Homeಮುಖಪುಟಕಾಲ್ತುಳಿತ ಪ್ರಕರಣ - ನಟ ಅಲ್ಲು ಅರ್ಜುನ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು

ಕಾಲ್ತುಳಿತ ಪ್ರಕರಣ – ನಟ ಅಲ್ಲು ಅರ್ಜುನ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು

- Advertisement -
- Advertisement -

ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ-2 ಸಿನಿಮಾದ ಮೊದಲ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರಿಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ ನಂತರ, ಕೆಳ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಹಾಗಾಗಿ ಅವರು ತೆಲಂಗಾಣ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಕಾಲ್ತುಳಿತ ಪ್ರಕರಣ

ಇದಕ್ಕೂ ಮುನ್ನ ಮೃತ ಮಹಿಳೆ ರೇವತಿಯ ಪತಿ ಭಾಸ್ಕರ್ ಪ್ರತಿಕ್ರಿಯಿಸಿ, ತಮ್ಮ ಪತ್ನಿಯ ಸಾವಿಗೆ ನಟನ ತಪ್ಪಿಲ್ಲ, ಅಗತ್ಯವಿದ್ದರೆ ಪ್ರಕರಣವನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದ್ದಾರೆ. ಅಲ್ಲು ಅರ್ಜುನ್ ಬಂಧನದ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಅವರು ಹೇಳಿದ್ದಾರೆ. ಬಿಡುಗಡೆಯಾದ ಮೇಲೆ 50,000 ರೂಪಾಯಿಗಳ ವೈಯಕ್ತಿಕ ಬಾಂಡ್ ನೀಡುವಂತೆ ಮತ್ತು ವಿಚಾರಣಾ ನ್ಯಾಯಾಲಯದಲ್ಲಿ ನಿಯಮಿತ ಜಾಮೀನಿಗಾಗಿ ಹೊಸ ಅರ್ಜಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಕೇಳಿದೆ.ಕಾಲ್ತುಳಿತ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಟನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) 3(5) ಜೊತೆಗಿನ ಸೆಕ್ಷನ್ 105(B) ಮತ್ತು 118(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಈ ಸೆಕ್ಷನ್‌ಗಳು ಅನ್ವಯವಾಗುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ನಟ ಅಲ್ಲು ಅರ್ಜುನ್ ಅವರು ಘಟನೆಗೆ ಪ್ರಾಥಮಿಕವಾಗಿ ಹೊಣೆಗಾರರಾಗಲು ಸಾಧ್ಯವಿಲ್ಲ ಎಂದು ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಜುವ್ವಾಡಿ ಶ್ರೀದೇವಿ ಹೇಳಿದ್ದಾರೆ. ಅಗತ್ಯ ಅನುಮತಿಯನ್ನು ಪಡೆದುಕೊಂಡ ನಂತರ ಅವರು ಕಾರ್ಯಕ್ರಮಕ್ಕೆ ಹಾಜರಾಗಿದ್ದರು ಎಂದು ತಿಳಿಸಿದ್ದಾರೆ.

ಜೀವನ ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಒತ್ತಿಹೇಳಿದ ನ್ಯಾಯಮೂರ್ತಿ, ನಟನಾಗಿರುವ ಕಾರಣಕ್ಕೆ ಅರ್ಜುನ್ ಅವರಿಂದ ಈ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಸೂಚಿಸಿದರು. “ಈ ಭೂಮಿಯ ಪ್ರಜೆಯಾಗಿ, ಅವರಿಗೂ ಬದುಕುವ ಮತ್ತು ಸ್ವಾತಂತ್ರ್ಯದ ಹಕ್ಕಿದೆ” ಎಂದು ನ್ಯಾಯಮೂರ್ತಿ ಶ್ರೀದೇವಿ ಹೇಳಿದ್ದು, ಈ ಪರಿಸ್ಥಿತಿಯಲ್ಲಿ ನ್ಯಾಯಾಂಗ ಬಂಧನವು ಅನಗತ್ಯವಾಗಿದೆ ಎಂದು ಹೇಳಿದ್ದಾರೆ. ಸಂತ್ರಸ್ತರ ಕುಟುಂಬದ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ ನ್ಯಾಯಾಲಯವು, ಉದ್ದೇಶ ಅಥವಾ ಸ್ಪಷ್ಟ ಪುರಾವೆಗಳಿಲ್ಲದೆ ಗಂಭೀರ ಆರೋಪಗಳನ್ನು ವಿಧಿಸುವುದು ಅನ್ಯಾಯವಾಗಿದೆ ಎಂದು ಒತ್ತಿಹೇಳಿದೆ.

ಈ ನಡುವೆ, ಅಲ್ಲು ಅರ್ಜುನ್ ಬಂಧನದ ವಿರುದ್ಧ ತೆಲಂಗಾಣದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಬಿಆರ್‌ಎಸ್ ನಾಯಕ ಕೆಟಿ ರಾಮರಾವ್ ಟೀಕಿಸಿದ್ದಾರೆ. ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಇದು ಆಡಳಿತಗಾರರ ಅಭದ್ರತೆಯ ಪರಾಕಾಷ್ಠೆ. ಅಲ್ಲು ಅರ್ಜುನ್ ಅವರನ್ನು ಸಾಮಾನ್ಯ ಕ್ರಿಮಿನಲ್ ಎಂದು ಪರಿಗಣಿಸಬೇಕು. ವಿಶೇಷವಾಗಿ, ಅವರು ನೇರವಾಗಿ ಜವಾಬ್ದಾರರಲ್ಲದ ಕಾರಣಕ್ಕಾಗಿ ಅವರನ್ನು ಆರೋಪಿ ಎಂದು ಕರೆಯುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಕೆಟಿಆರ್ ಹೇಳಿಕೆಯ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ, ನಟನ ಬಂಧನದಲ್ಲಿ ತಮ್ಮ ಅಥವಾ ತಮ್ಮ ಸರ್ಕಾರದ ಯಾವುದೇ ಪಾತ್ರವಿಲ್ಲ. ಅವರ ಬಂಧನದಲ್ಲಿ ಯಾವುದೇ ರಾಜಕೀಯ ಕಾರಣವನ್ನು ಹುಡುಕಬೇಕಾಗಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಅವರು ಹೇಳಿದ್ದಾರೆ.

ಶುಕ್ರವಾರ ನಟ ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಥಿಯೇಟರ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು. ಅಲ್ಲಿ ಅವರ ‘ಪುಷ್ಪಾ 2: ದಿ ರೂಲ್’ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತಿತ್ತು. ಘಟನೆಯಲ್ಲಿ ಕಳೆದ ವಾರ ಒಬ್ಬ ಮಹಿಳೆ ಸಾವನ್ನಪ್ಪಿ, ಆಕೆಯ ಪುತ್ರನಿಗೆ ಗಂಭೀರವಾಗಿ ಗಾಯಗಳಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಅಲ್ಲು ಅರ್ಜುನ್ ಅವರನ್ನು ಜುಬಿಲಿ ಹಿಲ್ಸ್‌ನಲ್ಲಿರುವ ಅವರ ಮನೆಯಿಂದ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು.

ಇದನ್ನೂ ಓದಿ: ಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

ಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...