Homeಮುಖಪುಟಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: ಕನಿಷ್ಠ ಮೂವರು ಸಾವು, ಹಲವರಿಗೆ ಗಾಯ

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: ಕನಿಷ್ಠ ಮೂವರು ಸಾವು, ಹಲವರಿಗೆ ಗಾಯ

- Advertisement -
- Advertisement -

ಭಾನುವಾರ (ಜೂನ್ 29, 2025) ಮುಂಜಾನೆ ಒಡಿಶಾದ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಒಡಿಶಾದ ಬೋಳಗಾರ್‌ನ ಬಸಂತಿ ಸಾಹು ಮತ್ತು ಪ್ರೇಮಕಾಂತ್ ಮೊಹಾಂತಿ ಹಾಗೂ ಬಲಿಪಟ್ಣದ ಪ್ರವತಿ ದಾಸ್ ಎಂದು ಗುರುತಿಸಲಾಗಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಲಕ್ಷಾಂತರ ಜನರು ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಶನಿವಾರ ರಾತ್ರಿಯಿಡೀ ಜನರು ಜಮಾಯಿಸಿದ್ದರು. ಆದರೆ, ಪಹಾಡ ಆಚರಣೆ (ದೇವತೆಗಳ ವಿಶ್ರಾಂತಿ) ಕಾರಣ ರಾತ್ರಿ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಭಾನುವಾರ ಮುಂಜಾನೆ ಮತ್ತೆ ದರ್ಶನ ಪ್ರಾರಂಭಗೊಂಡಾಗ ಪರಿಸ್ಥಿತಿ ಅಸ್ತವ್ಯಸ್ತವಾಯಿತು. ಮುಂಜಾನೆ ಸುಮಾರು 4 ಗಂಟೆಯ ಹೊತ್ತಿಗೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತು ಎಂದು ದಿ ಹಿಂದೂ ವರದಿ ಮಾಡಿದೆ.

“ಮೂವರು ಸಾವನ್ನಪ್ಪಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಆರು ಮಂದಿ ಗಾಯಗೊಂಡವರ ಸ್ಥಿತಿ ಸ್ಥಿರವಾಗಿದೆ” ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಭಾನುವಾರ ತಿಳಿಸಿದ್ದಾರೆ.

ರಾತ್ರಿಯಿಡೀ ಪೊಲೀಸ್ ಸಿಬ್ಬಂದಿಯ ಸಂಪೂರ್ಣ ಅನುಪಸ್ಥಿತಿಯೇ ದುರಂತಕ್ಕೆ ಕಾರಣ ಎಂದು ಮೃತರ ಸಂಬಂಧಿಕರು ಮತ್ತು ಹಲವಾರು ಭಕ್ತರು ಆರೋಪಿಸಿದ್ದಾರೆ. ಆದಾಗ್ಯೂ, ರಥಗಳ ಸುತ್ತಲೂ ಸಾಕಷ್ಟು ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ಪುರಿ ಪೊಲೀಸ್ ವರಿಷ್ಠಾಧಿಕಾರಿ ವಿನಿತ್ ಅಗರ್ವಾಲ್ ಸಮರ್ಥಿಸಿಕೊಂಡಿದ್ದಾರೆ.

ಒಡಿಶಾದ ಬಿಜೆಪಿ ಸರ್ಕಾರ ಸಚಿವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ತಮ್ಮ ಆಪ್ತರು ಮತ್ತು ಬೆಂಬಲಿಗರು ರಥಗಳು ಇರುವ ಜಾಗಕ್ಕೆ ಹೋಗಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದರಿಂದಾಗಿ ಮತ್ತಷ್ಟು ಅವ್ಯವಸ್ಥೆ ಉಂಟಾಗಿದೆ ಎಂದು ದಿ ಹಿಂದೂ ವರದಿ ಹೇಳಿದೆ.

ಘಟನೆ ಸಂಬಂಧ ಒಡಿಶಾದ ಪ್ರತಿಪಕ್ಷಗಳು ಮುಖ್ಯಮಂತ್ರಿ ಮೋಹನ್ ಮಾಝಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದಿದೆ.

“ರಥಯಾತ್ರೆಯ ಸಮಯದಲ್ಲಿ ಜನಸಂದಣಿಯನ್ನು ನಿರ್ವಹಿಸುವಲ್ಲಿನ ವೈಫಲ್ಯದಿಂದ ನೂರಾರು ಜನರು ಗಾಯಗೊಂಡ ಒಂದು ದಿನದ ನಂತರ, ಇಂದು ಕಾಲ್ತುಳಿತ ಸಂಭವಿಸಿದೆ. ಇದು ರಥಯಾತ್ರೆಗೆ ಆಗಮಿಸಿದ ಜನರಿಗೆ ಸರಿಯಾದ ವ್ಯವಸ್ಥೆ ಮಾಡಿಕೊಡುವಲ್ಲಿ ಸರ್ಕಾರದ ಸ್ಪಷ್ಟ ಅಸಮರ್ಥತೆಯನ್ನು ಬಹಿರಂಗಪಡಿಸುತ್ತದೆ” ಎಂದು ಮಾಜಿ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಾರೆ.

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಭಕ್ತ ಚರಣ್ ದಾಸ್ ಕಾಲ್ತುಳಿತ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಈ ಘಟನೆಯ ಬಗ್ಗೆ ಕಾಲಮಿತಿಯೊಳಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯಪಾಲ ಹರಿ ಬಾಬು ಕಂಭಂಪತಿ ಮತ್ತು ಸಿಎಂ ಮೋಹನ್ ಮಾಝಿ ಅವರು ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸನ್ಯಾಸಿ ವಿರುದ್ಧ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...