Homeಚಳವಳಿತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ...

ತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ

2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು?

- Advertisement -
- Advertisement -

ಹಾಸ್ಟೆಲ್‌ ಫೀಸ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳದ ವಿರುದ್ಧ ದೆಹಲಿಯ ಜವಾಹರ್‌ಲಾಲ್‌ ನೆಹರೂ ವಿವಿಯ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ರೀತಿಯ ಹೋರಾಟಗಳು ಹಿಂದೆ ನಡೆದಾಗ #IStandWithJNU ಎಂಬ ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿತ್ತು. ಆದರೆ ಈ ಬಾರಿ ಟ್ವಿಟ್ಟರ್‌ನಲ್ಲಿ #TaxPayersWithJNU ಎಂಬ ಹ್ಯಾಷ್‌ಟ್ಯಾಗ್‌ ಕೂಡ ಟ್ರೆಂಡ್‌ ಆಗುವ ಮೂಲಕ ಗಮನ ಸೆಳೆದಿದೆ.

ವಿದ್ಯಾರ್ಥಿಗಳು ನಿನ್ನೆ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್‌ ಮಾರ್ಚ್‌ ಅನ್ನು ಕ್ರೂರವಾಗಿ ಪೊಲೀಸರು ದಮನ ಮಾಡಿದ್ದರು. ಅಲ್ಲದೇ ವಿದ್ಯಾಥಿ೯ಗಳ ಮೇಲೆ ಎಫ್‌ಐಆರ್‌ ಕೂಡ ದಾಖಲಿಸಿದ್ದರು. ಈ ರೀತಿಯ ದಬ್ಬಾಳಿಕೆ ಹೆಚ್ಚಾದಂತೆ ವಿದ್ಯಾರ್ಥಿಗಳ ಪರವಾಗಿನ ಬೆಂಬಲದ ಅಲೆಯೂ ಸಹ ಹೆಚ್ಚಾಗಿದೆ. ಸಾವಿರಾರು ಜನ ವಿದ್ಯಾರ್ಥಿಗಳ ಧೀರೋದಾತ್ತ ಹೋರಾಟಕ್ಕೆ ಐಕ್ಯಮತ್ಯ ಸೂಚಿಸಿದ್ದಾರೆ.

ಉನ್ನತ ಶಿಕ್ಷಣಕ್ಕಾಗಿ ಸರ್ಕಾರವು ನಮ್ಮಿಂದ 94,000 ಕೋಟಿ ರೂಗಳನ್ನು ತೆರಿಗೆಯಾಗಿ ಸಂಗ್ರಹಿಸಿದೆ, ಆದರೆ ಇದು ಸಿಎಜಿ ವರದಿ ಪ್ರಕಾರ ಬಳಕೆಯಾಗದೆ ಉಳಿದಿದೆ. ಕನ್ಹಯ್ಯ ಕುಮಾರ್ ಅವರಂತಹ ಜನರು ಅಲ್ಲಿ ಅಧ್ಯಯನ ಮಾಡುವುದನ್ನು ತಡೆಯಲು ಜೆಎನ್‌ಯು ಶುಲ್ಕದಲ್ಲಿ ಹಲವಾರು ಪಟ್ಟು ಹೆಚ್ಚಳ ಮಾಡಲಾಗಿದೆ. ಇದು ಶಿಕ್ಷಣ ಮತ್ತು ಚಿಂತನೆಯ ಮೇಲಿನ ಯುದ್ಧ ಎಂದು ಹಿರಿಯ ವಕೀಲರಾದ ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಶುಲ್ಕ ಹೆಚ್ಚಳವಲ್ಲ. ಇದು ಶಿಕ್ಷಣದ ವ್ಯಾಪಾರೀಕರಣವಾಗಿದೆ. 2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು? ಭೇಟಿ ಪಡಾವೋ ಎಂದು ಕೇವಲ ಜಾಹಿರಾತು ಕೊಟ್ಟರೆ ಸಾಲದು. ಜೆಎನ್‌ಯು ಮೇಲಿನ ದಾಳಿ ಸಾಮಾನ್ಯ ಯುವ ಭಾರತೀಯರ ಉನ್ನತ ಶಿಕ್ಷಣದ ಮೇಲಿನ ಆಕ್ರಮಣವಾಗಿದೆ ಎಂದು ಹೋರಾಟಗಾರ್ತಿ ಕವಿತಾ ಕೃಷ್ಣನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿ ಬಾರಿಯೂ ಜೆಎನ್‌ಯುಗೆ ಹಣ ನೀಡಬೇಕೆಂದರೆ ನಮ್ಮ ತೆರಿಗೆ ಹಣ ಪೋಲು ಮಾಡುತ್ತಿದ್ದೀರಿ ಎಂದು ಬಿಜೆಪಿ ಬೆಂಬಲಿಗರು ಹರಿಹಾಯುತ್ತಿದ್ದರು. ಆದರೀಗ ದೇಶಾದ್ಯಂತ ಪ್ರತಿಮೆಗಳನ್ನು ಕಟ್ಟಲು, ಕುಂಭಮೇಳಗಳನ್ನು ನಡೆಸಲು ಹಣವಿದೆ, ಬಡಮಕ್ಕಳು ಕಲಿಯಲು ಹಣವಿಲ್ಲವೇ? ನಮ್ಮ ತೆರಿಗೆ ಹಣವನ್ನು ಏನು ಮಾಡಿದ್ದೀರಿ? ನಾವೆಲ್ಲಾ ಜೆಎನ್‌ಯು ವಿದ್ಯಾರ್ಥಿಗಳ ಪರವಿದ್ದೀವಿ ಎಂದು ನೆಟ್ಟಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೋಟ್ಯಾಧಿಪತಿ ಎಂಪಿಗಳಿಗೆ ಪಾರ್ಲಿಮೆಂಟ್‌ನಲ್ಲಿ ಸಬ್ಸಿಡಿ ದರಕ್ಕೆ ಊಟ ವಸತಿ ಒದಗಿಸುವ ಸರ್ಕಾರ ಮಕ್ಕಳ ಹಾಸ್ಟೆಲ್‌ ಫೀಸು ಹೆಚ್ಚಿಸುವುದೇಕೆ ಎಂದು ಕಿಡಿಕಾರಿದ್ದಾರೆ.

