Homeಮುಖಪುಟ'ನಿಮ್ಮ ಕಾಲಿನ ಮೇಲೆ ನಿಲ್ಲಿ' | ಶರದ್ ಪವಾರ್ ಚಿತ್ರ ಬಳಸದಂತೆ ಅಜಿತ್ ಪವಾರ್‌ಗೆ ಸುಪ್ರೀಂ...

‘ನಿಮ್ಮ ಕಾಲಿನ ಮೇಲೆ ನಿಲ್ಲಿ’ | ಶರದ್ ಪವಾರ್ ಚಿತ್ರ ಬಳಸದಂತೆ ಅಜಿತ್ ಪವಾರ್‌ಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ವಿರುದ್ಧ ಶರದ್ ಪವಾರ್ ಅವರ ಎನ್‌ಸಿಪಿ ದಾಖಲಿಸಿದ್ದ ಪ್ರಕರಣದ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ ಅಜಿತ್ ಕುಮಾರ್ ಅವರಿಗೆ ”ನಿಮ್ಮ ಕಾಲಿನ ಮೇಲೆ ನಿಲ್ಲಿ” ಎಂದು ಬುಧವಾರ ಹೇಳಿದೆ. ಚುನಾವಣೆಯ ಪ್ರಚಾರ ಸಾಮಗ್ರಿಗಳಲ್ಲಿ ಶರದ್ ಪವಾರ್ ಅವರ ಫೋಟೋಗಳು ಮತ್ತು ವೀಡಿಯೊಗಳನ್ನು ಬಳಸದಂತೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಮೌಖಿಕವಾಗಿ ಸೂಚಿಸಿದೆ. ಶರದ್ ಪವಾರ್ ಚಿತ್ರ

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ತಮ್ಮ ಪ್ರತ್ಯೇಕ ಗುರುತಿನ ಆಧಾರದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಸುಪ್ರಿಂಕೋರ್ಟ್ ಹೇಳಿದೆ. ಶರದ್ ಪವಾರ್ ಅವರ ಚಿತ್ರಗಳು ಮತ್ತು ವೀಡಿಯೊಗಳನ್ನು ಬಳಸದಂತೆ ಅವರ ಪಕ್ಷದ ಸದಸ್ಯರಿಗೆ ಸೂಚನೆ ನೀಡುವಂತೆ ನ್ಯಾಯಾಲಯವು ಅಜಿತ್ ಪವಾರ್ ಅವರನ್ನು ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಜಿತ್ ಪವಾರ್ ಅವರ ಪಕ್ಷವು ‘ಗಡಿಯಾರ’ ಚಿಹ್ನೆಯನ್ನು ಬಳಸುವುದನ್ನು ತಡೆಯುವಂತೆ ಕೋರಿ ಶರದ್ ಪವಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ. ಈ ಹಿಂದೆ, ಗಡಿಯಾರದ ಚಿಹ್ನೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ‘ವಿಚಾರಣಾಧೀನ’ ಎಂಬ ಸೂಚನೆಗಳನ್ನು ಪ್ರಕಟಿಸುವಂತೆ ಅಜಿತ್ ಪವಾರ್ ಅವರಿಗೆ ನ್ಯಾಯಾಲಯ ಸೂಚಿಸಿತ್ತು. ಶರದ್ ಪವಾರ್ ಚಿತ್ರ

ಬುಧವಾರ ಶರದ್ ಪವಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲಂಘಿಸಿ ಪ್ರಕಟಿಸಲಾದ ಪೋಸ್ಟರ್‌ಗಳ ಫೋಟೋಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಕೆಲವು ವಸ್ತುಗಳನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ. ”ಎನ್‌ಸಿಪಿ (ಅಜಿತ್ ಪವಾರ್) ಅಭ್ಯರ್ಥಿ ಅಮೋಲ್ ಮಿಟ್ಕರಿ ಅವರು ಶರದ್ ಪವಾರ್ ಅವರ ಚಿತ್ರವನ್ನು ಮಾತ್ರ ಫೋಟೋಗಳನ್ನು ಪ್ರಕಟಿಸಿದ್ದಾರೆ, ಅವರ ಖ್ಯಾತಿಯನ್ನು ಬಳಸಿಕೊಂಡು ಅಜಿತ್ ಪವಾರ್ ಅವರ ಕಡೆಯವರು ‘ಲಾಭ’ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ವಕೀಲ ಸಿಂಘ್ವಿ ವಾದಿಸಿದ್ದಾರೆ.

