Homeಚಳವಳಿಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಪಾರ್ಕಿನ್ಸನ್ ಕಾರಣದಿಂದಾಗಿ ನನ್ನ ಕೈಗಳು ಅಸ್ಥಿರವಾಗಿರುವುದರಿಂದ ನನಗೆ ಲೋಟವನ್ನು ಹಿಡಿದಿಡಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಸ್ಟ್ರಾ ಬಳಸಲು ಅನುಮತಿ ಕೇಳಿದ್ದರು, ಆದರೆ ಎನ್ಐಎ ಅದಕ್ಕೆ ಸಮಯ ಕೇಳಿದೆ

- Advertisement -
- Advertisement -

ಭೀಮಾ-ಕೋರೆಗಾಂವ್ ಪ್ರಕರಣದ ಆರೋಪದ ಮೇಲೆ ಕಳೆದ ತಿಂಗಳು ಬಂಧಿಸಲ್ಪಟ್ಟ 83 ವರ್ಷದ ಫಾದರ್ ಸ್ಟಾನ್ ಸ್ವಾಮಿ, ಕುಡಿಯಲು ನೆರವಾಗುವ ಸಿಪ್ಪರ್‌ ಕಪ್ ಮತ್ತು ಸ್ಟ್ರಾ ಬಳಸುವ ಅನುಮತಿಗಾಗಿ ಮುಂಬೈನ ವಿಶೇಷ ನ್ಯಾಯಾಲಯವನ್ನು ಕೋರಿದ್ದಾರೆ. ಜೈಲಿನ ಹೊರಗಿನಿಂದ ವಸ್ತುಗಳನ್ನು ಒಯ್ಯಲು ನ್ಯಾಯಾಲಯದ ಅನುಮತಿ ಬೇಕಾಗಿದ್ದು, ಆದರೆ ಎನ್‌ಐಎ ಕೋರಿಕೆಯ ವಿಚಾರಣೆ ನವೆಂಬರ್‌ 26 ರಂದು ನಡೆಯಲಿದೆ ಎಂದಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿರುವ ಸ್ಟಾನ್ ಸ್ವಾಮಿಯನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ನಿವಾಸದಿಂದ ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಬಂಧಿಸಿತ್ತು.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಪಾರ್ಕಿನ್ಸನ್ ಕಾಯಿಲೆಯು ನರಮಂಡಲವನ್ನು ದುರ್ಬಲಗೊಳಿಸುವ ಕಾಯಿಲೆಯಾಗಿದ್ದು, ಅಸ್ಥಿರವಾಗಿ ನಡುಕ ಅಥವಾ ಸ್ನಾಯು ಸೆಳೆತಕ್ಕೆ ಕಾರಣವಾಗುತ್ತದೆ. ಇದು ದೈನಂದಿನ ಕ್ರಿಯೆಗಳಾದ ಕುಡಿಯುವುದು ಸೇರಿದಂತೆ ನುಂಗಲು, ಅಥವಾ ಜಗಿಯಲು ಸಮಸ್ಯೆಯನ್ನು ಉಂಟು ಮಾಡುತ್ತದೆ.


ಇದನ್ನೂ ಓದಿ: ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

“ಪಾರ್ಕಿನ್ಸನ್ ಕಾರಣದಿಂದಾಗಿ ನನ್ನ ಕೈಗಳು ಅಸ್ಥಿರವಾಗಿರುವುದರಿಂದ ನನಗೆ ಲೋಟವನ್ನು ಹಿಡಿದಿಡಲು ಸಾಧ್ಯವಿಲ್ಲ” ಎಂದು ತಾಲೋಜಾ ಸೆಂಟ್ರಲ್ ಜೈಲಿನಲ್ಲಿದ್ದ ಮತ್ತು ಪ್ರಸ್ತುತ ಜೈಲು ಆಸ್ಪತ್ರೆಯಲ್ಲಿರುವ ಸ್ಟಾನ್ ಸ್ವಾಮಿ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ಕಾರಣಗಳಿಗಾಗಿ ಸಲ್ಲಿಸಲಾಗಿದ್ದ ಸ್ಟಾನ್ ಸ್ವಾಮಿಯ ಜಾಮೀನು ಅರ್ಜಿಯನ್ನು ವಿಶೇಷ ಎನ್‌ಐಎ ನ್ಯಾಯಾಲಯವು ಕಳೆದ ತಿಂಗಳು ತಿರಸ್ಕರಿಸಿತ್ತು. ಅವರ ವಿರುದ್ಧ ಕಠಿಣ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು-ತಡೆಗಟ್ಟುವಿಕೆ-ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆದ್ದರಿಂದ ಜಾಮೀನು ನೀಡಬಾರದು ಎಂದು ಜಾಮೀನು ನೀಡುವುದನ್ನು ಎನ್‌ಐಎ ವಿರೋಧಿಸಿತ್ತು.

ಭೀಮಾ-ಕೋರೆಗಾಂವ್ ಪ್ರಕರಣವು ಜನವರಿ 1, 2018 ರಂದು ಯುದ್ಧ ಸ್ಮಾರಕದ ಸುತ್ತಮುತ್ತ ಭುಗಿಲೆದ್ದ ಹಿಂಸಾಚಾರವನ್ನು ಉಲ್ಲೇಖಿಸುತ್ತದೆ. ಅದರ ಹಿಂದಿನ ದಿನ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಹಿಂಸಾಚಾರದ ನಡೆಯಿತು ಎಂದು ಎನ್ಐಎ ಆರೋಪಿಸಲಾಗಿದೆ.

ಇದನ್ನೂಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ಮಾವೋವಾದಿ ಚಟುವಟಿಕೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಇವರ ಪಾತ್ರವಿದೆ ಎಂದು ಎನ್ಐಎ ಹೇಳಿಕೊಂಡಿದೆ.

ಅವರ ಬಂಧನಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೇಂದ್ರ ಸರ್ಕಾರವು “ಎಲ್ಲ ಮಿತಿಗಳನ್ನು ಮೀರಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು. ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮತ್ತು ಡಿಎಂಕೆ ನಾಯಕಿ ಕನಿಮೋಳಿ ಸೇರಿದಂತೆ ಹಲವಾರು ಈ ಬಂಧನವನ್ನು ನಾಗರಿಕ ಸ್ವಾತಂತ್ರ್ಯಗಳ ಮೇಲಿನ ದಾಳಿ ಎಂದು ಕರೆದಿದ್ದರು.

ಕ್ಯಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...