Homeಚಳವಳಿತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ...

ತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ

2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು?

- Advertisement -
- Advertisement -

ಹಾಸ್ಟೆಲ್‌ ಫೀಸ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳದ ವಿರುದ್ಧ ದೆಹಲಿಯ ಜವಾಹರ್‌ಲಾಲ್‌ ನೆಹರೂ ವಿವಿಯ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ರೀತಿಯ ಹೋರಾಟಗಳು ಹಿಂದೆ ನಡೆದಾಗ #IStandWithJNU ಎಂಬ ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿತ್ತು. ಆದರೆ ಈ ಬಾರಿ ಟ್ವಿಟ್ಟರ್‌ನಲ್ಲಿ #TaxPayersWithJNU ಎಂಬ ಹ್ಯಾಷ್‌ಟ್ಯಾಗ್‌ ಕೂಡ ಟ್ರೆಂಡ್‌ ಆಗುವ ಮೂಲಕ ಗಮನ ಸೆಳೆದಿದೆ.

ವಿದ್ಯಾರ್ಥಿಗಳು ನಿನ್ನೆ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್‌ ಮಾರ್ಚ್‌ ಅನ್ನು ಕ್ರೂರವಾಗಿ ಪೊಲೀಸರು ದಮನ ಮಾಡಿದ್ದರು. ಅಲ್ಲದೇ ವಿದ್ಯಾಥಿ೯ಗಳ ಮೇಲೆ ಎಫ್‌ಐಆರ್‌ ಕೂಡ ದಾಖಲಿಸಿದ್ದರು. ಈ ರೀತಿಯ ದಬ್ಬಾಳಿಕೆ ಹೆಚ್ಚಾದಂತೆ ವಿದ್ಯಾರ್ಥಿಗಳ ಪರವಾಗಿನ ಬೆಂಬಲದ ಅಲೆಯೂ ಸಹ ಹೆಚ್ಚಾಗಿದೆ. ಸಾವಿರಾರು ಜನ ವಿದ್ಯಾರ್ಥಿಗಳ ಧೀರೋದಾತ್ತ ಹೋರಾಟಕ್ಕೆ ಐಕ್ಯಮತ್ಯ ಸೂಚಿಸಿದ್ದಾರೆ.

ಉನ್ನತ ಶಿಕ್ಷಣಕ್ಕಾಗಿ ಸರ್ಕಾರವು ನಮ್ಮಿಂದ 94,000 ಕೋಟಿ ರೂಗಳನ್ನು ತೆರಿಗೆಯಾಗಿ ಸಂಗ್ರಹಿಸಿದೆ, ಆದರೆ ಇದು ಸಿಎಜಿ ವರದಿ ಪ್ರಕಾರ ಬಳಕೆಯಾಗದೆ ಉಳಿದಿದೆ. ಕನ್ಹಯ್ಯ ಕುಮಾರ್ ಅವರಂತಹ ಜನರು ಅಲ್ಲಿ ಅಧ್ಯಯನ ಮಾಡುವುದನ್ನು ತಡೆಯಲು ಜೆಎನ್‌ಯು ಶುಲ್ಕದಲ್ಲಿ ಹಲವಾರು ಪಟ್ಟು ಹೆಚ್ಚಳ ಮಾಡಲಾಗಿದೆ. ಇದು ಶಿಕ್ಷಣ ಮತ್ತು ಚಿಂತನೆಯ ಮೇಲಿನ ಯುದ್ಧ ಎಂದು ಹಿರಿಯ ವಕೀಲರಾದ ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಶುಲ್ಕ ಹೆಚ್ಚಳವಲ್ಲ. ಇದು ಶಿಕ್ಷಣದ ವ್ಯಾಪಾರೀಕರಣವಾಗಿದೆ. 2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು? ಭೇಟಿ ಪಡಾವೋ ಎಂದು ಕೇವಲ ಜಾಹಿರಾತು ಕೊಟ್ಟರೆ ಸಾಲದು. ಜೆಎನ್‌ಯು ಮೇಲಿನ ದಾಳಿ ಸಾಮಾನ್ಯ ಯುವ ಭಾರತೀಯರ ಉನ್ನತ ಶಿಕ್ಷಣದ ಮೇಲಿನ ಆಕ್ರಮಣವಾಗಿದೆ ಎಂದು ಹೋರಾಟಗಾರ್ತಿ ಕವಿತಾ ಕೃಷ್ಣನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿ ಬಾರಿಯೂ ಜೆಎನ್‌ಯುಗೆ ಹಣ ನೀಡಬೇಕೆಂದರೆ ನಮ್ಮ ತೆರಿಗೆ ಹಣ ಪೋಲು ಮಾಡುತ್ತಿದ್ದೀರಿ ಎಂದು ಬಿಜೆಪಿ ಬೆಂಬಲಿಗರು ಹರಿಹಾಯುತ್ತಿದ್ದರು. ಆದರೀಗ ದೇಶಾದ್ಯಂತ ಪ್ರತಿಮೆಗಳನ್ನು ಕಟ್ಟಲು, ಕುಂಭಮೇಳಗಳನ್ನು ನಡೆಸಲು ಹಣವಿದೆ, ಬಡಮಕ್ಕಳು ಕಲಿಯಲು ಹಣವಿಲ್ಲವೇ? ನಮ್ಮ ತೆರಿಗೆ ಹಣವನ್ನು ಏನು ಮಾಡಿದ್ದೀರಿ? ನಾವೆಲ್ಲಾ ಜೆಎನ್‌ಯು ವಿದ್ಯಾರ್ಥಿಗಳ ಪರವಿದ್ದೀವಿ ಎಂದು ನೆಟ್ಟಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೋಟ್ಯಾಧಿಪತಿ ಎಂಪಿಗಳಿಗೆ ಪಾರ್ಲಿಮೆಂಟ್‌ನಲ್ಲಿ ಸಬ್ಸಿಡಿ ದರಕ್ಕೆ ಊಟ ವಸತಿ ಒದಗಿಸುವ ಸರ್ಕಾರ ಮಕ್ಕಳ ಹಾಸ್ಟೆಲ್‌ ಫೀಸು ಹೆಚ್ಚಿಸುವುದೇಕೆ ಎಂದು ಕಿಡಿಕಾರಿದ್ದಾರೆ.

