Homeಮುಖಪುಟಫಾದರ್ ಸ್ಟಾನ್ ಸ್ವಾಮಿಯವರನ್ನು ಕೊಲ್ಲಲಾಗಿದೆ: ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪ

ಫಾದರ್ ಸ್ಟಾನ್ ಸ್ವಾಮಿಯವರನ್ನು ಕೊಲ್ಲಲಾಗಿದೆ: ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪ

- Advertisement -
- Advertisement -

ಬುಡಕಟ್ಟು ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ಕುರಿತು ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ ಸಂಸದ ಸಂಜಯ್ ರಾವತ್‌, ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿಯವರನ್ನು ಜೈಲಿನಲ್ಲಿ “ಕೊಲ್ಲಲಾಗಿದೆ” ಎಂದು ಆರೋಪಿಸಿದ್ದಾರೆ.

84 ವರ್ಷದ ವ್ಯಕ್ತಿಯೊಬ್ಬರು ನರೇಂದ್ರ ಮೋದಿ ಸರ್ಕಾರವನ್ನು ಉರುಳಿಸಬಲ್ಲರು ಎಂದರೆ,ದೇಶದ ಅಡಿಪಾಯ ಎಷ್ಟು ದುರ್ಬಲವಾಗಿದೆಯೆ..? ಎಂದು ಸಂಸದ ಪ್ರಶ್ನಿಸಿದ್ದಾರೆ. ಜೊತೆಗೆ ನರೇಂದ್ರ ಮೋದಿ ಸರ್ಕಾರವನ್ನು  ಹಿಟ್ಲರ್ ಮತ್ತು ಮುಸೊಲಿನಿ ಸರ್ಕಾರಗಳೊಂದಿಗೆ ಹೋಲಿಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಎಲ್ಗರ್ ಪರಿಷತ್ ಪ್ರಕರಣಕ್ಕೆ (ಭೀಮಾ ಕೋರೆಗಾಂವ್) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಫಾದರ್‌ ಸ್ಟಾನ್ ಸ್ವಾಮಿ ಅವರನ್ನು ಬಂಧಿಸಿತ್ತು. ‍ಜುಲೈ 5 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ನ್ಯಾಯಾಂಗ ಬಂಧನದಲ್ಲಿಯೇ ಅವರು ನಿಧನರಾದರು. ಅವರ ನಿಧನಕ್ಕೆ ರಾಷ್ಟ್ರೀಯ-ಅಂತರರಾಷ್ಟರೀಯ ಮಟ್ಟದಲ್ಲಿ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

“ಇಂದಿರಾ ಗಾಂಧಿ ಜಾರ್ಜ್ ಫರ್ನಾಂಡಿಸ್‌ಗೆ ಹೆದರುತ್ತಿದ್ದರು. ಜಾರ್ಜ್ ಅವರಿಗೆ ಫಾದರ್ ಸ್ಟಾನ್ ಸ್ವಾಮಿಯಂತೆ ವಯಸ್ಸಾಗಿರಲಿಲ್ಲ. ಆದರೆ ಇಂದಿನ ಸರ್ಕಾರವು 84-85 ವರ್ಷ ವಯಸ್ಸಿನ ಫಾದರ್‌ ಸ್ಟಾನ್ ಸ್ವಾಮಿ ಮತ್ತು ವರವರ ರಾವ್ ಅವರಿಗೆ ಹೆದರಿದೆ. ಜೈಲಿನಲ್ಲಿಯೇ ಸ್ಟಾನ್ ಸ್ವಾಮಿ ಕೊಲ್ಲಲ್ಪಟ್ಟರು” ಎಂದು ಸಂಜಯ್ ರಾವತ್  ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಹೇಳಿದ್ದಾರೆ.

ಎಲ್ಗರ್ ಪರಿಷತ್‌ನಲ್ಲಿ ನಡೆದ ಭಾಷಣಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ಬೆಂಬಲಿಸಲಾಗುವುದಿಲ್ಲ. ಆದರೆ, ಆದಾದ ಬಳಿಕ ನಡೆದದ್ದನ್ನು ಸ್ವಾತಂತ್ರ್ಯವನ್ನು ಭೇದಿಸುವ ಪಿತೂರಿ ಎಂದು ಕರೆಯಬೇಕು ಎಂದು  ಹೇಳಿದ್ದಾರೆ.

“ಕಾಡುಗಳಲ್ಲಿ ಬುಡಕಟ್ಟು ಜನರಿಗೆ ತಮ್ಮ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಬಗ್ಗೆ ಅರಿವು ಮೂಡಿಸುವುದು ದೇಶದ್ರೋಹವಾಗಬಹುದೇ..?” ಎಂದು ಪ್ರಶ್ನಿಸಿದ್ದಾರೆ.

“ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗಿಂತ ಮಾವೋವಾದಿಗಳು ಮತ್ತು ನಕ್ಸಲರು ಹೆಚ್ಚು ಅಪಾಯಕಾರಿಯಾಗಿದ್ದರೂ ಜೈಲಿನಲ್ಲಿ 84 ವರ್ಷದ ಅಸಹಾಯಕ ಫಾದರ್ ಸ್ಟಾನ್ ಸ್ವಾಮಿಯವರ ಸಾವನ್ನು ಸಮರ್ಥಿಸಲಾಗುವುದಿಲ್ಲ. ಸರ್ಕಾರವನ್ನು ವಿರೋಧಿಸುವುದು ಮತ್ತು ದೇಶ ವಿರೋಧದ ನಡುವೆ ವ್ಯತ್ಯಾಸವಿದೆ. ಸರ್ಕಾರವನ್ನು ವಿರೋಧಿಸುವುದು ದೇಶದ ವಿರುದ್ಧದ ಪಿತೂರಿ ಎಂದು ಯಾರಾದರೂ ಭಾವಿಸಿದರೆ, ಅವರ ಮನಸ್ಸಿನಲ್ಲಿ ಸರ್ವಾಧಿಕಾರದ ಬೀಜಗಳನ್ನು ಬಿತ್ತಲಾಗುತ್ತಿದೆ ಎಂದು ಪರಿಗಣಿಸಬೇಕು” ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಕ್ಯಾಥೋಲಿಕ್ ಪಾದ್ರಿಯಾಗಿದ್ದ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ NIA ಕಳೆದ ವರ್ಷ ಬಂಧಿಸಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿತ್ತು.


ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ಶ್ರದ್ಧಾಂಜಲಿ; ವಿಚಾರಣಾಧೀನ ಕೈದಿಯಾಗಿ ಭಾರತರತ್ನವೊಂದರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...