Homeಮುಖಪುಟ'ನಿಮ್ಮ ಕಾಲಿನ ಮೇಲೆ ನಿಲ್ಲಿ' | ಶರದ್ ಪವಾರ್ ಚಿತ್ರ ಬಳಸದಂತೆ ಅಜಿತ್ ಪವಾರ್‌ಗೆ ಸುಪ್ರೀಂ...

‘ನಿಮ್ಮ ಕಾಲಿನ ಮೇಲೆ ನಿಲ್ಲಿ’ | ಶರದ್ ಪವಾರ್ ಚಿತ್ರ ಬಳಸದಂತೆ ಅಜಿತ್ ಪವಾರ್‌ಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ವಿರುದ್ಧ ಶರದ್ ಪವಾರ್ ಅವರ ಎನ್‌ಸಿಪಿ ದಾಖಲಿಸಿದ್ದ ಪ್ರಕರಣದ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ ಅಜಿತ್ ಕುಮಾರ್ ಅವರಿಗೆ ”ನಿಮ್ಮ ಕಾಲಿನ ಮೇಲೆ ನಿಲ್ಲಿ” ಎಂದು ಬುಧವಾರ ಹೇಳಿದೆ. ಚುನಾವಣೆಯ ಪ್ರಚಾರ ಸಾಮಗ್ರಿಗಳಲ್ಲಿ ಶರದ್ ಪವಾರ್ ಅವರ ಫೋಟೋಗಳು ಮತ್ತು ವೀಡಿಯೊಗಳನ್ನು ಬಳಸದಂತೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಮೌಖಿಕವಾಗಿ ಸೂಚಿಸಿದೆ. ಶರದ್ ಪವಾರ್ ಚಿತ್ರ

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ತಮ್ಮ ಪ್ರತ್ಯೇಕ ಗುರುತಿನ ಆಧಾರದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಸುಪ್ರಿಂಕೋರ್ಟ್ ಹೇಳಿದೆ. ಶರದ್ ಪವಾರ್ ಅವರ ಚಿತ್ರಗಳು ಮತ್ತು ವೀಡಿಯೊಗಳನ್ನು ಬಳಸದಂತೆ ಅವರ ಪಕ್ಷದ ಸದಸ್ಯರಿಗೆ ಸೂಚನೆ ನೀಡುವಂತೆ ನ್ಯಾಯಾಲಯವು ಅಜಿತ್ ಪವಾರ್ ಅವರನ್ನು ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಜಿತ್ ಪವಾರ್ ಅವರ ಪಕ್ಷವು ‘ಗಡಿಯಾರ’ ಚಿಹ್ನೆಯನ್ನು ಬಳಸುವುದನ್ನು ತಡೆಯುವಂತೆ ಕೋರಿ ಶರದ್ ಪವಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ. ಈ ಹಿಂದೆ, ಗಡಿಯಾರದ ಚಿಹ್ನೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ‘ವಿಚಾರಣಾಧೀನ’ ಎಂಬ ಸೂಚನೆಗಳನ್ನು ಪ್ರಕಟಿಸುವಂತೆ ಅಜಿತ್ ಪವಾರ್ ಅವರಿಗೆ ನ್ಯಾಯಾಲಯ ಸೂಚಿಸಿತ್ತು. ಶರದ್ ಪವಾರ್ ಚಿತ್ರ

ಬುಧವಾರ ಶರದ್ ಪವಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲಂಘಿಸಿ ಪ್ರಕಟಿಸಲಾದ ಪೋಸ್ಟರ್‌ಗಳ ಫೋಟೋಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಕೆಲವು ವಸ್ತುಗಳನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ. ”ಎನ್‌ಸಿಪಿ (ಅಜಿತ್ ಪವಾರ್) ಅಭ್ಯರ್ಥಿ ಅಮೋಲ್ ಮಿಟ್ಕರಿ ಅವರು ಶರದ್ ಪವಾರ್ ಅವರ ಚಿತ್ರವನ್ನು ಮಾತ್ರ ಫೋಟೋಗಳನ್ನು ಪ್ರಕಟಿಸಿದ್ದಾರೆ, ಅವರ ಖ್ಯಾತಿಯನ್ನು ಬಳಸಿಕೊಂಡು ಅಜಿತ್ ಪವಾರ್ ಅವರ ಕಡೆಯವರು ‘ಲಾಭ’ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ವಕೀಲ ಸಿಂಘ್ವಿ ವಾದಿಸಿದ್ದಾರೆ.

