Homeಚಳವಳಿತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ...

ತೆರಿಗೆ ಕಟ್ಟುವ (TaxPayersWithJNU) ನಾವು ಕೂಡ ನಿಮ್ಮ ಜೊತೆಗಿದ್ದೇವೆ: JNU ವಿದ್ಯಾರ್ಥಿಗಳ ಹೋರಾಟಕ್ಕೆ ದೇಶಾದ್ಯಂತ ಭಾರೀ ಬೆಂಬಲ

2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು?

- Advertisement -
- Advertisement -

ಹಾಸ್ಟೆಲ್‌ ಫೀಸ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳದ ವಿರುದ್ಧ ದೆಹಲಿಯ ಜವಾಹರ್‌ಲಾಲ್‌ ನೆಹರೂ ವಿವಿಯ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ರೀತಿಯ ಹೋರಾಟಗಳು ಹಿಂದೆ ನಡೆದಾಗ #IStandWithJNU ಎಂಬ ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿತ್ತು. ಆದರೆ ಈ ಬಾರಿ ಟ್ವಿಟ್ಟರ್‌ನಲ್ಲಿ #TaxPayersWithJNU ಎಂಬ ಹ್ಯಾಷ್‌ಟ್ಯಾಗ್‌ ಕೂಡ ಟ್ರೆಂಡ್‌ ಆಗುವ ಮೂಲಕ ಗಮನ ಸೆಳೆದಿದೆ.

ವಿದ್ಯಾರ್ಥಿಗಳು ನಿನ್ನೆ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್‌ ಮಾರ್ಚ್‌ ಅನ್ನು ಕ್ರೂರವಾಗಿ ಪೊಲೀಸರು ದಮನ ಮಾಡಿದ್ದರು. ಅಲ್ಲದೇ ವಿದ್ಯಾಥಿ೯ಗಳ ಮೇಲೆ ಎಫ್‌ಐಆರ್‌ ಕೂಡ ದಾಖಲಿಸಿದ್ದರು. ಈ ರೀತಿಯ ದಬ್ಬಾಳಿಕೆ ಹೆಚ್ಚಾದಂತೆ ವಿದ್ಯಾರ್ಥಿಗಳ ಪರವಾಗಿನ ಬೆಂಬಲದ ಅಲೆಯೂ ಸಹ ಹೆಚ್ಚಾಗಿದೆ. ಸಾವಿರಾರು ಜನ ವಿದ್ಯಾರ್ಥಿಗಳ ಧೀರೋದಾತ್ತ ಹೋರಾಟಕ್ಕೆ ಐಕ್ಯಮತ್ಯ ಸೂಚಿಸಿದ್ದಾರೆ.

ಉನ್ನತ ಶಿಕ್ಷಣಕ್ಕಾಗಿ ಸರ್ಕಾರವು ನಮ್ಮಿಂದ 94,000 ಕೋಟಿ ರೂಗಳನ್ನು ತೆರಿಗೆಯಾಗಿ ಸಂಗ್ರಹಿಸಿದೆ, ಆದರೆ ಇದು ಸಿಎಜಿ ವರದಿ ಪ್ರಕಾರ ಬಳಕೆಯಾಗದೆ ಉಳಿದಿದೆ. ಕನ್ಹಯ್ಯ ಕುಮಾರ್ ಅವರಂತಹ ಜನರು ಅಲ್ಲಿ ಅಧ್ಯಯನ ಮಾಡುವುದನ್ನು ತಡೆಯಲು ಜೆಎನ್‌ಯು ಶುಲ್ಕದಲ್ಲಿ ಹಲವಾರು ಪಟ್ಟು ಹೆಚ್ಚಳ ಮಾಡಲಾಗಿದೆ. ಇದು ಶಿಕ್ಷಣ ಮತ್ತು ಚಿಂತನೆಯ ಮೇಲಿನ ಯುದ್ಧ ಎಂದು ಹಿರಿಯ ವಕೀಲರಾದ ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಶುಲ್ಕ ಹೆಚ್ಚಳವಲ್ಲ. ಇದು ಶಿಕ್ಷಣದ ವ್ಯಾಪಾರೀಕರಣವಾಗಿದೆ. 2013ರಿಂದ ಜೆಎನ್‌ಯುನಲ್ಲಿ ಶೇ. 50% ಕ್ಕಿಂತ ಹೆಚ್ಚಿನ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ರೀತಿ ಸಾವಿರ ಪಟ್ಟು ಶುಲ್ಕ ಹೆಚ್ಚಿಸಿದರೆ ಆ ಹೆಣ್ಣು ಮಕ್ಕಳ ಶಿಕ್ಷಣದ ಗತಿಯೇನು? ಭೇಟಿ ಪಡಾವೋ ಎಂದು ಕೇವಲ ಜಾಹಿರಾತು ಕೊಟ್ಟರೆ ಸಾಲದು. ಜೆಎನ್‌ಯು ಮೇಲಿನ ದಾಳಿ ಸಾಮಾನ್ಯ ಯುವ ಭಾರತೀಯರ ಉನ್ನತ ಶಿಕ್ಷಣದ ಮೇಲಿನ ಆಕ್ರಮಣವಾಗಿದೆ ಎಂದು ಹೋರಾಟಗಾರ್ತಿ ಕವಿತಾ ಕೃಷ್ಣನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿ ಬಾರಿಯೂ ಜೆಎನ್‌ಯುಗೆ ಹಣ ನೀಡಬೇಕೆಂದರೆ ನಮ್ಮ ತೆರಿಗೆ ಹಣ ಪೋಲು ಮಾಡುತ್ತಿದ್ದೀರಿ ಎಂದು ಬಿಜೆಪಿ ಬೆಂಬಲಿಗರು ಹರಿಹಾಯುತ್ತಿದ್ದರು. ಆದರೀಗ ದೇಶಾದ್ಯಂತ ಪ್ರತಿಮೆಗಳನ್ನು ಕಟ್ಟಲು, ಕುಂಭಮೇಳಗಳನ್ನು ನಡೆಸಲು ಹಣವಿದೆ, ಬಡಮಕ್ಕಳು ಕಲಿಯಲು ಹಣವಿಲ್ಲವೇ? ನಮ್ಮ ತೆರಿಗೆ ಹಣವನ್ನು ಏನು ಮಾಡಿದ್ದೀರಿ? ನಾವೆಲ್ಲಾ ಜೆಎನ್‌ಯು ವಿದ್ಯಾರ್ಥಿಗಳ ಪರವಿದ್ದೀವಿ ಎಂದು ನೆಟ್ಟಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೋಟ್ಯಾಧಿಪತಿ ಎಂಪಿಗಳಿಗೆ ಪಾರ್ಲಿಮೆಂಟ್‌ನಲ್ಲಿ ಸಬ್ಸಿಡಿ ದರಕ್ಕೆ ಊಟ ವಸತಿ ಒದಗಿಸುವ ಸರ್ಕಾರ ಮಕ್ಕಳ ಹಾಸ್ಟೆಲ್‌ ಫೀಸು ಹೆಚ್ಚಿಸುವುದೇಕೆ ಎಂದು ಕಿಡಿಕಾರಿದ್ದಾರೆ.

