Homeಚಳವಳಿತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ...

ತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ

2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು?

- Advertisement -
- Advertisement -

ಹಾಸ್ಟೆಲ್‌ ಫೀಸ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳದ ವಿರುದ್ಧ ದೆಹಲಿಯ ಜವಾಹರ್‌ಲಾಲ್‌ ನೆಹರೂ ವಿವಿಯ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ರೀತಿಯ ಹೋರಾಟಗಳು ಹಿಂದೆ ನಡೆದಾಗ #IStandWithJNU ಎಂಬ ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿತ್ತು. ಆದರೆ ಈ ಬಾರಿ ಟ್ವಿಟ್ಟರ್‌ನಲ್ಲಿ #TaxPayersWithJNU ಎಂಬ ಹ್ಯಾಷ್‌ಟ್ಯಾಗ್‌ ಕೂಡ ಟ್ರೆಂಡ್‌ ಆಗುವ ಮೂಲಕ ಗಮನ ಸೆಳೆದಿದೆ.

ವಿದ್ಯಾರ್ಥಿಗಳು ನಿನ್ನೆ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್‌ ಮಾರ್ಚ್‌ ಅನ್ನು ಕ್ರೂರವಾಗಿ ಪೊಲೀಸರು ದಮನ ಮಾಡಿದ್ದರು. ಅಲ್ಲದೇ ವಿದ್ಯಾಥಿ೯ಗಳ ಮೇಲೆ ಎಫ್‌ಐಆರ್‌ ಕೂಡ ದಾಖಲಿಸಿದ್ದರು. ಈ ರೀತಿಯ ದಬ್ಬಾಳಿಕೆ ಹೆಚ್ಚಾದಂತೆ ವಿದ್ಯಾರ್ಥಿಗಳ ಪರವಾಗಿನ ಬೆಂಬಲದ ಅಲೆಯೂ ಸಹ ಹೆಚ್ಚಾಗಿದೆ. ಸಾವಿರಾರು ಜನ ವಿದ್ಯಾರ್ಥಿಗಳ ಧೀರೋದಾತ್ತ ಹೋರಾಟಕ್ಕೆ ಐಕ್ಯಮತ್ಯ ಸೂಚಿಸಿದ್ದಾರೆ.

ಉನ್ನತ ಶಿಕ್ಷಣಕ್ಕಾಗಿ ಸರ್ಕಾರವು ನಮ್ಮಿಂದ 94,000 ಕೋಟಿ ರೂಗಳನ್ನು ತೆರಿಗೆಯಾಗಿ ಸಂಗ್ರಹಿಸಿದೆ, ಆದರೆ ಇದು ಸಿಎಜಿ ವರದಿ ಪ್ರಕಾರ ಬಳಕೆಯಾಗದೆ ಉಳಿದಿದೆ. ಕನ್ಹಯ್ಯ ಕುಮಾರ್ ಅವರಂತಹ ಜನರು ಅಲ್ಲಿ ಅಧ್ಯಯನ ಮಾಡುವುದನ್ನು ತಡೆಯಲು ಜೆಎನ್‌ಯು ಶುಲ್ಕದಲ್ಲಿ ಹಲವಾರು ಪಟ್ಟು ಹೆಚ್ಚಳ ಮಾಡಲಾಗಿದೆ. ಇದು ಶಿಕ್ಷಣ ಮತ್ತು ಚಿಂತನೆಯ ಮೇಲಿನ ಯುದ್ಧ ಎಂದು ಹಿರಿಯ ವಕೀಲರಾದ ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಶುಲ್ಕ ಹೆಚ್ಚಳವಲ್ಲ. ಇದು ಶಿಕ್ಷಣದ ವ್ಯಾಪಾರೀಕರಣವಾಗಿದೆ. 2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು? ಭೇಟಿ ಪಡಾವೋ ಎಂದು ಕೇವಲ ಜಾಹಿರಾತು ಕೊಟ್ಟರೆ ಸಾಲದು. ಜೆಎನ್‌ಯು ಮೇಲಿನ ದಾಳಿ ಸಾಮಾನ್ಯ ಯುವ ಭಾರತೀಯರ ಉನ್ನತ ಶಿಕ್ಷಣದ ಮೇಲಿನ ಆಕ್ರಮಣವಾಗಿದೆ ಎಂದು ಹೋರಾಟಗಾರ್ತಿ ಕವಿತಾ ಕೃಷ್ಣನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿ ಬಾರಿಯೂ ಜೆಎನ್‌ಯುಗೆ ಹಣ ನೀಡಬೇಕೆಂದರೆ ನಮ್ಮ ತೆರಿಗೆ ಹಣ ಪೋಲು ಮಾಡುತ್ತಿದ್ದೀರಿ ಎಂದು ಬಿಜೆಪಿ ಬೆಂಬಲಿಗರು ಹರಿಹಾಯುತ್ತಿದ್ದರು. ಆದರೀಗ ದೇಶಾದ್ಯಂತ ಪ್ರತಿಮೆಗಳನ್ನು ಕಟ್ಟಲು, ಕುಂಭಮೇಳಗಳನ್ನು ನಡೆಸಲು ಹಣವಿದೆ, ಬಡಮಕ್ಕಳು ಕಲಿಯಲು ಹಣವಿಲ್ಲವೇ? ನಮ್ಮ ತೆರಿಗೆ ಹಣವನ್ನು ಏನು ಮಾಡಿದ್ದೀರಿ? ನಾವೆಲ್ಲಾ ಜೆಎನ್‌ಯು ವಿದ್ಯಾರ್ಥಿಗಳ ಪರವಿದ್ದೀವಿ ಎಂದು ನೆಟ್ಟಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೋಟ್ಯಾಧಿಪತಿ ಎಂಪಿಗಳಿಗೆ ಪಾರ್ಲಿಮೆಂಟ್‌ನಲ್ಲಿ ಸಬ್ಸಿಡಿ ದರಕ್ಕೆ ಊಟ ವಸತಿ ಒದಗಿಸುವ ಸರ್ಕಾರ ಮಕ್ಕಳ ಹಾಸ್ಟೆಲ್‌ ಫೀಸು ಹೆಚ್ಚಿಸುವುದೇಕೆ ಎಂದು ಕಿಡಿಕಾರಿದ್ದಾರೆ.

