Homeಮುಖಪುಟಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ; ಒಂಬತ್ತು ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ; ಒಂಬತ್ತು ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

- Advertisement -
- Advertisement -

ಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಾಹಿತಿಯ ಪ್ರಕಾರ, ಭಾನುವಾರ ಮುಂಜಾನೆ ಮುಂಬೈನಿಂದ ಗೋರಖ್‌ಪುರಕ್ಕೆ ಹೋಗುತ್ತಿದ್ದ ರೈಲು ಪ್ಲಾಟ್‌ಫಾರ್ಮ್ ತಲುಪಿದಾಗ ಈ ಘಟನೆ ಸಂಭವಿಸಿದೆ. ಆದರೆ, ಪ್ರಯಾಣಿಕರು ರೈಲು ಹತ್ತಲು ಆತುರಪಡುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಸುಮಾರು ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಮುಂಬೈನ ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದ್ರಜಿತ್ ಸಹಾನಿ ಮತ್ತು ನೂರ್ ಮೊಹಮ್ಮದ್ ಶೇಖ್ ಎಂದು ಗುರುತಿಸಲಾದ ಇಬ್ಬರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ನಾಗರಿಕ ಅಧಿಕಾರಿಗಳ ಪ್ರಕಾರ, ಭಾನುವಾರದಂದು ಘಟನೆ ವರದಿಯಾಗಿದೆ, ಹಬ್ಬದ ಋತುವಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಾಂದ್ರಾ-ಗೋರಖ್‌ಪುರ ಅಂತ್ಯೋದಯ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಣಿಸಲು ಜನರಲ್ ಕೋಚ್‌ಗಳಿಗೆ ಹತ್ತಲು ಪ್ಲಾಟ್‌ಫಾರ್ಮ್ ನಂ. 1 ಕ್ಕೆ ಧಾವಿಸಿದ್ದರು.

ಪ್ರಯಾಣಿಕರು ಅಂತ್ಯೋದಯ ಎಕ್ಸ್‌ಪ್ರೆಸ್ ಅನ್ನು ಹತ್ತಲು ಪ್ರಯತ್ನಿಸಿದಾಗ (ಎಲ್ಲಾ 22 ಸಾಮಾನ್ಯ ದರ್ಜೆಯ ಬೋಗಿಗಳನ್ನು ಹೊಂದಿರುವ) ಒಳಗಿನಿಂದ ಕೋಚ್‌ಗಳ ಬಾಗಿಲುಗಳನ್ನು ಲಾಕ್ ಮಾಡಿದಾಗ ಪರಿಸ್ಥಿತಿ ಹದಗೆಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲಿನಲ್ಲಿ ಆಸನವನ್ನು ಹಿಡಿಯುವ ಪ್ರಯತ್ನದಲ್ಲಿ, ಕೆಲವರು ಪ್ಲಾಟ್‌ಫಾರ್ಮ್‌ನಲ್ಲಿ ಇನ್ನೂ ನಿಲ್ಲದಿರುವಾಗ ರೈಲು ಹತ್ತಲು ಪ್ರಯತ್ನಿಸಿದರು. ಇದರಿಂದ ಎರಡು ಬೋಗಿಗಳ ನಡುವಿನ ಜಾಗದಲ್ಲಿ ಜನರು ಪ್ಲಾಟ್‌ಫಾರ್ಮ್ ಮೇಲೆ ಬೀಳಲು ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.

“ಸಾಮಾನ್ಯವಾಗಿ, ಪ್ಲಾಟ್‌ಫಾರ್ಮ್‌ನಲ್ಲಿ ರೈಲು ನಿಂತ ನಂತರ ಕೋಚ್‌ಗಳ ಬಾಗಿಲು ತೆರೆಯಲಾಗುತ್ತದೆ ಮತ್ತು ಪ್ರಯಾಣಿಕರು ನಂತರ ಸರದಿಯಲ್ಲಿ ಹತ್ತುತ್ತಾರೆ” ಎಂದು ಡಬ್ಲ್ಯುಆರ್ ಮೂಲಗಳು ತಿಳಿಸಿವೆ.

ಘಟನೆಯ ನಂತರ, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಮತ್ತು ಸ್ಥಳೀಯ ಜನರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ವರ್ಗಾಯಿಸಿದರು. ಅಲ್ಲಿ ಅವರು ಪ್ರಸ್ತುತ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಥಾಣೆ ಸೆಂಟ್ರಲ್ ರೈಲ್ವೆ ಡೆಪ್ಯುಟಿ ಕಮಿಷನರ್ ಮನೋಜ್ ನಾನಾ ಪಾಟೀಲ್, ಪೊಲೀಸರು ಸತ್ಯಾಸತ್ಯತೆಗಾಗಿ ವಿಚಾರಣೆ ನಡೆಸುತ್ತಿದ್ದಾರೆ. “ಇದು ಪ್ರತಿ ಭಾನುವಾರ ಓಡುವ ಸಾಪ್ತಾಹಿಕ ರೈಲು. ರೈಲು ಕಾಯ್ದಿರಿಸಲಾಗಿಲ್ಲ.. ಸಾಮಾನ್ಯ ಸಾರ್ವಜನಿಕರು ಈ ರೈಲಿನ ಟಿಕೆಟ್ ಸುಲಭವಾಗಿ ಖರೀದಿಸಬಹುದು. ಆದ್ದರಿಂದ, ಈ ರೈಲಿಗೆ ಸಾಮಾನ್ಯವಾಗಿ ವಿಪರೀತ ರಶ್ ಇರುತ್ತದೆ.. ನಮ್ಮ ತಂಡವು ಇಲ್ಲಿ ಹಾಜರಿದ್ದರು, ಆದರೆ ಜನರು ಹಠಾತ್ತನೆ ಆಸನಗಳಿಗಾಗಿ ಧಾವಿಸಿದರು.. ಘಟನೆಯಲ್ಲಿ ಯಾರೂ ಗಂಭೀರವಾಗಿ ಗಾಯಗೊಂಡಿಲ್ಲ.. ನಾವು ವಿಚಾರಣೆ ನಡೆಸುತ್ತಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ; ದೆಹಲಿ: ಪಾಲಿಕಾ ಬಜಾರ್‌ನಲ್ಲಿ ಅನುಮಾನಾಸ್ಪದ ಚೈನೀಸ್ ಜಾಮರ್‌ಗಳು ಪತ್ತೆ, ತನಿಖೆ ಕೈಗೆತ್ತಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...