Homeಮುಖಪುಟ'ನಿಮ್ಮ ಕಾಲಿನ ಮೇಲೆ ನಿಲ್ಲಿ' | ಶರದ್ ಪವಾರ್ ಚಿತ್ರ ಬಳಸದಂತೆ ಅಜಿತ್ ಪವಾರ್‌ಗೆ ಸುಪ್ರೀಂ...

‘ನಿಮ್ಮ ಕಾಲಿನ ಮೇಲೆ ನಿಲ್ಲಿ’ | ಶರದ್ ಪವಾರ್ ಚಿತ್ರ ಬಳಸದಂತೆ ಅಜಿತ್ ಪವಾರ್‌ಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ವಿರುದ್ಧ ಶರದ್ ಪವಾರ್ ಅವರ ಎನ್‌ಸಿಪಿ ದಾಖಲಿಸಿದ್ದ ಪ್ರಕರಣದ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ ಅಜಿತ್ ಕುಮಾರ್ ಅವರಿಗೆ ”ನಿಮ್ಮ ಕಾಲಿನ ಮೇಲೆ ನಿಲ್ಲಿ” ಎಂದು ಬುಧವಾರ ಹೇಳಿದೆ. ಚುನಾವಣೆಯ ಪ್ರಚಾರ ಸಾಮಗ್ರಿಗಳಲ್ಲಿ ಶರದ್ ಪವಾರ್ ಅವರ ಫೋಟೋಗಳು ಮತ್ತು ವೀಡಿಯೊಗಳನ್ನು ಬಳಸದಂತೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಮೌಖಿಕವಾಗಿ ಸೂಚಿಸಿದೆ. ಶರದ್ ಪವಾರ್ ಚಿತ್ರ

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ತಮ್ಮ ಪ್ರತ್ಯೇಕ ಗುರುತಿನ ಆಧಾರದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಸುಪ್ರಿಂಕೋರ್ಟ್ ಹೇಳಿದೆ. ಶರದ್ ಪವಾರ್ ಅವರ ಚಿತ್ರಗಳು ಮತ್ತು ವೀಡಿಯೊಗಳನ್ನು ಬಳಸದಂತೆ ಅವರ ಪಕ್ಷದ ಸದಸ್ಯರಿಗೆ ಸೂಚನೆ ನೀಡುವಂತೆ ನ್ಯಾಯಾಲಯವು ಅಜಿತ್ ಪವಾರ್ ಅವರನ್ನು ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಜಿತ್ ಪವಾರ್ ಅವರ ಪಕ್ಷವು ‘ಗಡಿಯಾರ’ ಚಿಹ್ನೆಯನ್ನು ಬಳಸುವುದನ್ನು ತಡೆಯುವಂತೆ ಕೋರಿ ಶರದ್ ಪವಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ. ಈ ಹಿಂದೆ, ಗಡಿಯಾರದ ಚಿಹ್ನೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ‘ವಿಚಾರಣಾಧೀನ’ ಎಂಬ ಸೂಚನೆಗಳನ್ನು ಪ್ರಕಟಿಸುವಂತೆ ಅಜಿತ್ ಪವಾರ್ ಅವರಿಗೆ ನ್ಯಾಯಾಲಯ ಸೂಚಿಸಿತ್ತು. ಶರದ್ ಪವಾರ್ ಚಿತ್ರ

ಬುಧವಾರ ಶರದ್ ಪವಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲಂಘಿಸಿ ಪ್ರಕಟಿಸಲಾದ ಪೋಸ್ಟರ್‌ಗಳ ಫೋಟೋಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಕೆಲವು ವಸ್ತುಗಳನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ. ”ಎನ್‌ಸಿಪಿ (ಅಜಿತ್ ಪವಾರ್) ಅಭ್ಯರ್ಥಿ ಅಮೋಲ್ ಮಿಟ್ಕರಿ ಅವರು ಶರದ್ ಪವಾರ್ ಅವರ ಚಿತ್ರವನ್ನು ಮಾತ್ರ ಫೋಟೋಗಳನ್ನು ಪ್ರಕಟಿಸಿದ್ದಾರೆ, ಅವರ ಖ್ಯಾತಿಯನ್ನು ಬಳಸಿಕೊಂಡು ಅಜಿತ್ ಪವಾರ್ ಅವರ ಕಡೆಯವರು ‘ಲಾಭ’ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ವಕೀಲ ಸಿಂಘ್ವಿ ವಾದಿಸಿದ್ದಾರೆ.