ನಾನೊಬ್ಬ ತೆರಿಗೆದಾರ. ನಾನು ಜೆಎನ್‌ಯೂ ಹೋರಾಟವನ್ನು ಸಂಪೂರ್ಣ ಬೆಂಬಲಿಸುತ್ತೇವೆ. ಏಕೆಂದರೆ ಭವಿಷ್ಯದ ಭಾರತ ಅವರೆ ಆಗಿದ್ದಾರೆ ಎಂದು ಮೀನಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಪುಟ್ಟ ಶಾಲಾಮಕ್ಕಳು ಜೆಎನ್‌ಯು ವಿದ್ಯಾರ್ಥಿಗಳ ಹೋರಾಟದ ಪರವಾಗಿ ವಿ ವಾಂಟ್‌ ಜಸ್ಟೀಸ್‌ ಎಂದು ಶಾಲಾ ಬಸ್‌ನೊಳಗಿಂದಲೇ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸುವ ವಿಡಿಯೋ ವೈರಲ್‌ ಆಗಿದೆ. ವಿಡಿಯೋ ನೋಡಿ

ಕೇವಲ ಟ್ವಿಟ್ಟರ್‌ನಲ್ಲಿ ಮಾತ್ರವಲ್ಲದೇ ಬೀದಿಗಳಲ್ಲಿಯು ಜನ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಜೆ.ಎನ್.ಯು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ, ಅವರ ಹೋರಾಟವನ್ನು ಬೆಂಬಲಿಸಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ SFI ನಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ SFI ಮೈಸೂರು ವಿವಿ ಘಟಕದ ಕಾರ್ಯದರ್ಶಿ ವಿಷ್ಣು ವಿಜಯನ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಂದೇಶ, ಸಂಶೋಧಕರ ಸಂಘದ ಮಹೇಶ ಸೋಸಲೆ, ಗೋಪಾಲ್ ಮತ್ತು AIDSO ನ ಮಂಜು ಹಂಪಾಪುರ ಭಾಗವಹಿಸಿದ್ದರು.

ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಖಂಡಿಸಿದೆ. “ಶಿಕ್ಷಣವನ್ನು ಖಾಸಗೀಕರಣ ಮತ್ತು ವ್ಯಾಪಾರೀಕರಣಗೊಳಿಸುತ್ತಿರುವ ಸರ್ಕಾರ ವ್ಯಾಪಾರ ನೀತಿಯ ವಿರುದ್ಧ ಮತ್ತು ಗುಣಮಟ್ಟದ ಉನ್ನತ ಶಿಕ್ಷಣ ಉಚಿತವಾಗಿ ಸಿಗಬೇಕೆಂದು ಹೋರಾಟ ನಡೆಸುತ್ತಿರುತ್ತಿವ ಜೆಎನ್‌ಯು ವಿದ್ಯಾರ್ಥಿಗಳ ಜೊತೆ ಕೆವಿಎಸ್ ನಿಲ್ಲುತ್ತದೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೆ.ಎನ್.ಯು. ವಿದ್ಯಾರ್ಥಿಗಳ ಹೋರಾಟವನ್ನು ಈ ದೇಶದ ಬಡವರೆಲ್ಲರೂ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...