ನಾನೊಬ್ಬ ತೆರಿಗೆದಾರ. ನಾನು ಜೆಎನ್‌ಯೂ ಹೋರಾಟವನ್ನು ಸಂಪೂರ್ಣ ಬೆಂಬಲಿಸುತ್ತೇವೆ. ಏಕೆಂದರೆ ಭವಿಷ್ಯದ ಭಾರತ ಅವರೆ ಆಗಿದ್ದಾರೆ ಎಂದು ಮೀನಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಪುಟ್ಟ ಶಾಲಾಮಕ್ಕಳು ಜೆಎನ್‌ಯು ವಿದ್ಯಾರ್ಥಿಗಳ ಹೋರಾಟದ ಪರವಾಗಿ ವಿ ವಾಂಟ್‌ ಜಸ್ಟೀಸ್‌ ಎಂದು ಶಾಲಾ ಬಸ್‌ನೊಳಗಿಂದಲೇ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸುವ ವಿಡಿಯೋ ವೈರಲ್‌ ಆಗಿದೆ. ವಿಡಿಯೋ ನೋಡಿ

ಕೇವಲ ಟ್ವಿಟ್ಟರ್‌ನಲ್ಲಿ ಮಾತ್ರವಲ್ಲದೇ ಬೀದಿಗಳಲ್ಲಿಯು ಜನ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಜೆ.ಎನ್.ಯು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ, ಅವರ ಹೋರಾಟವನ್ನು ಬೆಂಬಲಿಸಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ SFI ನಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ SFI ಮೈಸೂರು ವಿವಿ ಘಟಕದ ಕಾರ್ಯದರ್ಶಿ ವಿಷ್ಣು ವಿಜಯನ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಂದೇಶ, ಸಂಶೋಧಕರ ಸಂಘದ ಮಹೇಶ ಸೋಸಲೆ, ಗೋಪಾಲ್ ಮತ್ತು AIDSO ನ ಮಂಜು ಹಂಪಾಪುರ ಭಾಗವಹಿಸಿದ್ದರು.

ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಖಂಡಿಸಿದೆ. “ಶಿಕ್ಷಣವನ್ನು ಖಾಸಗೀಕರಣ ಮತ್ತು ವ್ಯಾಪಾರೀಕರಣಗೊಳಿಸುತ್ತಿರುವ ಸರ್ಕಾರ ವ್ಯಾಪಾರ ನೀತಿಯ ವಿರುದ್ಧ ಮತ್ತು ಗುಣಮಟ್ಟದ ಉನ್ನತ ಶಿಕ್ಷಣ ಉಚಿತವಾಗಿ ಸಿಗಬೇಕೆಂದು ಹೋರಾಟ ನಡೆಸುತ್ತಿರುತ್ತಿವ ಜೆಎನ್‌ಯು ವಿದ್ಯಾರ್ಥಿಗಳ ಜೊತೆ ಕೆವಿಎಸ್ ನಿಲ್ಲುತ್ತದೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೆ.ಎನ್.ಯು. ವಿದ್ಯಾರ್ಥಿಗಳ ಹೋರಾಟವನ್ನು ಈ ದೇಶದ ಬಡವರೆಲ್ಲರೂ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...