ಅಜಿತ್ ಪವಾರ್ ಪರ ವಾದಿಸಿದ ಹಿರಿಯ ವಕೀಲ ಬಲ್ಬೀರ್ ಸಿಂಗ್ ಅವರು ಈ ಆರೋಪಗಳನ್ನು ತಳ್ಳಿಹಾಕಿದ್ದು, ಸಿಂಘ್ವಿ ಕೋರ್ಟ್‌ಗೆ ಸಲ್ಲಿಸಿದ ಸಾಮಗ್ರಿಗಳು “ತಿದ್ದುಪಡಿ” ಮಾಡಿರುವುದಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಂಘ್ವಿ, ಈ ಸಾಮಾಗ್ರಿಗಳನ್ನು ಅಮೋಲ್ ಮಿತ್ಕಾರಿ ಅವರ ಅಧಿಕೃತ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಲಾದ ವೀಡಿಯೊದಿಂದ ಪಡೆಯಲಾಗಿದೆ ಎಂದು ಹೇಳಿದ್ದಾರೆ.

“ಅಜಿತ್ ಪವಾರ್ ಮತ್ತು ಶರದ್ ಪವಾರ್ ನಡುವಿನ ಸಂಬಂಧ ಚೆನ್ನಾಗಿದೆ ಎಂದು ಅಜಿತ್ ಕಡೆಯವರು ಬಿಂಬಿಸುತ್ತಿದ್ದಾರೆ. ವ್ಯಕ್ತಿಯೊಬ್ಬ ಅಜಿತ್ ಪವಾರ್‌ ಕಡೆಯವರಿಗೆ ಮತ ಹಾಕಿದರೆ ಅದು ಅವಿಭಜಿತ ಪವಾರ್ ಕುಟುಂಬಕ್ಕೆ ಹಾಕುವ ಮತ ಎಂಬ ಸುಳ್ಳಾದ ಚಿತ್ರಣವನ್ನು ಬಿಂಬಿಸಲು ಅವರು ಪ್ರಯತ್ನಿಸುತ್ತಿದ್ದಾರೆ” ಎಂದು ಸಿಂಘ್ವಿ ಕೋರ್ಟ್‌ಗೆ ಹೇಳಿದ್ದಾರೆ. ಸುಮಾರು 36 ಕ್ಷೇತ್ರಗಳಲ್ಲಿ ಅಜಿತ್‌ ಪವಾರ್‌ ಮತ್ತು ಶರದ್‌ ಪವಾರ್‌ ಅವರ ಪಕ್ಷವು ನೇರ ಪ್ರತಿಸ್ಪರ್ಧಿಗಳಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವೇಳೆ ಅಜಿತ್ ಪವಾರ್ ಅವರ ಕಡೆ ತಿರುಗಿದ ನ್ಯಾಯಮೂರ್ತಿ ಕಾಂತ್, “ಇದು ಹಳೆಯ ವೀಡಿಯೊ ಆಗಿರಲಿ ಅಥವಾ ಇಲ್ಲದಿರಲಿ. ಶರದ್ ಪವಾರ್ ಅವರೊಂದಿಗೆ ನೀವು ಸೈದ್ಧಾಂತಿಕ ಭಿನ್ನಾಭಿಪ್ರಾಯ ಹೊಂದಿದ್ದೀರಿ ಮತ್ತು ನೀವು ಅವರ ವಿರುದ್ಧ ಸ್ಪರ್ಧಿಸುತ್ತಿದ್ದೀರಿ. ನೀವು ನಿಮ್ಮ ಕಾಲಿನ ಮೇಲೆ ನಿಲ್ಲಲು ಪ್ರಯತ್ನಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...