ನಾನೊಬ್ಬ ತೆರಿಗೆದಾರ. ನಾನು ಜೆಎನ್‌ಯೂ ಹೋರಾಟವನ್ನು ಸಂಪೂರ್ಣ ಬೆಂಬಲಿಸುತ್ತೇವೆ. ಏಕೆಂದರೆ ಭವಿಷ್ಯದ ಭಾರತ ಅವರೆ ಆಗಿದ್ದಾರೆ ಎಂದು ಮೀನಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಪುಟ್ಟ ಶಾಲಾಮಕ್ಕಳು ಜೆಎನ್‌ಯು ವಿದ್ಯಾರ್ಥಿಗಳ ಹೋರಾಟದ ಪರವಾಗಿ ವಿ ವಾಂಟ್‌ ಜಸ್ಟೀಸ್‌ ಎಂದು ಶಾಲಾ ಬಸ್‌ನೊಳಗಿಂದಲೇ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸುವ ವಿಡಿಯೋ ವೈರಲ್‌ ಆಗಿದೆ. ವಿಡಿಯೋ ನೋಡಿ

ಕೇವಲ ಟ್ವಿಟ್ಟರ್‌ನಲ್ಲಿ ಮಾತ್ರವಲ್ಲದೇ ಬೀದಿಗಳಲ್ಲಿಯು ಜನ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಜೆ.ಎನ್.ಯು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ, ಅವರ ಹೋರಾಟವನ್ನು ಬೆಂಬಲಿಸಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ SFI ನಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ SFI ಮೈಸೂರು ವಿವಿ ಘಟಕದ ಕಾರ್ಯದರ್ಶಿ ವಿಷ್ಣು ವಿಜಯನ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಂದೇಶ, ಸಂಶೋಧಕರ ಸಂಘದ ಮಹೇಶ ಸೋಸಲೆ, ಗೋಪಾಲ್ ಮತ್ತು AIDSO ನ ಮಂಜು ಹಂಪಾಪುರ ಭಾಗವಹಿಸಿದ್ದರು.

ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಖಂಡಿಸಿದೆ. “ಶಿಕ್ಷಣವನ್ನು ಖಾಸಗೀಕರಣ ಮತ್ತು ವ್ಯಾಪಾರೀಕರಣಗೊಳಿಸುತ್ತಿರುವ ಸರ್ಕಾರ ವ್ಯಾಪಾರ ನೀತಿಯ ವಿರುದ್ಧ ಮತ್ತು ಗುಣಮಟ್ಟದ ಉನ್ನತ ಶಿಕ್ಷಣ ಉಚಿತವಾಗಿ ಸಿಗಬೇಕೆಂದು ಹೋರಾಟ ನಡೆಸುತ್ತಿರುತ್ತಿವ ಜೆಎನ್‌ಯು ವಿದ್ಯಾರ್ಥಿಗಳ ಜೊತೆ ಕೆವಿಎಸ್ ನಿಲ್ಲುತ್ತದೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೆ.ಎನ್.ಯು. ವಿದ್ಯಾರ್ಥಿಗಳ ಹೋರಾಟವನ್ನು ಈ ದೇಶದ ಬಡವರೆಲ್ಲರೂ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...