Homeಚಳವಳಿತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ...

ತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ

2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು?

- Advertisement -
- Advertisement -

ಹಾಸ್ಟೆಲ್‌ ಫೀಸ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳದ ವಿರುದ್ಧ ದೆಹಲಿಯ ಜವಾಹರ್‌ಲಾಲ್‌ ನೆಹರೂ ವಿವಿಯ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ರೀತಿಯ ಹೋರಾಟಗಳು ಹಿಂದೆ ನಡೆದಾಗ #IStandWithJNU ಎಂಬ ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿತ್ತು. ಆದರೆ ಈ ಬಾರಿ ಟ್ವಿಟ್ಟರ್‌ನಲ್ಲಿ #TaxPayersWithJNU ಎಂಬ ಹ್ಯಾಷ್‌ಟ್ಯಾಗ್‌ ಕೂಡ ಟ್ರೆಂಡ್‌ ಆಗುವ ಮೂಲಕ ಗಮನ ಸೆಳೆದಿದೆ.

ವಿದ್ಯಾರ್ಥಿಗಳು ನಿನ್ನೆ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್‌ ಮಾರ್ಚ್‌ ಅನ್ನು ಕ್ರೂರವಾಗಿ ಪೊಲೀಸರು ದಮನ ಮಾಡಿದ್ದರು. ಅಲ್ಲದೇ ವಿದ್ಯಾಥಿ೯ಗಳ ಮೇಲೆ ಎಫ್‌ಐಆರ್‌ ಕೂಡ ದಾಖಲಿಸಿದ್ದರು. ಈ ರೀತಿಯ ದಬ್ಬಾಳಿಕೆ ಹೆಚ್ಚಾದಂತೆ ವಿದ್ಯಾರ್ಥಿಗಳ ಪರವಾಗಿನ ಬೆಂಬಲದ ಅಲೆಯೂ ಸಹ ಹೆಚ್ಚಾಗಿದೆ. ಸಾವಿರಾರು ಜನ ವಿದ್ಯಾರ್ಥಿಗಳ ಧೀರೋದಾತ್ತ ಹೋರಾಟಕ್ಕೆ ಐಕ್ಯಮತ್ಯ ಸೂಚಿಸಿದ್ದಾರೆ.

ಉನ್ನತ ಶಿಕ್ಷಣಕ್ಕಾಗಿ ಸರ್ಕಾರವು ನಮ್ಮಿಂದ 94,000 ಕೋಟಿ ರೂಗಳನ್ನು ತೆರಿಗೆಯಾಗಿ ಸಂಗ್ರಹಿಸಿದೆ, ಆದರೆ ಇದು ಸಿಎಜಿ ವರದಿ ಪ್ರಕಾರ ಬಳಕೆಯಾಗದೆ ಉಳಿದಿದೆ. ಕನ್ಹಯ್ಯ ಕುಮಾರ್ ಅವರಂತಹ ಜನರು ಅಲ್ಲಿ ಅಧ್ಯಯನ ಮಾಡುವುದನ್ನು ತಡೆಯಲು ಜೆಎನ್‌ಯು ಶುಲ್ಕದಲ್ಲಿ ಹಲವಾರು ಪಟ್ಟು ಹೆಚ್ಚಳ ಮಾಡಲಾಗಿದೆ. ಇದು ಶಿಕ್ಷಣ ಮತ್ತು ಚಿಂತನೆಯ ಮೇಲಿನ ಯುದ್ಧ ಎಂದು ಹಿರಿಯ ವಕೀಲರಾದ ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಶುಲ್ಕ ಹೆಚ್ಚಳವಲ್ಲ. ಇದು ಶಿಕ್ಷಣದ ವ್ಯಾಪಾರೀಕರಣವಾಗಿದೆ. 2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು? ಭೇಟಿ ಪಡಾವೋ ಎಂದು ಕೇವಲ ಜಾಹಿರಾತು ಕೊಟ್ಟರೆ ಸಾಲದು. ಜೆಎನ್‌ಯು ಮೇಲಿನ ದಾಳಿ ಸಾಮಾನ್ಯ ಯುವ ಭಾರತೀಯರ ಉನ್ನತ ಶಿಕ್ಷಣದ ಮೇಲಿನ ಆಕ್ರಮಣವಾಗಿದೆ ಎಂದು ಹೋರಾಟಗಾರ್ತಿ ಕವಿತಾ ಕೃಷ್ಣನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿ ಬಾರಿಯೂ ಜೆಎನ್‌ಯುಗೆ ಹಣ ನೀಡಬೇಕೆಂದರೆ ನಮ್ಮ ತೆರಿಗೆ ಹಣ ಪೋಲು ಮಾಡುತ್ತಿದ್ದೀರಿ ಎಂದು ಬಿಜೆಪಿ ಬೆಂಬಲಿಗರು ಹರಿಹಾಯುತ್ತಿದ್ದರು. ಆದರೀಗ ದೇಶಾದ್ಯಂತ ಪ್ರತಿಮೆಗಳನ್ನು ಕಟ್ಟಲು, ಕುಂಭಮೇಳಗಳನ್ನು ನಡೆಸಲು ಹಣವಿದೆ, ಬಡಮಕ್ಕಳು ಕಲಿಯಲು ಹಣವಿಲ್ಲವೇ? ನಮ್ಮ ತೆರಿಗೆ ಹಣವನ್ನು ಏನು ಮಾಡಿದ್ದೀರಿ? ನಾವೆಲ್ಲಾ ಜೆಎನ್‌ಯು ವಿದ್ಯಾರ್ಥಿಗಳ ಪರವಿದ್ದೀವಿ ಎಂದು ನೆಟ್ಟಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೋಟ್ಯಾಧಿಪತಿ ಎಂಪಿಗಳಿಗೆ ಪಾರ್ಲಿಮೆಂಟ್‌ನಲ್ಲಿ ಸಬ್ಸಿಡಿ ದರಕ್ಕೆ ಊಟ ವಸತಿ ಒದಗಿಸುವ ಸರ್ಕಾರ ಮಕ್ಕಳ ಹಾಸ್ಟೆಲ್‌ ಫೀಸು ಹೆಚ್ಚಿಸುವುದೇಕೆ ಎಂದು ಕಿಡಿಕಾರಿದ್ದಾರೆ.

