Homeಕರ್ನಾಟಕಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

- Advertisement -
- Advertisement -

ಜೂನ್ 4ರಂದು ಬುಧವಾರ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ದುರಂತ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

13 ವಸ್ಸಿನಿಂದ 40 ವರ್ಷದೊಳಗಿನ 11 ಯುವಜನರು ಸಾವನ್ನಪ್ಪಿದ್ದು, ಸುಮಾರು 47 ಜನರು ಗಾಯಗೊಂಡಿರುವ ಘಟನೆಯಿಂದ ರಾಜ್ಯ ಸರ್ಕಾರಕ್ಕೆ ರಾಷ್ಟ್ರಮಟ್ಟದಲ್ಲಿ ಮುಜುಗರ ಉಂಟಾಗಿದೆ. ಇದರಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.

ಅವಘಡ ನಡೆದ ದಿನವೇ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಿಎಂ, ನಿರೀಕ್ಷೆಗೂ ಮೀರಿ ಜನರು ಬಂದಿದ್ದರಿಂದ ದುರ್ಘಟನೆ ಆಗಿದೆ. ಸರ್ಕಾರದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಮಾತ್ರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿ ಸುಮಾರು 1 ಲಕ್ಷ ಜನರು ಸೇರಿದ್ದರು. ಆದರೆ, ಯಾವುದೇ ಅವಘಡ ಆಗಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸರ್ಕಾರ ಕಾರ್ಯಕ್ರಮ ಆಯೋಜಿಸಿರಲಿಲ್ಲ. ಅದು ಕ್ರಿಕೆಟ್ ಅಸೋಸಿಯೇಷನ್ ಮತ್ತು ಆರ್‌ಸಿಬಿಯ ಕಾರ್ಯಕ್ರಮ ಎಂದು ಹೇಳಿದ್ದರು.

ಜೊತೆಗೆ, ಮೃತ 11 ಜನರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುತ್ತೇವೆ. ಅವರಿಗೆ ಬೇಕಾದ ಆಹಾರ ಮತ್ತು ಸಾರಿಗೆ ವ್ಯವಸ್ಥೆ ಮಾಡುತ್ತೇವೆ. ಘಟನೆ ಬಗ್ಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾಜಿಸ್ಟ್ರೀರಿಯಲ್ ವಿಚಾರಣೆ ಮಾಡಿಸುತ್ತೇವೆ ಎಂದು ಘೋಷಿಸಿದ್ದರು.

ಮ್ಯಾಜಿಸ್ಟ್ರೀರಿಯಲ್ ವಿಚಾರಣೆಗೆ ವಿಚಾರಣಾಧಿಕಾರಿಯಾಗಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ್ ಜಿ ಅವರನ್ನು ನೇಮಕ ಮಾಡಲಾಗಿದೆ.

ಮರುದಿನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಘಟನೆ ಉಲ್ಲೇಖಿಸಿ ಕಣ್ಣೀರು ಹಾಕಿದ್ದರು. ಸರ್ಕಾರದಿಂದ ಯಾವುದೇ ತಪ್ಪಾಗಿಲ್ಲ. ನಾನು ನಮ್ಮ ಪೊಲೀಸರನ್ನು ದೂರುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ಗುರುವಾರ ಸಂಜೆ ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಕಾಲ್ತುಳಿತ ದುರಂತದ ಬಗ್ಗೆ ಗಂಭೀರ ಚರ್ಚೆ ನಡೆದು ಸರ್ಕಾರ ಕೆಲವೊಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಕಾಲ್ತುಳಿತ ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ಏಕಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದೆ.

ಆರ್‌ಸಿಬಿ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸಿಎಂ ಸೂಚನೆ ನೀಡಿದ್ದರು. ಅದರಂತೆ ಎಫ್‌ಐಆರ್ ಕೂಡಾ ದಾಖಲಾಗಿತ್ತು.

ಶುಕ್ರವಾರ ಬೆಳಿಗ್ಗೆ ಅಪರಾಧ ವಿಭಾಗ ಮತ್ತು ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್‌ಎ ಮ್ಯಾನೇಜ್‌ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಹಾಗೂ ಕಿರಣ್ ಮತ್ತು ಸುಮಂತ್‌ ಎಂಬವರನ್ನು ಬಂಧಿಸಿದ್ದಾರೆ.

