Homeಚಳವಳಿಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

50 ಕ್ಕೂ ಹೆಚ್ಚು ವರ್ಷಗಳ ಕಾಲ ಬುಡಕಟ್ಟುಗಳ ಹಕ್ಕುಗಳಿಗಾಗಿ ಹೋರಾಟ ಮಾಡಿದ ಇವರನ್ನು NIA ಬಂಧಿಸಿತ್ತು. ನವೆಂಬರ್‌ 6 ರಂದು ಅವರು ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಸ್ಟ್ರಾ ಮತ್ತು ಸಿಪ್ಪರ್‌ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರಾದರೂ ಅವರ ಮನವಿಗೆ ಸ್ಪಂದಿಸಲು ನ್ಯಾಯಾಲಯವು 20 ದಿನಗಳ ಸಮಯವನ್ನು ಕೇಳಿತ್ತು.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಕಳೆದ ತಿಂಗಳು ಬಂಧಿಸಲ್ಪಟ್ಟ 83 ವರ್ಷದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟಾನ್ ಸ್ವಾಮಿಯವರು ಆಹಾರ ಸೇವಿಸಲು ಬಳಸುವ ಸ್ಟ್ರಾ ಹಾಗೂ ಸಿಪ್ಪರ್ ಕಪ್‌ ಸೇರಿದಂತೆ ಚಳಿಗಾಲದ ಬಟ್ಟೆಗಳಿಗೆ ಕನಿಷ್ಠ ಮುಂದಿನ ಶುಕ್ರವಾರ( ಡಿಸೆಂಬರ್‌ 4) ವರೆಗೆ ಕಾಯಬೇಕಾಗುತ್ತದೆ.

ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಕೈಗಳು ನಡುಗುತ್ತದೆ. ಆದ್ದರಿಂದ ಆಹಾರ ಸೇವಿಸಲು ಆಗುದಿಲ್ಲ. ಹಾಗಾಗಿ ಬಂಧನದ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಸ್ಟ್ರಾ ಮತ್ತು ಸಿಪ್ಪರ್ ಅನ್ನು ವಾಪಸ್ ಕೊಡುವಂತೆ ಕೋರಿ ಸ್ಟಾನ್ ಸ್ವಾಮಿ ಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದರು ಆದರೆ ನ್ಯಾಯಾಲಯವು ಅವರಿಗೆ 20 ದಿನಗಳ ಸಮಯವನ್ನು ಕೇಳಿತ್ತು.

ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ಈಗ ಅರ್ಜಿಯ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಉತ್ತರವನ್ನು ಸಲ್ಲಿಸಿದ್ದು, ಸ್ಟ್ರಾ ಮತ್ತು ಸಿಪ್ಪರ್‌ ಕಪ್‌ಗಳನ್ನು ನಾವು ತೆಗೆದುಕೊಂಡಿಲ್ಲ ಎಂದು ಪುಣೆಯ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ.

“ಸ್ಟಾನ್ ಸ್ವಾಮಿಯನ್ನು ಎನ್ಐಎ ವಶಕ್ಕೆ ತೆಗೆದುಕೊಳ್ಳಲಾಗಿಲ್ಲ, ಆದ್ದರಿಂದ ನಾವು ಅವರ ಯಾವುದೇ ವಸ್ತುಗಳನ್ನು ಹೊಂದಿರಲಿಲ್ಲ. ಅವರನ್ನು ನೇರವಾಗಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು, ಆದ್ದರಿಂದ ಅವರು ಜೈಲು ಅಧಿಕಾರಿಗಳಿಗೆ ವಿನಂತಿಸಬೇಕಾಗಿದೆ. ಅವರು ಜೈಲು ಅಧಿಕಾರಿಗಳಿಗೆ ವಿನಂತಿ ಮಾಡಿದ್ದಾರೆಯೆ ಎಂದು ನಮಗೆ ತಿಳಿದಿಲ್ಲ” ಎಂದು ಎನ್ಐಎ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಎನ್‌‌ಐಎ ಪ್ರತಿಕ್ರಿಯೆಯನ್ನು ಆಲಿಸಿದ ವಿಶೇಷ ನ್ಯಾಯಾಲಯವು, ಫಾದರ್ ಸ್ಟಾನ್ ಸ್ವಾಮಿ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಹಾಗಾಗಿ ಸ್ಟ್ರಾನ್ ಸ್ವಾಮಿಯು ಜೈಲಿನೊಳಗೆ ಸ್ಟ್ರಾ ಮತ್ತು ಸಿಪ್ಪರ್ ಹಾಗೂ ಚಳಿಗಾಲದ ಬಟ್ಟೆಗಳನ್ನು ಬಳಸಲು ಅನುಮತಿ ಕೋರಿ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಜೈಲು ಅಧಿಕಾರಿಗಳ ಪ್ರತಿಕ್ರಿಯೆ ಕೋರಿ ನ್ಯಾಯಾಲಯ ಈ ವಿಷಯವನ್ನು ಡಿಸೆಂಬರ್ 4 ರವರೆಗೆ ಮುಂದೂಡಿದೆ.

ಈ ತಿಂಗಳ ಆರಂಭದಲ್ಲಿ, ಸ್ಟ್ಯಾನ್ ಸ್ವಾಮಿಯನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ನಿವಾಸದಿಂದ ಎನ್ಐಎ ಬಂಧಿಸಿತ್ತು. ನವೆಂಬರ್‌ 6 ರಂದು ಅವರು ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಸ್ಟ್ರಾ ಮತ್ತು ಸಿಪ್ಪರ್‌ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರಾದರೂ ಅವರ ಮನವಿಗೆ ಸ್ಪಂದಿಸಲು 20 ದಿನಗಳ ಸಮಯವನ್ನು ಕೇಳಿತ್ತು.

ಪಾರ್ಕಿನ್ಸನ್ ಎಂಬುದು ಕೇಂದ್ರ ನರಮಂಡಲವನ್ನು ದುರ್ಬಲಗೊಳಿಸುವ ಕಾಯಿಲೆಯಾಗಿದ್ದು, ಇದು ನಡುಗುವಿಕೆ ಮತ್ತು ಸ್ನಾಯು ಸೆಳೆತವನ್ನು ಉಂಟುಮಾಡುತ್ತದೆ. ಹಾಗಾಗಿ ದೈನಂದಿನ ಕ್ರಿಯೆಗಳಾದ ನೀರು ಸೇವಿಸುವುದು ಸೇರಿದಂತೆ ನುಂಗಲು ಅಥವಾ ಜಗಿಯಲು ಕಷ್ಟಕರವಾಗುತ್ತದೆ.

ಇದನ್ನೂ ಓದಿ:  ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....