Homeಚಳವಳಿಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಪಾರ್ಕಿನ್ಸನ್ ಕಾರಣದಿಂದಾಗಿ ನನ್ನ ಕೈಗಳು ಅಸ್ಥಿರವಾಗಿರುವುದರಿಂದ ನನಗೆ ಲೋಟವನ್ನು ಹಿಡಿದಿಡಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಸ್ಟ್ರಾ ಬಳಸಲು ಅನುಮತಿ ಕೇಳಿದ್ದರು, ಆದರೆ ಎನ್ಐಎ ಅದಕ್ಕೆ ಸಮಯ ಕೇಳಿದೆ

- Advertisement -
- Advertisement -

ಭೀಮಾ-ಕೋರೆಗಾಂವ್ ಪ್ರಕರಣದ ಆರೋಪದ ಮೇಲೆ ಕಳೆದ ತಿಂಗಳು ಬಂಧಿಸಲ್ಪಟ್ಟ 83 ವರ್ಷದ ಫಾದರ್ ಸ್ಟಾನ್ ಸ್ವಾಮಿ, ಕುಡಿಯಲು ನೆರವಾಗುವ ಸಿಪ್ಪರ್‌ ಕಪ್ ಮತ್ತು ಸ್ಟ್ರಾ ಬಳಸುವ ಅನುಮತಿಗಾಗಿ ಮುಂಬೈನ ವಿಶೇಷ ನ್ಯಾಯಾಲಯವನ್ನು ಕೋರಿದ್ದಾರೆ. ಜೈಲಿನ ಹೊರಗಿನಿಂದ ವಸ್ತುಗಳನ್ನು ಒಯ್ಯಲು ನ್ಯಾಯಾಲಯದ ಅನುಮತಿ ಬೇಕಾಗಿದ್ದು, ಆದರೆ ಎನ್‌ಐಎ ಕೋರಿಕೆಯ ವಿಚಾರಣೆ ನವೆಂಬರ್‌ 26 ರಂದು ನಡೆಯಲಿದೆ ಎಂದಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿರುವ ಸ್ಟಾನ್ ಸ್ವಾಮಿಯನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ನಿವಾಸದಿಂದ ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಬಂಧಿಸಿತ್ತು.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಪಾರ್ಕಿನ್ಸನ್ ಕಾಯಿಲೆಯು ನರಮಂಡಲವನ್ನು ದುರ್ಬಲಗೊಳಿಸುವ ಕಾಯಿಲೆಯಾಗಿದ್ದು, ಅಸ್ಥಿರವಾಗಿ ನಡುಕ ಅಥವಾ ಸ್ನಾಯು ಸೆಳೆತಕ್ಕೆ ಕಾರಣವಾಗುತ್ತದೆ. ಇದು ದೈನಂದಿನ ಕ್ರಿಯೆಗಳಾದ ಕುಡಿಯುವುದು ಸೇರಿದಂತೆ ನುಂಗಲು, ಅಥವಾ ಜಗಿಯಲು ಸಮಸ್ಯೆಯನ್ನು ಉಂಟು ಮಾಡುತ್ತದೆ.


ಇದನ್ನೂ ಓದಿ: ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

“ಪಾರ್ಕಿನ್ಸನ್ ಕಾರಣದಿಂದಾಗಿ ನನ್ನ ಕೈಗಳು ಅಸ್ಥಿರವಾಗಿರುವುದರಿಂದ ನನಗೆ ಲೋಟವನ್ನು ಹಿಡಿದಿಡಲು ಸಾಧ್ಯವಿಲ್ಲ” ಎಂದು ತಾಲೋಜಾ ಸೆಂಟ್ರಲ್ ಜೈಲಿನಲ್ಲಿದ್ದ ಮತ್ತು ಪ್ರಸ್ತುತ ಜೈಲು ಆಸ್ಪತ್ರೆಯಲ್ಲಿರುವ ಸ್ಟಾನ್ ಸ್ವಾಮಿ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ಕಾರಣಗಳಿಗಾಗಿ ಸಲ್ಲಿಸಲಾಗಿದ್ದ ಸ್ಟಾನ್ ಸ್ವಾಮಿಯ ಜಾಮೀನು ಅರ್ಜಿಯನ್ನು ವಿಶೇಷ ಎನ್‌ಐಎ ನ್ಯಾಯಾಲಯವು ಕಳೆದ ತಿಂಗಳು ತಿರಸ್ಕರಿಸಿತ್ತು. ಅವರ ವಿರುದ್ಧ ಕಠಿಣ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು-ತಡೆಗಟ್ಟುವಿಕೆ-ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆದ್ದರಿಂದ ಜಾಮೀನು ನೀಡಬಾರದು ಎಂದು ಜಾಮೀನು ನೀಡುವುದನ್ನು ಎನ್‌ಐಎ ವಿರೋಧಿಸಿತ್ತು.

ಭೀಮಾ-ಕೋರೆಗಾಂವ್ ಪ್ರಕರಣವು ಜನವರಿ 1, 2018 ರಂದು ಯುದ್ಧ ಸ್ಮಾರಕದ ಸುತ್ತಮುತ್ತ ಭುಗಿಲೆದ್ದ ಹಿಂಸಾಚಾರವನ್ನು ಉಲ್ಲೇಖಿಸುತ್ತದೆ. ಅದರ ಹಿಂದಿನ ದಿನ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಹಿಂಸಾಚಾರದ ನಡೆಯಿತು ಎಂದು ಎನ್ಐಎ ಆರೋಪಿಸಲಾಗಿದೆ.

ಇದನ್ನೂಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ಮಾವೋವಾದಿ ಚಟುವಟಿಕೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಇವರ ಪಾತ್ರವಿದೆ ಎಂದು ಎನ್ಐಎ ಹೇಳಿಕೊಂಡಿದೆ.

ಅವರ ಬಂಧನಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೇಂದ್ರ ಸರ್ಕಾರವು “ಎಲ್ಲ ಮಿತಿಗಳನ್ನು ಮೀರಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು. ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮತ್ತು ಡಿಎಂಕೆ ನಾಯಕಿ ಕನಿಮೋಳಿ ಸೇರಿದಂತೆ ಹಲವಾರು ಈ ಬಂಧನವನ್ನು ನಾಗರಿಕ ಸ್ವಾತಂತ್ರ್ಯಗಳ ಮೇಲಿನ ದಾಳಿ ಎಂದು ಕರೆದಿದ್ದರು.

ಕ್ಯಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...