ ಕೋಚ್‌ಗಳ ಬಾಗಿಲುಗಳನ್ನು ಲಾಕ್ ಮಾಡಿದಾಗ ಪರಿಸ್ಥಿತಿ ಹದಗೆಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲಿನಲ್ಲಿ ಆಸನವನ್ನು ಹಿಡಿಯುವ ಪ್ರಯತ್ನದಲ್ಲಿ, ಕೆಲವರು ಪ್ಲಾಟ್‌ಫಾರ್ಮ್‌ನಲ್ಲಿ ಇನ್ನೂ ನಿಲ್ಲದಿರುವಾಗ ರೈಲು ಹತ್ತಲು ಪ್ರಯತ್ನಿಸಿದರು. ಇದರಿಂದ ಎರಡು ಬೋಗಿಗಳ ನಡುವಿನ ಜಾಗದಲ್ಲಿ ಜನರು ಪ್ಲಾಟ್‌ಫಾರ್ಮ್ ಮೇಲೆ ಬೀಳಲು ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.

“ಸಾಮಾನ್ಯವಾಗಿ, ಪ್ಲಾಟ್‌ಫಾರ್ಮ್‌ನಲ್ಲಿ ರೈಲು ನಿಂತ ನಂತರ ಕೋಚ್‌ಗಳ ಬಾಗಿಲು ತೆರೆಯಲಾಗುತ್ತದೆ ಮತ್ತು ಪ್ರಯಾಣಿಕರು ನಂತರ ಸರದಿಯಲ್ಲಿ ಹತ್ತುತ್ತಾರೆ” ಎಂದು ಡಬ್ಲ್ಯುಆರ್ ಮೂಲಗಳು ತಿಳಿಸಿವೆ.

ಘಟನೆಯ ನಂತರ, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಮತ್ತು ಸ್ಥಳೀಯ ಜನರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ವರ್ಗಾಯಿಸಿದರು. ಅಲ್ಲಿ ಅವರು ಪ್ರಸ್ತುತ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಥಾಣೆ ಸೆಂಟ್ರಲ್ ರೈಲ್ವೆ ಡೆಪ್ಯುಟಿ ಕಮಿಷನರ್ ಮನೋಜ್ ನಾನಾ ಪಾಟೀಲ್, ಪೊಲೀಸರು ಸತ್ಯಾಸತ್ಯತೆಗಾಗಿ ವಿಚಾರಣೆ ನಡೆಸುತ್ತಿದ್ದಾರೆ. “ಇದು ಪ್ರತಿ ಭಾನುವಾರ ಓಡುವ ಸಾಪ್ತಾಹಿಕ ರೈಲು. ರೈಲು ಕಾಯ್ದಿರಿಸಲಾಗಿಲ್ಲ.. ಸಾಮಾನ್ಯ ಸಾರ್ವಜನಿಕರು ಈ ರೈಲಿನ ಟಿಕೆಟ್ ಸುಲಭವಾಗಿ ಖರೀದಿಸಬಹುದು. ಆದ್ದರಿಂದ, ಈ ರೈಲಿಗೆ ಸಾಮಾನ್ಯವಾಗಿ ವಿಪರೀತ ರಶ್ ಇರುತ್ತದೆ.. ನಮ್ಮ ತಂಡವು ಇಲ್ಲಿ ಹಾಜರಿದ್ದರು, ಆದರೆ ಜನರು ಹಠಾತ್ತನೆ ಆಸನಗಳಿಗಾಗಿ ಧಾವಿಸಿದರು.. ಘಟನೆಯಲ್ಲಿ ಯಾರೂ ಗಂಭೀರವಾಗಿ ಗಾಯಗೊಂಡಿಲ್ಲ.. ನಾವು ವಿಚಾರಣೆ ನಡೆಸುತ್ತಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ; ದೆಹಲಿ: ಪಾಲಿಕಾ ಬಜಾರ್‌ನಲ್ಲಿ ಅನುಮಾನಾಸ್ಪದ ಚೈನೀಸ್ ಜಾಮರ್‌ಗಳು ಪತ್ತೆ, ತನಿಖೆ ಕೈಗೆತ್ತಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...