ದುರಂತಕ್ಕೆ ಹೊಣೆಯಾಗಿಸಿ ಬೆಂಗಳೂರು ನಗರ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಆಯುಕ್ತ ಡಾ. ಬಿ. ದಯಾನಂದ, ಬೆಂಗಳೂರು ಪಶ್ಚಿಮ ವಿಭಾಗದ ಇನ್ಸ್‌ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶೇಖರ್ ಎಚ್ ತೆಕ್ಕಣ್ಣನವರ್, ಕಬ್ಬನ್ ಪಾರ್ಕ್ ಸಹಾಯಕ ಪೊಲೀಸ್ ಆಯುಕ್ತ ಸಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎ.ಕೆ ಗಿರೀಶ್ ಅವರನ್ನು ಸರ್ಕಾರ ಅಮಾನತು ಮಾಡಿದೆ.

ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡು ಬಂದಿದೆ. ಈ ಕಾರಣಕ್ಕೆ ಅಮಾನತುಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಗುರುವಾರ ಕರ್ನಾಟಕ ಹೈಕೋರ್ಟ್ ದುರಂತ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡು ಸರ್ಕಾರದಿಂದ ವರದಿ ಕೇಳಿತ್ತು. ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಾಥಮಿಕ ವರದಿ ಸಲ್ಲಿಸಿದ ಬಳಿಕ, 9 ಪ್ರಶ್ನೆಗಳನ್ನು ಮುಂದಿಟ್ಟು ವಸ್ತುಸ್ಥಿತಿಯ ಕುರಿತ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ.

ಈ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ದ ಮುಡಾ ಪ್ರಕರಣದಲ್ಲಿ ಕೋರ್ಟ್ ಮೊರೆ ಹೋಗಿರುವ ಸ್ನೇಹಮಯಿ ಕೃಷ್ಣ ಅವರು ಕಾಲ್ತುಳಿತ ದುರಂತಕ್ಕೆ ಸಿಎಂ, ಡಿಸಿಎಂ ಅವರನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳುವಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಪ್ರತ್ಯೇಕ ದೂರು ನೀಡಿದ್ದಾರೆ.

ಶುಕ್ರವಾರ ಮಧ್ಯಾಹದ ಬಳಿಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್ ಅವರನ್ನು ಹುದ್ದೆಯಿಂದ ವಜಾ ಮಾಡಲಾಗಿದೆ. ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾಯಿಸಲಾಗಿದೆ.

ಮುಖ್ಯಮಂತ್ರಿಯ ಆದೇಶದಂತೆ ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಎಫ್‌ಐರ್‌ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಸಂಸ್ಥೆಯ ಅಧ್ಯಕ್ಷ ರಘುರಾಮ್‌ ಭಟ್‌, ಕಾರ್ಯದರ್ಶಿ ಎ ಶಂಕರ್‌, ಖಜಾಂಚಿ ಇ.ಎಸ್‌ ಜಯರಾಂ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇವರ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಶುಕ್ರವಾರ ಆದೇಶಿಸಿದೆ.

ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥರಾದ ನಿಖಿಲ್ ಸೋಸಲೆ ಬಂಧನ ಪ್ರಶ್ನಿಸಿ ಅವರ ಪತ್ನಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ತನಿಖೆಯನ್ನೇ ನಡೆಸದೇ ಸಿಎಂ ಆದೇಶಾನುಸಾರ ಬಂಧಿಸಲಾಗಿದೆ. ಕಾನೂನು, ಸಂವಿಧಾನ ಕಡೆಗಣಿಸಿ ಬಂಧನ ಮಾಡಲಾಗಿದೆ. ಈ ಮೂಲಕ ನಿಖಿಲ್ ಸೋಸಲೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಅಲ್ಲದೇ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಆನ್‌ಲೈನ್ ಮೂಲಕ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿತ್ತು. ಪಾಸ್ ಇದ್ದವರಿಗಷ್ಟೇ ಚಿನ್ನಸ್ವಾಮಿ ಸ್ಟೇಡಿಯಂಗೆ ಪ್ರವೇಶವಿತ್ತು. ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಖುದ್ದು ಡಿಸಿಎಂ ಸ್ವಾಗತಿಸಿದ್ದರು. ವಿಧಾನಸೌಧದಲ್ಲಿ ಸರ್ಕಾರ, ಸಿಎಂ, ಡಿಸಿಎಂ ಸನ್ಮಾನಿಸಿದ್ದರು. ನಂತರ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು. ಅವಘಡದ ಮಾಹಿತಿ ತಿಳಿದ ತಕ್ಷಣ ಆರ್‌ಸಿಬಿಯಿಂದ ಕಾರ್ಯಕ್ರಮ ಸ್ಥಗಿತ ಮಾಡಲಾಗಿತ್ತು. ಹೀಗಾಗಿ, ಯಾವುದೇ ಲೋಪವೆಸಗಿಲ್ಲ. ನಿಖಿಲ್ ಸೋಸಲೆ ಬಂಧನಕ್ಕೆ ತಡೆ ನೀಡುವಂತೆ ಪತ್ನಿ ಮಾಳವಿಕಾ ನಾಯ್ಕ್ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ” ಎಂದು ವರದಿಯಾಗಿದೆ.