ನಾನೊಬ್ಬ ತೆರಿಗೆದಾರ. ನಾನು ಜೆಎನ್‌ಯೂ ಹೋರಾಟವನ್ನು ಸಂಪೂರ್ಣ ಬೆಂಬಲಿಸುತ್ತೇವೆ. ಏಕೆಂದರೆ ಭವಿಷ್ಯದ ಭಾರತ ಅವರೆ ಆಗಿದ್ದಾರೆ ಎಂದು ಮೀನಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಪುಟ್ಟ ಶಾಲಾಮಕ್ಕಳು ಜೆಎನ್‌ಯು ವಿದ್ಯಾರ್ಥಿಗಳ ಹೋರಾಟದ ಪರವಾಗಿ ವಿ ವಾಂಟ್‌ ಜಸ್ಟೀಸ್‌ ಎಂದು ಶಾಲಾ ಬಸ್‌ನೊಳಗಿಂದಲೇ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸುವ ವಿಡಿಯೋ ವೈರಲ್‌ ಆಗಿದೆ. ವಿಡಿಯೋ ನೋಡಿ

ಕೇವಲ ಟ್ವಿಟ್ಟರ್‌ನಲ್ಲಿ ಮಾತ್ರವಲ್ಲದೇ ಬೀದಿಗಳಲ್ಲಿಯು ಜನ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಜೆ.ಎನ್.ಯು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ, ಅವರ ಹೋರಾಟವನ್ನು ಬೆಂಬಲಿಸಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ SFI ನಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ SFI ಮೈಸೂರು ವಿವಿ ಘಟಕದ ಕಾರ್ಯದರ್ಶಿ ವಿಷ್ಣು ವಿಜಯನ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಂದೇಶ, ಸಂಶೋಧಕರ ಸಂಘದ ಮಹೇಶ ಸೋಸಲೆ, ಗೋಪಾಲ್ ಮತ್ತು AIDSO ನ ಮಂಜು ಹಂಪಾಪುರ ಭಾಗವಹಿಸಿದ್ದರು.

ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಖಂಡಿಸಿದೆ. “ಶಿಕ್ಷಣವನ್ನು ಖಾಸಗೀಕರಣ ಮತ್ತು ವ್ಯಾಪಾರೀಕರಣಗೊಳಿಸುತ್ತಿರುವ ಸರ್ಕಾರ ವ್ಯಾಪಾರ ನೀತಿಯ ವಿರುದ್ಧ ಮತ್ತು ಗುಣಮಟ್ಟದ ಉನ್ನತ ಶಿಕ್ಷಣ ಉಚಿತವಾಗಿ ಸಿಗಬೇಕೆಂದು ಹೋರಾಟ ನಡೆಸುತ್ತಿರುತ್ತಿವ ಜೆಎನ್‌ಯು ವಿದ್ಯಾರ್ಥಿಗಳ ಜೊತೆ ಕೆವಿಎಸ್ ನಿಲ್ಲುತ್ತದೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೆ.ಎನ್.ಯು. ವಿದ್ಯಾರ್ಥಿಗಳ ಹೋರಾಟವನ್ನು ಈ ದೇಶದ ಬಡವರೆಲ್ಲರೂ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...