ಅಜಿತ್ ಪವಾರ್ ಪರ ವಾದಿಸಿದ ಹಿರಿಯ ವಕೀಲ ಬಲ್ಬೀರ್ ಸಿಂಗ್ ಅವರು ಈ ಆರೋಪಗಳನ್ನು ತಳ್ಳಿಹಾಕಿದ್ದು, ಸಿಂಘ್ವಿ ಕೋರ್ಟ್‌ಗೆ ಸಲ್ಲಿಸಿದ ಸಾಮಗ್ರಿಗಳು “ತಿದ್ದುಪಡಿ” ಮಾಡಿರುವುದಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಂಘ್ವಿ, ಈ ಸಾಮಾಗ್ರಿಗಳನ್ನು ಅಮೋಲ್ ಮಿತ್ಕಾರಿ ಅವರ ಅಧಿಕೃತ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಲಾದ ವೀಡಿಯೊದಿಂದ ಪಡೆಯಲಾಗಿದೆ ಎಂದು ಹೇಳಿದ್ದಾರೆ.

“ಅಜಿತ್ ಪವಾರ್ ಮತ್ತು ಶರದ್ ಪವಾರ್ ನಡುವಿನ ಸಂಬಂಧ ಚೆನ್ನಾಗಿದೆ ಎಂದು ಅಜಿತ್ ಕಡೆಯವರು ಬಿಂಬಿಸುತ್ತಿದ್ದಾರೆ. ವ್ಯಕ್ತಿಯೊಬ್ಬ ಅಜಿತ್ ಪವಾರ್‌ ಕಡೆಯವರಿಗೆ ಮತ ಹಾಕಿದರೆ ಅದು ಅವಿಭಜಿತ ಪವಾರ್ ಕುಟುಂಬಕ್ಕೆ ಹಾಕುವ ಮತ ಎಂಬ ಸುಳ್ಳಾದ ಚಿತ್ರಣವನ್ನು ಬಿಂಬಿಸಲು ಅವರು ಪ್ರಯತ್ನಿಸುತ್ತಿದ್ದಾರೆ” ಎಂದು ಸಿಂಘ್ವಿ ಕೋರ್ಟ್‌ಗೆ ಹೇಳಿದ್ದಾರೆ. ಸುಮಾರು 36 ಕ್ಷೇತ್ರಗಳಲ್ಲಿ ಅಜಿತ್‌ ಪವಾರ್‌ ಮತ್ತು ಶರದ್‌ ಪವಾರ್‌ ಅವರ ಪಕ್ಷವು ನೇರ ಪ್ರತಿಸ್ಪರ್ಧಿಗಳಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವೇಳೆ ಅಜಿತ್ ಪವಾರ್ ಅವರ ಕಡೆ ತಿರುಗಿದ ನ್ಯಾಯಮೂರ್ತಿ ಕಾಂತ್, “ಇದು ಹಳೆಯ ವೀಡಿಯೊ ಆಗಿರಲಿ ಅಥವಾ ಇಲ್ಲದಿರಲಿ. ಶರದ್ ಪವಾರ್ ಅವರೊಂದಿಗೆ ನೀವು ಸೈದ್ಧಾಂತಿಕ ಭಿನ್ನಾಭಿಪ್ರಾಯ ಹೊಂದಿದ್ದೀರಿ ಮತ್ತು ನೀವು ಅವರ ವಿರುದ್ಧ ಸ್ಪರ್ಧಿಸುತ್ತಿದ್ದೀರಿ. ನೀವು ನಿಮ್ಮ ಕಾಲಿನ ಮೇಲೆ ನಿಲ್ಲಲು ಪ್ರಯತ್ನಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...