Homeಚಳವಳಿಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಪಾರ್ಕಿನ್ಸನ್ ಕಾರಣದಿಂದಾಗಿ ನನ್ನ ಕೈಗಳು ಅಸ್ಥಿರವಾಗಿರುವುದರಿಂದ ನನಗೆ ಲೋಟವನ್ನು ಹಿಡಿದಿಡಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಸ್ಟ್ರಾ ಬಳಸಲು ಅನುಮತಿ ಕೇಳಿದ್ದರು, ಆದರೆ ಎನ್ಐಎ ಅದಕ್ಕೆ ಸಮಯ ಕೇಳಿದೆ

- Advertisement -
- Advertisement -

ಭೀಮಾ-ಕೋರೆಗಾಂವ್ ಪ್ರಕರಣದ ಆರೋಪದ ಮೇಲೆ ಕಳೆದ ತಿಂಗಳು ಬಂಧಿಸಲ್ಪಟ್ಟ 83 ವರ್ಷದ ಫಾದರ್ ಸ್ಟಾನ್ ಸ್ವಾಮಿ, ಕುಡಿಯಲು ನೆರವಾಗುವ ಸಿಪ್ಪರ್‌ ಕಪ್ ಮತ್ತು ಸ್ಟ್ರಾ ಬಳಸುವ ಅನುಮತಿಗಾಗಿ ಮುಂಬೈನ ವಿಶೇಷ ನ್ಯಾಯಾಲಯವನ್ನು ಕೋರಿದ್ದಾರೆ. ಜೈಲಿನ ಹೊರಗಿನಿಂದ ವಸ್ತುಗಳನ್ನು ಒಯ್ಯಲು ನ್ಯಾಯಾಲಯದ ಅನುಮತಿ ಬೇಕಾಗಿದ್ದು, ಆದರೆ ಎನ್‌ಐಎ ಕೋರಿಕೆಯ ವಿಚಾರಣೆ ನವೆಂಬರ್‌ 26 ರಂದು ನಡೆಯಲಿದೆ ಎಂದಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿರುವ ಸ್ಟಾನ್ ಸ್ವಾಮಿಯನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ನಿವಾಸದಿಂದ ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಬಂಧಿಸಿತ್ತು.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಪಾರ್ಕಿನ್ಸನ್ ಕಾಯಿಲೆಯು ನರಮಂಡಲವನ್ನು ದುರ್ಬಲಗೊಳಿಸುವ ಕಾಯಿಲೆಯಾಗಿದ್ದು, ಅಸ್ಥಿರವಾಗಿ ನಡುಕ ಅಥವಾ ಸ್ನಾಯು ಸೆಳೆತಕ್ಕೆ ಕಾರಣವಾಗುತ್ತದೆ. ಇದು ದೈನಂದಿನ ಕ್ರಿಯೆಗಳಾದ ಕುಡಿಯುವುದು ಸೇರಿದಂತೆ ನುಂಗಲು, ಅಥವಾ ಜಗಿಯಲು ಸಮಸ್ಯೆಯನ್ನು ಉಂಟು ಮಾಡುತ್ತದೆ.


ಇದನ್ನೂ ಓದಿ: ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

“ಪಾರ್ಕಿನ್ಸನ್ ಕಾರಣದಿಂದಾಗಿ ನನ್ನ ಕೈಗಳು ಅಸ್ಥಿರವಾಗಿರುವುದರಿಂದ ನನಗೆ ಲೋಟವನ್ನು ಹಿಡಿದಿಡಲು ಸಾಧ್ಯವಿಲ್ಲ” ಎಂದು ತಾಲೋಜಾ ಸೆಂಟ್ರಲ್ ಜೈಲಿನಲ್ಲಿದ್ದ ಮತ್ತು ಪ್ರಸ್ತುತ ಜೈಲು ಆಸ್ಪತ್ರೆಯಲ್ಲಿರುವ ಸ್ಟಾನ್ ಸ್ವಾಮಿ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ಕಾರಣಗಳಿಗಾಗಿ ಸಲ್ಲಿಸಲಾಗಿದ್ದ ಸ್ಟಾನ್ ಸ್ವಾಮಿಯ ಜಾಮೀನು ಅರ್ಜಿಯನ್ನು ವಿಶೇಷ ಎನ್‌ಐಎ ನ್ಯಾಯಾಲಯವು ಕಳೆದ ತಿಂಗಳು ತಿರಸ್ಕರಿಸಿತ್ತು. ಅವರ ವಿರುದ್ಧ ಕಠಿಣ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು-ತಡೆಗಟ್ಟುವಿಕೆ-ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆದ್ದರಿಂದ ಜಾಮೀನು ನೀಡಬಾರದು ಎಂದು ಜಾಮೀನು ನೀಡುವುದನ್ನು ಎನ್‌ಐಎ ವಿರೋಧಿಸಿತ್ತು.

ಭೀಮಾ-ಕೋರೆಗಾಂವ್ ಪ್ರಕರಣವು ಜನವರಿ 1, 2018 ರಂದು ಯುದ್ಧ ಸ್ಮಾರಕದ ಸುತ್ತಮುತ್ತ ಭುಗಿಲೆದ್ದ ಹಿಂಸಾಚಾರವನ್ನು ಉಲ್ಲೇಖಿಸುತ್ತದೆ. ಅದರ ಹಿಂದಿನ ದಿನ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಹಿಂಸಾಚಾರದ ನಡೆಯಿತು ಎಂದು ಎನ್ಐಎ ಆರೋಪಿಸಲಾಗಿದೆ.

ಇದನ್ನೂಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ಮಾವೋವಾದಿ ಚಟುವಟಿಕೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಇವರ ಪಾತ್ರವಿದೆ ಎಂದು ಎನ್ಐಎ ಹೇಳಿಕೊಂಡಿದೆ.

ಅವರ ಬಂಧನಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೇಂದ್ರ ಸರ್ಕಾರವು “ಎಲ್ಲ ಮಿತಿಗಳನ್ನು ಮೀರಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು. ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮತ್ತು ಡಿಎಂಕೆ ನಾಯಕಿ ಕನಿಮೋಳಿ ಸೇರಿದಂತೆ ಹಲವಾರು ಈ ಬಂಧನವನ್ನು ನಾಗರಿಕ ಸ್ವಾತಂತ್ರ್ಯಗಳ ಮೇಲಿನ ದಾಳಿ ಎಂದು ಕರೆದಿದ್ದರು.

ಕ್ಯಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...