Homeಚಳವಳಿತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ...

ತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ

2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು?

- Advertisement -
- Advertisement -

ಹಾಸ್ಟೆಲ್‌ ಫೀಸ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳದ ವಿರುದ್ಧ ದೆಹಲಿಯ ಜವಾಹರ್‌ಲಾಲ್‌ ನೆಹರೂ ವಿವಿಯ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ರೀತಿಯ ಹೋರಾಟಗಳು ಹಿಂದೆ ನಡೆದಾಗ #IStandWithJNU ಎಂಬ ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿತ್ತು. ಆದರೆ ಈ ಬಾರಿ ಟ್ವಿಟ್ಟರ್‌ನಲ್ಲಿ #TaxPayersWithJNU ಎಂಬ ಹ್ಯಾಷ್‌ಟ್ಯಾಗ್‌ ಕೂಡ ಟ್ರೆಂಡ್‌ ಆಗುವ ಮೂಲಕ ಗಮನ ಸೆಳೆದಿದೆ.

ವಿದ್ಯಾರ್ಥಿಗಳು ನಿನ್ನೆ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್‌ ಮಾರ್ಚ್‌ ಅನ್ನು ಕ್ರೂರವಾಗಿ ಪೊಲೀಸರು ದಮನ ಮಾಡಿದ್ದರು. ಅಲ್ಲದೇ ವಿದ್ಯಾಥಿ೯ಗಳ ಮೇಲೆ ಎಫ್‌ಐಆರ್‌ ಕೂಡ ದಾಖಲಿಸಿದ್ದರು. ಈ ರೀತಿಯ ದಬ್ಬಾಳಿಕೆ ಹೆಚ್ಚಾದಂತೆ ವಿದ್ಯಾರ್ಥಿಗಳ ಪರವಾಗಿನ ಬೆಂಬಲದ ಅಲೆಯೂ ಸಹ ಹೆಚ್ಚಾಗಿದೆ. ಸಾವಿರಾರು ಜನ ವಿದ್ಯಾರ್ಥಿಗಳ ಧೀರೋದಾತ್ತ ಹೋರಾಟಕ್ಕೆ ಐಕ್ಯಮತ್ಯ ಸೂಚಿಸಿದ್ದಾರೆ.

ಉನ್ನತ ಶಿಕ್ಷಣಕ್ಕಾಗಿ ಸರ್ಕಾರವು ನಮ್ಮಿಂದ 94,000 ಕೋಟಿ ರೂಗಳನ್ನು ತೆರಿಗೆಯಾಗಿ ಸಂಗ್ರಹಿಸಿದೆ, ಆದರೆ ಇದು ಸಿಎಜಿ ವರದಿ ಪ್ರಕಾರ ಬಳಕೆಯಾಗದೆ ಉಳಿದಿದೆ. ಕನ್ಹಯ್ಯ ಕುಮಾರ್ ಅವರಂತಹ ಜನರು ಅಲ್ಲಿ ಅಧ್ಯಯನ ಮಾಡುವುದನ್ನು ತಡೆಯಲು ಜೆಎನ್‌ಯು ಶುಲ್ಕದಲ್ಲಿ ಹಲವಾರು ಪಟ್ಟು ಹೆಚ್ಚಳ ಮಾಡಲಾಗಿದೆ. ಇದು ಶಿಕ್ಷಣ ಮತ್ತು ಚಿಂತನೆಯ ಮೇಲಿನ ಯುದ್ಧ ಎಂದು ಹಿರಿಯ ವಕೀಲರಾದ ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಶುಲ್ಕ ಹೆಚ್ಚಳವಲ್ಲ. ಇದು ಶಿಕ್ಷಣದ ವ್ಯಾಪಾರೀಕರಣವಾಗಿದೆ. 2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು? ಭೇಟಿ ಪಡಾವೋ ಎಂದು ಕೇವಲ ಜಾಹಿರಾತು ಕೊಟ್ಟರೆ ಸಾಲದು. ಜೆಎನ್‌ಯು ಮೇಲಿನ ದಾಳಿ ಸಾಮಾನ್ಯ ಯುವ ಭಾರತೀಯರ ಉನ್ನತ ಶಿಕ್ಷಣದ ಮೇಲಿನ ಆಕ್ರಮಣವಾಗಿದೆ ಎಂದು ಹೋರಾಟಗಾರ್ತಿ ಕವಿತಾ ಕೃಷ್ಣನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿ ಬಾರಿಯೂ ಜೆಎನ್‌ಯುಗೆ ಹಣ ನೀಡಬೇಕೆಂದರೆ ನಮ್ಮ ತೆರಿಗೆ ಹಣ ಪೋಲು ಮಾಡುತ್ತಿದ್ದೀರಿ ಎಂದು ಬಿಜೆಪಿ ಬೆಂಬಲಿಗರು ಹರಿಹಾಯುತ್ತಿದ್ದರು. ಆದರೀಗ ದೇಶಾದ್ಯಂತ ಪ್ರತಿಮೆಗಳನ್ನು ಕಟ್ಟಲು, ಕುಂಭಮೇಳಗಳನ್ನು ನಡೆಸಲು ಹಣವಿದೆ, ಬಡಮಕ್ಕಳು ಕಲಿಯಲು ಹಣವಿಲ್ಲವೇ? ನಮ್ಮ ತೆರಿಗೆ ಹಣವನ್ನು ಏನು ಮಾಡಿದ್ದೀರಿ? ನಾವೆಲ್ಲಾ ಜೆಎನ್‌ಯು ವಿದ್ಯಾರ್ಥಿಗಳ ಪರವಿದ್ದೀವಿ ಎಂದು ನೆಟ್ಟಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೋಟ್ಯಾಧಿಪತಿ ಎಂಪಿಗಳಿಗೆ ಪಾರ್ಲಿಮೆಂಟ್‌ನಲ್ಲಿ ಸಬ್ಸಿಡಿ ದರಕ್ಕೆ ಊಟ ವಸತಿ ಒದಗಿಸುವ ಸರ್ಕಾರ ಮಕ್ಕಳ ಹಾಸ್ಟೆಲ್‌ ಫೀಸು ಹೆಚ್ಚಿಸುವುದೇಕೆ ಎಂದು ಕಿಡಿಕಾರಿದ್ದಾರೆ.

