Homeಕರ್ನಾಟಕಸ್ಟಾನ್ ಸ್ವಾಮಿಯವರನ್ನು ಬಂಧಿಸಿದ್ದ UAPA ಕಾಯ್ದೆ ರದ್ದತಿಗೆ ಸಮಾನ ಮನಸ್ಕರ ವೇದಿಕೆ ಆಗ್ರಹ

ಸ್ಟಾನ್ ಸ್ವಾಮಿಯವರನ್ನು ಬಂಧಿಸಿದ್ದ UAPA ಕಾಯ್ದೆ ರದ್ದತಿಗೆ ಸಮಾನ ಮನಸ್ಕರ ವೇದಿಕೆ ಆಗ್ರಹ

- Advertisement -
- Advertisement -

ಭೀಮಾ ಕೊರೇಂಗಾವ್ ಪ್ರಕರಣದಲ್ಲಿ UAPA ಕಾಯ್ದೆಯಡಿ ಬಂಧಿಸಲಾಗಿದ್ದ ಹಿರಿಯ ಸಾಮಾಜಿಕ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿಯವರ ಸಾವಿಗೆ ಇಡೀ ದೇಶವೇ ಆಕ್ರೋಶ ಹೊರಹಾಕಿದೆ. ಮಾನವ ಹಕ್ಕುಗಳ ಹೋರಾಟಗಾರರು, ಸಾಮಾಜಿಕ ಹೋರಾಟಗಾರರು, ಚಿಂತಕರು, ವಿಪಕ್ಷಗಳ ನಾಯಕರು ಒಕ್ಕೂಟ ಸರ್ಕಾರವನ್ನು ಖಂಡಿಸಿದ್ದಾರೆ.

ಕರಾಳ UAPA ಕಾಯ್ದೆಯನ್ನು ರದ್ದು ಮಾಡಬೇಕೆಂದು ಹಲವು ಹೋರಾಟಗಾರರು ದನಿ ಎತ್ತಿದ್ದಾರೆ. ಜುಲೈ 14 (ಬುಧವಾರ) ರಂದು ’ಕರಾಳ ಯುಎಪಿಎ ವಿರೋಧಿ ಸಮಾನ ಮನಸ್ಕರ ವೇದಿಕೆ’ ಫಾದರ್ ಸ್ಟಾನ್ ಸ್ವಾಮಿಯವರ ಶ್ರದ್ಧಾಂಜಲಿ ಕಾರ್ಯಕ್ರಮ ಮತ್ತು ಸಾರ್ವಜನಿಕ ಹಕ್ಕೋತ್ತಾಯವನ್ನು ಆಯೋಜಿಸಿದೆ.

ಬೆಂಗಳೂರಿನ ಮೌರ್ಯ ಜಂಕ್ಷನ್ ಗಾಂಧಿ ಪ್ರತಿಮೆ ಬಳಿ, ಬೆಳಗ್ಗೆ 10.30ಕ್ಕೆ ಸಮಾನ ಮನಸ್ಕರು ಸೇರಿ ಹಕ್ಕೋತ್ತಾಯ ಮಂಡಿಸಲಿದ್ದಾರೆ.

ಇದನ್ನೂ ಓದಿ: ಪಾದ್ರಿ ಸ್ಟಾನ್ ಸ್ವಾಮಿ ಸಾವು: ಭಾರತದ ಮುಖ್ಯ ನ್ಯಾಯಾಧೀಶರಿಗೊಂದು ಬಹಿರಂಗ ಪತ್ರ

 

“ಅಪರಾಧ ಅಧಿಕಾರವೇರಿದಾಗ ಮೌನ ಅತಿಘೋರ ಅಪರಾಧ” ಎಂದಿರುವ ವೇದಿಕೆ, ಕರಾಳ UAPA ಮತ್ತು NIA ಕಾಯ್ದೆಗಳು ಕೂಡಲೆ ರದ್ದಾಗಬೇಕು ಎಂದಿದೆ.

ಈ ಕಾಯ್ದೆಯಡಿ ಬಂಧಿತ ಹೋರಾಟಗಾರರ ಬೇಷರತ್ ಬಿಡುಗಡೆಯಾಗಬೇಕು ಎಂದು ವೇದಿಕೆ ಆಗ್ರಹಿಸಿದೆ. ಭೀಮಾ ಕೋರೆಗಾಂವ್- ಎಲ್ಗರ್‌ ಪರಿಷತ್‌ ಗಲಭೆಯು ಬಿಜೆಪಿ ಮತ್ತು ಸಂಘ ಪರಿವಾರ ಸೃಷ್ಟಿಸಿದ ವ್ಯವಸ್ಥಿತಿ ದೊಂಬಿ. ಬಿಜೆಪಿ ದುರಾಡಳಿತ ವಿರೋಧಿಸುವವರ ದನಿ ಅಡಗಿಸುವ ರಾಜಕೀಯ ಪಿತೂರಿ ಎಂದು ’ಕರಾಳ ಯುಎಪಿಎ ವಿರೋಧಿ ಸಮಾನ ಮನಸ್ಕರ ವೇದಿಕೆ’ ಹೇಳಿದೆ.

ಕಳೆದ ಅಕ್ಟೋಬರ್‌ನಲ್ಲಿ ಎಲ್ಗರ್ ಪರಿಷತ್ ಪ್ರಕರಣಕ್ಕೆ (ಭೀಮಾ ಕೋರೆಗಾಂವ್) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಫಾದರ್‌ ಸ್ಟಾನ್ ಸ್ವಾಮಿ ಅವರನ್ನು ಬಂಧಿಸಿತ್ತು. ‍ಜುಲೈ 5 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ನ್ಯಾಯಾಂಗ ಬಂಧನದಲ್ಲಿಯೇ ಅವರು ನಿಧನರಾದರು. ಅವರ ನಿಧನಕ್ಕೆ ರಾಷ್ಟ್ರೀಯ-ಅಂತರರಾಷ್ಟರೀಯ ಮಟ್ಟದಲ್ಲಿ ಖಂಡನೆ ವ್ಯಕ್ತವಾಗಿದೆ.

ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 70 ವರ್ಷ ವಯಸ್ಸಿನ ಕೈದಿಗಳನ್ನು ಬಿಡುಗಡೆ ಮಾಡಲು ಏಕರೂಪದ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಫಾದರ್ ಸ್ಟಾನ್ ಸ್ವಾಮಿಯವರನ್ನು ಕೊಲ್ಲಲಾಗಿದೆ: ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...