Homeಮುಖಪುಟಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: ಕನಿಷ್ಠ ಮೂವರು ಸಾವು, ಹಲವರಿಗೆ ಗಾಯ

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: ಕನಿಷ್ಠ ಮೂವರು ಸಾವು, ಹಲವರಿಗೆ ಗಾಯ

- Advertisement -
- Advertisement -

ಭಾನುವಾರ (ಜೂನ್ 29, 2025) ಮುಂಜಾನೆ ಒಡಿಶಾದ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಒಡಿಶಾದ ಬೋಳಗಾರ್‌ನ ಬಸಂತಿ ಸಾಹು ಮತ್ತು ಪ್ರೇಮಕಾಂತ್ ಮೊಹಾಂತಿ ಹಾಗೂ ಬಲಿಪಟ್ಣದ ಪ್ರವತಿ ದಾಸ್ ಎಂದು ಗುರುತಿಸಲಾಗಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಲಕ್ಷಾಂತರ ಜನರು ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಶನಿವಾರ ರಾತ್ರಿಯಿಡೀ ಜನರು ಜಮಾಯಿಸಿದ್ದರು. ಆದರೆ, ಪಹಾಡ ಆಚರಣೆ (ದೇವತೆಗಳ ವಿಶ್ರಾಂತಿ) ಕಾರಣ ರಾತ್ರಿ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಭಾನುವಾರ ಮುಂಜಾನೆ ಮತ್ತೆ ದರ್ಶನ ಪ್ರಾರಂಭಗೊಂಡಾಗ ಪರಿಸ್ಥಿತಿ ಅಸ್ತವ್ಯಸ್ತವಾಯಿತು. ಮುಂಜಾನೆ ಸುಮಾರು 4 ಗಂಟೆಯ ಹೊತ್ತಿಗೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತು ಎಂದು ದಿ ಹಿಂದೂ ವರದಿ ಮಾಡಿದೆ.

“ಮೂವರು ಸಾವನ್ನಪ್ಪಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಆರು ಮಂದಿ ಗಾಯಗೊಂಡವರ ಸ್ಥಿತಿ ಸ್ಥಿರವಾಗಿದೆ” ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಭಾನುವಾರ ತಿಳಿಸಿದ್ದಾರೆ.

ರಾತ್ರಿಯಿಡೀ ಪೊಲೀಸ್ ಸಿಬ್ಬಂದಿಯ ಸಂಪೂರ್ಣ ಅನುಪಸ್ಥಿತಿಯೇ ದುರಂತಕ್ಕೆ ಕಾರಣ ಎಂದು ಮೃತರ ಸಂಬಂಧಿಕರು ಮತ್ತು ಹಲವಾರು ಭಕ್ತರು ಆರೋಪಿಸಿದ್ದಾರೆ. ಆದಾಗ್ಯೂ, ರಥಗಳ ಸುತ್ತಲೂ ಸಾಕಷ್ಟು ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ಪುರಿ ಪೊಲೀಸ್ ವರಿಷ್ಠಾಧಿಕಾರಿ ವಿನಿತ್ ಅಗರ್ವಾಲ್ ಸಮರ್ಥಿಸಿಕೊಂಡಿದ್ದಾರೆ.

ಒಡಿಶಾದ ಬಿಜೆಪಿ ಸರ್ಕಾರ ಸಚಿವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ತಮ್ಮ ಆಪ್ತರು ಮತ್ತು ಬೆಂಬಲಿಗರು ರಥಗಳು ಇರುವ ಜಾಗಕ್ಕೆ ಹೋಗಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದರಿಂದಾಗಿ ಮತ್ತಷ್ಟು ಅವ್ಯವಸ್ಥೆ ಉಂಟಾಗಿದೆ ಎಂದು ದಿ ಹಿಂದೂ ವರದಿ ಹೇಳಿದೆ.

ಘಟನೆ ಸಂಬಂಧ ಒಡಿಶಾದ ಪ್ರತಿಪಕ್ಷಗಳು ಮುಖ್ಯಮಂತ್ರಿ ಮೋಹನ್ ಮಾಝಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದಿದೆ.

“ರಥಯಾತ್ರೆಯ ಸಮಯದಲ್ಲಿ ಜನಸಂದಣಿಯನ್ನು ನಿರ್ವಹಿಸುವಲ್ಲಿನ ವೈಫಲ್ಯದಿಂದ ನೂರಾರು ಜನರು ಗಾಯಗೊಂಡ ಒಂದು ದಿನದ ನಂತರ, ಇಂದು ಕಾಲ್ತುಳಿತ ಸಂಭವಿಸಿದೆ. ಇದು ರಥಯಾತ್ರೆಗೆ ಆಗಮಿಸಿದ ಜನರಿಗೆ ಸರಿಯಾದ ವ್ಯವಸ್ಥೆ ಮಾಡಿಕೊಡುವಲ್ಲಿ ಸರ್ಕಾರದ ಸ್ಪಷ್ಟ ಅಸಮರ್ಥತೆಯನ್ನು ಬಹಿರಂಗಪಡಿಸುತ್ತದೆ” ಎಂದು ಮಾಜಿ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಾರೆ.

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಭಕ್ತ ಚರಣ್ ದಾಸ್ ಕಾಲ್ತುಳಿತ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಈ ಘಟನೆಯ ಬಗ್ಗೆ ಕಾಲಮಿತಿಯೊಳಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯಪಾಲ ಹರಿ ಬಾಬು ಕಂಭಂಪತಿ ಮತ್ತು ಸಿಎಂ ಮೋಹನ್ ಮಾಝಿ ಅವರು ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸನ್ಯಾಸಿ ವಿರುದ್ಧ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...