ನಾನೊಬ್ಬ ತೆರಿಗೆದಾರ. ನಾನು ಜೆಎನ್‌ಯೂ ಹೋರಾಟವನ್ನು ಸಂಪೂರ್ಣ ಬೆಂಬಲಿಸುತ್ತೇವೆ. ಏಕೆಂದರೆ ಭವಿಷ್ಯದ ಭಾರತ ಅವರೆ ಆಗಿದ್ದಾರೆ ಎಂದು ಮೀನಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಪುಟ್ಟ ಶಾಲಾಮಕ್ಕಳು ಜೆಎನ್‌ಯು ವಿದ್ಯಾರ್ಥಿಗಳ ಹೋರಾಟದ ಪರವಾಗಿ ವಿ ವಾಂಟ್‌ ಜಸ್ಟೀಸ್‌ ಎಂದು ಶಾಲಾ ಬಸ್‌ನೊಳಗಿಂದಲೇ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸುವ ವಿಡಿಯೋ ವೈರಲ್‌ ಆಗಿದೆ. ವಿಡಿಯೋ ನೋಡಿ

ಕೇವಲ ಟ್ವಿಟ್ಟರ್‌ನಲ್ಲಿ ಮಾತ್ರವಲ್ಲದೇ ಬೀದಿಗಳಲ್ಲಿಯು ಜನ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಜೆ.ಎನ್.ಯು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ, ಅವರ ಹೋರಾಟವನ್ನು ಬೆಂಬಲಿಸಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ SFI ನಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ SFI ಮೈಸೂರು ವಿವಿ ಘಟಕದ ಕಾರ್ಯದರ್ಶಿ ವಿಷ್ಣು ವಿಜಯನ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಂದೇಶ, ಸಂಶೋಧಕರ ಸಂಘದ ಮಹೇಶ ಸೋಸಲೆ, ಗೋಪಾಲ್ ಮತ್ತು AIDSO ನ ಮಂಜು ಹಂಪಾಪುರ ಭಾಗವಹಿಸಿದ್ದರು.

ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಖಂಡಿಸಿದೆ. “ಶಿಕ್ಷಣವನ್ನು ಖಾಸಗೀಕರಣ ಮತ್ತು ವ್ಯಾಪಾರೀಕರಣಗೊಳಿಸುತ್ತಿರುವ ಸರ್ಕಾರ ವ್ಯಾಪಾರ ನೀತಿಯ ವಿರುದ್ಧ ಮತ್ತು ಗುಣಮಟ್ಟದ ಉನ್ನತ ಶಿಕ್ಷಣ ಉಚಿತವಾಗಿ ಸಿಗಬೇಕೆಂದು ಹೋರಾಟ ನಡೆಸುತ್ತಿರುತ್ತಿವ ಜೆಎನ್‌ಯು ವಿದ್ಯಾರ್ಥಿಗಳ ಜೊತೆ ಕೆವಿಎಸ್ ನಿಲ್ಲುತ್ತದೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೆ.ಎನ್.ಯು. ವಿದ್ಯಾರ್ಥಿಗಳ ಹೋರಾಟವನ್ನು ಈ ದೇಶದ ಬಡವರೆಲ್ಲರೂ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...