Homeಚಳವಳಿಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

50 ಕ್ಕೂ ಹೆಚ್ಚು ವರ್ಷಗಳ ಕಾಲ ಬುಡಕಟ್ಟುಗಳ ಹಕ್ಕುಗಳಿಗಾಗಿ ಹೋರಾಟ ಮಾಡಿದ ಇವರನ್ನು NIA ಬಂಧಿಸಿತ್ತು. ನವೆಂಬರ್‌ 6 ರಂದು ಅವರು ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಸ್ಟ್ರಾ ಮತ್ತು ಸಿಪ್ಪರ್‌ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರಾದರೂ ಅವರ ಮನವಿಗೆ ಸ್ಪಂದಿಸಲು ನ್ಯಾಯಾಲಯವು 20 ದಿನಗಳ ಸಮಯವನ್ನು ಕೇಳಿತ್ತು.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಕಳೆದ ತಿಂಗಳು ಬಂಧಿಸಲ್ಪಟ್ಟ 83 ವರ್ಷದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟಾನ್ ಸ್ವಾಮಿಯವರು ಆಹಾರ ಸೇವಿಸಲು ಬಳಸುವ ಸ್ಟ್ರಾ ಹಾಗೂ ಸಿಪ್ಪರ್ ಕಪ್‌ ಸೇರಿದಂತೆ ಚಳಿಗಾಲದ ಬಟ್ಟೆಗಳಿಗೆ ಕನಿಷ್ಠ ಮುಂದಿನ ಶುಕ್ರವಾರ( ಡಿಸೆಂಬರ್‌ 4) ವರೆಗೆ ಕಾಯಬೇಕಾಗುತ್ತದೆ.

ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಕೈಗಳು ನಡುಗುತ್ತದೆ. ಆದ್ದರಿಂದ ಆಹಾರ ಸೇವಿಸಲು ಆಗುದಿಲ್ಲ. ಹಾಗಾಗಿ ಬಂಧನದ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಸ್ಟ್ರಾ ಮತ್ತು ಸಿಪ್ಪರ್ ಅನ್ನು ವಾಪಸ್ ಕೊಡುವಂತೆ ಕೋರಿ ಸ್ಟಾನ್ ಸ್ವಾಮಿ ಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದರು ಆದರೆ ನ್ಯಾಯಾಲಯವು ಅವರಿಗೆ 20 ದಿನಗಳ ಸಮಯವನ್ನು ಕೇಳಿತ್ತು.

ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ಈಗ ಅರ್ಜಿಯ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಉತ್ತರವನ್ನು ಸಲ್ಲಿಸಿದ್ದು, ಸ್ಟ್ರಾ ಮತ್ತು ಸಿಪ್ಪರ್‌ ಕಪ್‌ಗಳನ್ನು ನಾವು ತೆಗೆದುಕೊಂಡಿಲ್ಲ ಎಂದು ಪುಣೆಯ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ.

“ಸ್ಟಾನ್ ಸ್ವಾಮಿಯನ್ನು ಎನ್ಐಎ ವಶಕ್ಕೆ ತೆಗೆದುಕೊಳ್ಳಲಾಗಿಲ್ಲ, ಆದ್ದರಿಂದ ನಾವು ಅವರ ಯಾವುದೇ ವಸ್ತುಗಳನ್ನು ಹೊಂದಿರಲಿಲ್ಲ. ಅವರನ್ನು ನೇರವಾಗಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು, ಆದ್ದರಿಂದ ಅವರು ಜೈಲು ಅಧಿಕಾರಿಗಳಿಗೆ ವಿನಂತಿಸಬೇಕಾಗಿದೆ. ಅವರು ಜೈಲು ಅಧಿಕಾರಿಗಳಿಗೆ ವಿನಂತಿ ಮಾಡಿದ್ದಾರೆಯೆ ಎಂದು ನಮಗೆ ತಿಳಿದಿಲ್ಲ” ಎಂದು ಎನ್ಐಎ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಎನ್‌‌ಐಎ ಪ್ರತಿಕ್ರಿಯೆಯನ್ನು ಆಲಿಸಿದ ವಿಶೇಷ ನ್ಯಾಯಾಲಯವು, ಫಾದರ್ ಸ್ಟಾನ್ ಸ್ವಾಮಿ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಹಾಗಾಗಿ ಸ್ಟ್ರಾನ್ ಸ್ವಾಮಿಯು ಜೈಲಿನೊಳಗೆ ಸ್ಟ್ರಾ ಮತ್ತು ಸಿಪ್ಪರ್ ಹಾಗೂ ಚಳಿಗಾಲದ ಬಟ್ಟೆಗಳನ್ನು ಬಳಸಲು ಅನುಮತಿ ಕೋರಿ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಜೈಲು ಅಧಿಕಾರಿಗಳ ಪ್ರತಿಕ್ರಿಯೆ ಕೋರಿ ನ್ಯಾಯಾಲಯ ಈ ವಿಷಯವನ್ನು ಡಿಸೆಂಬರ್ 4 ರವರೆಗೆ ಮುಂದೂಡಿದೆ.

ಈ ತಿಂಗಳ ಆರಂಭದಲ್ಲಿ, ಸ್ಟ್ಯಾನ್ ಸ್ವಾಮಿಯನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ನಿವಾಸದಿಂದ ಎನ್ಐಎ ಬಂಧಿಸಿತ್ತು. ನವೆಂಬರ್‌ 6 ರಂದು ಅವರು ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಸ್ಟ್ರಾ ಮತ್ತು ಸಿಪ್ಪರ್‌ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರಾದರೂ ಅವರ ಮನವಿಗೆ ಸ್ಪಂದಿಸಲು 20 ದಿನಗಳ ಸಮಯವನ್ನು ಕೇಳಿತ್ತು.

ಪಾರ್ಕಿನ್ಸನ್ ಎಂಬುದು ಕೇಂದ್ರ ನರಮಂಡಲವನ್ನು ದುರ್ಬಲಗೊಳಿಸುವ ಕಾಯಿಲೆಯಾಗಿದ್ದು, ಇದು ನಡುಗುವಿಕೆ ಮತ್ತು ಸ್ನಾಯು ಸೆಳೆತವನ್ನು ಉಂಟುಮಾಡುತ್ತದೆ. ಹಾಗಾಗಿ ದೈನಂದಿನ ಕ್ರಿಯೆಗಳಾದ ನೀರು ಸೇವಿಸುವುದು ಸೇರಿದಂತೆ ನುಂಗಲು ಅಥವಾ ಜಗಿಯಲು ಕಷ್ಟಕರವಾಗುತ್ತದೆ.

ಇದನ್ನೂ ಓದಿ:  ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...