Homeಚಳವಳಿಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

50 ಕ್ಕೂ ಹೆಚ್ಚು ವರ್ಷಗಳ ಕಾಲ ಬುಡಕಟ್ಟುಗಳ ಹಕ್ಕುಗಳಿಗಾಗಿ ಹೋರಾಟ ಮಾಡಿದ ಇವರನ್ನು NIA ಬಂಧಿಸಿತ್ತು. ನವೆಂಬರ್‌ 6 ರಂದು ಅವರು ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಸ್ಟ್ರಾ ಮತ್ತು ಸಿಪ್ಪರ್‌ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರಾದರೂ ಅವರ ಮನವಿಗೆ ಸ್ಪಂದಿಸಲು ನ್ಯಾಯಾಲಯವು 20 ದಿನಗಳ ಸಮಯವನ್ನು ಕೇಳಿತ್ತು.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಕಳೆದ ತಿಂಗಳು ಬಂಧಿಸಲ್ಪಟ್ಟ 83 ವರ್ಷದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟಾನ್ ಸ್ವಾಮಿಯವರು ಆಹಾರ ಸೇವಿಸಲು ಬಳಸುವ ಸ್ಟ್ರಾ ಹಾಗೂ ಸಿಪ್ಪರ್ ಕಪ್‌ ಸೇರಿದಂತೆ ಚಳಿಗಾಲದ ಬಟ್ಟೆಗಳಿಗೆ ಕನಿಷ್ಠ ಮುಂದಿನ ಶುಕ್ರವಾರ( ಡಿಸೆಂಬರ್‌ 4) ವರೆಗೆ ಕಾಯಬೇಕಾಗುತ್ತದೆ.

ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಕೈಗಳು ನಡುಗುತ್ತದೆ. ಆದ್ದರಿಂದ ಆಹಾರ ಸೇವಿಸಲು ಆಗುದಿಲ್ಲ. ಹಾಗಾಗಿ ಬಂಧನದ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಸ್ಟ್ರಾ ಮತ್ತು ಸಿಪ್ಪರ್ ಅನ್ನು ವಾಪಸ್ ಕೊಡುವಂತೆ ಕೋರಿ ಸ್ಟಾನ್ ಸ್ವಾಮಿ ಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದರು ಆದರೆ ನ್ಯಾಯಾಲಯವು ಅವರಿಗೆ 20 ದಿನಗಳ ಸಮಯವನ್ನು ಕೇಳಿತ್ತು.

ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ಈಗ ಅರ್ಜಿಯ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಉತ್ತರವನ್ನು ಸಲ್ಲಿಸಿದ್ದು, ಸ್ಟ್ರಾ ಮತ್ತು ಸಿಪ್ಪರ್‌ ಕಪ್‌ಗಳನ್ನು ನಾವು ತೆಗೆದುಕೊಂಡಿಲ್ಲ ಎಂದು ಪುಣೆಯ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ.

“ಸ್ಟಾನ್ ಸ್ವಾಮಿಯನ್ನು ಎನ್ಐಎ ವಶಕ್ಕೆ ತೆಗೆದುಕೊಳ್ಳಲಾಗಿಲ್ಲ, ಆದ್ದರಿಂದ ನಾವು ಅವರ ಯಾವುದೇ ವಸ್ತುಗಳನ್ನು ಹೊಂದಿರಲಿಲ್ಲ. ಅವರನ್ನು ನೇರವಾಗಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು, ಆದ್ದರಿಂದ ಅವರು ಜೈಲು ಅಧಿಕಾರಿಗಳಿಗೆ ವಿನಂತಿಸಬೇಕಾಗಿದೆ. ಅವರು ಜೈಲು ಅಧಿಕಾರಿಗಳಿಗೆ ವಿನಂತಿ ಮಾಡಿದ್ದಾರೆಯೆ ಎಂದು ನಮಗೆ ತಿಳಿದಿಲ್ಲ” ಎಂದು ಎನ್ಐಎ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಎನ್‌‌ಐಎ ಪ್ರತಿಕ್ರಿಯೆಯನ್ನು ಆಲಿಸಿದ ವಿಶೇಷ ನ್ಯಾಯಾಲಯವು, ಫಾದರ್ ಸ್ಟಾನ್ ಸ್ವಾಮಿ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಹಾಗಾಗಿ ಸ್ಟ್ರಾನ್ ಸ್ವಾಮಿಯು ಜೈಲಿನೊಳಗೆ ಸ್ಟ್ರಾ ಮತ್ತು ಸಿಪ್ಪರ್ ಹಾಗೂ ಚಳಿಗಾಲದ ಬಟ್ಟೆಗಳನ್ನು ಬಳಸಲು ಅನುಮತಿ ಕೋರಿ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಜೈಲು ಅಧಿಕಾರಿಗಳ ಪ್ರತಿಕ್ರಿಯೆ ಕೋರಿ ನ್ಯಾಯಾಲಯ ಈ ವಿಷಯವನ್ನು ಡಿಸೆಂಬರ್ 4 ರವರೆಗೆ ಮುಂದೂಡಿದೆ.

ಈ ತಿಂಗಳ ಆರಂಭದಲ್ಲಿ, ಸ್ಟ್ಯಾನ್ ಸ್ವಾಮಿಯನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ನಿವಾಸದಿಂದ ಎನ್ಐಎ ಬಂಧಿಸಿತ್ತು. ನವೆಂಬರ್‌ 6 ರಂದು ಅವರು ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಸ್ಟ್ರಾ ಮತ್ತು ಸಿಪ್ಪರ್‌ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರಾದರೂ ಅವರ ಮನವಿಗೆ ಸ್ಪಂದಿಸಲು 20 ದಿನಗಳ ಸಮಯವನ್ನು ಕೇಳಿತ್ತು.

ಪಾರ್ಕಿನ್ಸನ್ ಎಂಬುದು ಕೇಂದ್ರ ನರಮಂಡಲವನ್ನು ದುರ್ಬಲಗೊಳಿಸುವ ಕಾಯಿಲೆಯಾಗಿದ್ದು, ಇದು ನಡುಗುವಿಕೆ ಮತ್ತು ಸ್ನಾಯು ಸೆಳೆತವನ್ನು ಉಂಟುಮಾಡುತ್ತದೆ. ಹಾಗಾಗಿ ದೈನಂದಿನ ಕ್ರಿಯೆಗಳಾದ ನೀರು ಸೇವಿಸುವುದು ಸೇರಿದಂತೆ ನುಂಗಲು ಅಥವಾ ಜಗಿಯಲು ಕಷ್ಟಕರವಾಗುತ್ತದೆ.

ಇದನ್ನೂ ಓದಿ:  ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...