ನಾನೊಬ್ಬ ತೆರಿಗೆದಾರ. ನಾನು ಜೆಎನ್‌ಯೂ ಹೋರಾಟವನ್ನು ಸಂಪೂರ್ಣ ಬೆಂಬಲಿಸುತ್ತೇವೆ. ಏಕೆಂದರೆ ಭವಿಷ್ಯದ ಭಾರತ ಅವರೆ ಆಗಿದ್ದಾರೆ ಎಂದು ಮೀನಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಪುಟ್ಟ ಶಾಲಾಮಕ್ಕಳು ಜೆಎನ್‌ಯು ವಿದ್ಯಾರ್ಥಿಗಳ ಹೋರಾಟದ ಪರವಾಗಿ ವಿ ವಾಂಟ್‌ ಜಸ್ಟೀಸ್‌ ಎಂದು ಶಾಲಾ ಬಸ್‌ನೊಳಗಿಂದಲೇ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸುವ ವಿಡಿಯೋ ವೈರಲ್‌ ಆಗಿದೆ. ವಿಡಿಯೋ ನೋಡಿ

ಕೇವಲ ಟ್ವಿಟ್ಟರ್‌ನಲ್ಲಿ ಮಾತ್ರವಲ್ಲದೇ ಬೀದಿಗಳಲ್ಲಿಯು ಜನ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಜೆ.ಎನ್.ಯು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ, ಅವರ ಹೋರಾಟವನ್ನು ಬೆಂಬಲಿಸಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ SFI ನಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ SFI ಮೈಸೂರು ವಿವಿ ಘಟಕದ ಕಾರ್ಯದರ್ಶಿ ವಿಷ್ಣು ವಿಜಯನ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಂದೇಶ, ಸಂಶೋಧಕರ ಸಂಘದ ಮಹೇಶ ಸೋಸಲೆ, ಗೋಪಾಲ್ ಮತ್ತು AIDSO ನ ಮಂಜು ಹಂಪಾಪುರ ಭಾಗವಹಿಸಿದ್ದರು.

ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಖಂಡಿಸಿದೆ. “ಶಿಕ್ಷಣವನ್ನು ಖಾಸಗೀಕರಣ ಮತ್ತು ವ್ಯಾಪಾರೀಕರಣಗೊಳಿಸುತ್ತಿರುವ ಸರ್ಕಾರ ವ್ಯಾಪಾರ ನೀತಿಯ ವಿರುದ್ಧ ಮತ್ತು ಗುಣಮಟ್ಟದ ಉನ್ನತ ಶಿಕ್ಷಣ ಉಚಿತವಾಗಿ ಸಿಗಬೇಕೆಂದು ಹೋರಾಟ ನಡೆಸುತ್ತಿರುತ್ತಿವ ಜೆಎನ್‌ಯು ವಿದ್ಯಾರ್ಥಿಗಳ ಜೊತೆ ಕೆವಿಎಸ್ ನಿಲ್ಲುತ್ತದೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೆ.ಎನ್.ಯು. ವಿದ್ಯಾರ್ಥಿಗಳ ಹೋರಾಟವನ್ನು ಈ ದೇಶದ ಬಡವರೆಲ್ಲರೂ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...