ಅಜಿತ್ ಪವಾರ್ ಪರ ವಾದಿಸಿದ ಹಿರಿಯ ವಕೀಲ ಬಲ್ಬೀರ್ ಸಿಂಗ್ ಅವರು ಈ ಆರೋಪಗಳನ್ನು ತಳ್ಳಿಹಾಕಿದ್ದು, ಸಿಂಘ್ವಿ ಕೋರ್ಟ್‌ಗೆ ಸಲ್ಲಿಸಿದ ಸಾಮಗ್ರಿಗಳು “ತಿದ್ದುಪಡಿ” ಮಾಡಿರುವುದಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಂಘ್ವಿ, ಈ ಸಾಮಾಗ್ರಿಗಳನ್ನು ಅಮೋಲ್ ಮಿತ್ಕಾರಿ ಅವರ ಅಧಿಕೃತ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಲಾದ ವೀಡಿಯೊದಿಂದ ಪಡೆಯಲಾಗಿದೆ ಎಂದು ಹೇಳಿದ್ದಾರೆ.

“ಅಜಿತ್ ಪವಾರ್ ಮತ್ತು ಶರದ್ ಪವಾರ್ ನಡುವಿನ ಸಂಬಂಧ ಚೆನ್ನಾಗಿದೆ ಎಂದು ಅಜಿತ್ ಕಡೆಯವರು ಬಿಂಬಿಸುತ್ತಿದ್ದಾರೆ. ವ್ಯಕ್ತಿಯೊಬ್ಬ ಅಜಿತ್ ಪವಾರ್‌ ಕಡೆಯವರಿಗೆ ಮತ ಹಾಕಿದರೆ ಅದು ಅವಿಭಜಿತ ಪವಾರ್ ಕುಟುಂಬಕ್ಕೆ ಹಾಕುವ ಮತ ಎಂಬ ಸುಳ್ಳಾದ ಚಿತ್ರಣವನ್ನು ಬಿಂಬಿಸಲು ಅವರು ಪ್ರಯತ್ನಿಸುತ್ತಿದ್ದಾರೆ” ಎಂದು ಸಿಂಘ್ವಿ ಕೋರ್ಟ್‌ಗೆ ಹೇಳಿದ್ದಾರೆ. ಸುಮಾರು 36 ಕ್ಷೇತ್ರಗಳಲ್ಲಿ ಅಜಿತ್‌ ಪವಾರ್‌ ಮತ್ತು ಶರದ್‌ ಪವಾರ್‌ ಅವರ ಪಕ್ಷವು ನೇರ ಪ್ರತಿಸ್ಪರ್ಧಿಗಳಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವೇಳೆ ಅಜಿತ್ ಪವಾರ್ ಅವರ ಕಡೆ ತಿರುಗಿದ ನ್ಯಾಯಮೂರ್ತಿ ಕಾಂತ್, “ಇದು ಹಳೆಯ ವೀಡಿಯೊ ಆಗಿರಲಿ ಅಥವಾ ಇಲ್ಲದಿರಲಿ. ಶರದ್ ಪವಾರ್ ಅವರೊಂದಿಗೆ ನೀವು ಸೈದ್ಧಾಂತಿಕ ಭಿನ್ನಾಭಿಪ್ರಾಯ ಹೊಂದಿದ್ದೀರಿ ಮತ್ತು ನೀವು ಅವರ ವಿರುದ್ಧ ಸ್ಪರ್ಧಿಸುತ್ತಿದ್ದೀರಿ. ನೀವು ನಿಮ್ಮ ಕಾಲಿನ ಮೇಲೆ ನಿಲ್ಲಲು ಪ್ರಯತ್ನಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...