ಪ್ರತಿಪಕ್ಷಗಳು ಮತ್ತು ಅದರ ನಾಯಕರು ಹೇಳಿದ್ದೇನು?

ಕಾಲ್ತುಳಿತ ದುರಂತವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರ ವಿರುದ್ದ ಹರಿಹಾಯುತ್ತಿದ್ದಾರೆ.

“ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ವಿಜಯೋತ್ಸವ ಆಚರಣೆಗೆ ಮುಂದಾಗಿ ಬಹು ದೊಡ್ಡ ದುರಂತಕ್ಕೆ ಕಾರಣವಾಗಿರುವಾಗ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿರುವುದು ನಾಚಿಕೆಗೇಡಿನ ಸಂಗತಿ” ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಟೀಕಿಸಿದ್ದಾರೆ.

“ಡಿಸಿಎಂ ಸರ್ಕಾರದ ಭಾಗವಲ್ಲವೇ? ಉಪಮುಖ್ಯಮಂತ್ರಿ ಡಿಕೆಶಿ ಅವರೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವ ನಡೆಯುವ ಬಗ್ಗೆ ಮಾಧ್ಯಮಗಳಿಗೆ ಅಧಿಕೃತ ಹೇಳಿಕೆ ನೀಡಿದ್ದರು. ಅಂದರೆ ಸರ್ಕಾರವೇ ಮುಂದೆ ನಿಂತು ಕಾರ್ಯಕ್ರಮ ಆಯೋಜಿಸಿದ ಹಾಗಾಯಿತು. ಇಷ್ಟರ ಮೇಲೂ ಮುಖ್ಯಮಂತ್ರಿಗಳು ಕಾಲ್ತುಳಿತಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ ಎನ್ನುವ ಹೇಳಿಕೆ ನೀಡಿದ್ದರು. ಅಮಾಯಕರನ್ನು ಸಾವಿನ ದವಡೆಗೆ ತಳ್ಳಿದ ಡಿಸಿಎಂ ಡಿಕೆಶಿ ಅವರ ಮೇಲೆ ಎಫ್‌ಐಆರ್‌ ದಾಖಲಿಸಿ, ಬಂಧಿಸುವ ತಾಕತ್ತು ಸರ್ಕಾರಕ್ಕೆ ಇದೆಯೇ?” ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

“ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪೊಲೀಸರು ಮೊದಲೇ ಅಪಾಯದ ಮುನ್ಸೂಚನೆ ನೀಡಿದ್ದರು, ಪೊಲೀಸರು ಹೊಣೆಯಲ್ಲ ಎಂದು ಹೇಳಿದ್ದರು. ಈಗ ಸಿಎಂ ಸಿದ್ದರಾಮಯ್ಯ ಅವರು ಏಕಾಏಕಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಶೀತಲ ಸಮರ, ಮುಸುಕಿನ ಗುದ್ದಾಟವೇ ಈ ದುರಂತಕ್ಕೂ ಕಾರಣವಾಯ್ತಾ?” ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಪ್ರಶ್ನಿಸಿದ್ದಾರೆ.

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ಇದಕ್ಕೆ ಸಿಎಂ ಮತ್ತು ಡಿಸಿಎಂ ಅವರನ್ನು ಹೊಣೆ ಮಾಡಬೇಕು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಬಹಿರಂಗ ಆಹ್ವಾನ ನೀಡಿದ್ದರು. ಹೆಚ್ಚು ಜನ ಸೇರಲು ಅವರೂ ಕಾರಣ. ಆದರೆ, ದುರಂತದ ಬಳಿಕ ಅಧಿಕಾರಿಗಳನ್ನು ಹೊಣೆ ಮಾಡಿ ಕೈತೊಳೆದುಕೊಳ್ಳಲು ನೋಡುತ್ತಿದ್ದಾರೆ. ಘಟನೆಯ ಹೊಣೆಯನ್ನು ಸಿಎಂ ಮತ್ತು ಡಿಸಿಎಂ ಕೂಡ ಹೊತ್ತುಕೊಳ್ಳಬೇಕು ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.

ಕಾಲ್ತುಳಿತ| ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ವಜಾ; ಗುಪ್ತಚರ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...