Homeಚಳವಳಿಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ...

ಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ ಆಕ್ರೋಶ

- Advertisement -
- Advertisement -

ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಜಾರಿಗೆ ತರಲು ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಕುರಿತ ಸ್ಥಾಯಿ ಸಮಿತಿಯ ಶಿಫಾರಸನ್ನು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ತೀವ್ರವಾಗಿ ಖಂಡಿಸಿದೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ಕಿಸಾನ ಸಭಾ, ಸ್ಥಾಯಿ ಸಮಿತಿಯ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದೆ. ಇದು ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ  ಮತ್ತು  ಈ ಹೋರಾಟದ 300 ಹುತಾತ್ಮರಿಗೆ ಮಾಡಿದ ಅವಮಾನ ಎಂದು ಎಐಕೆಎಸ್ ಅಧ್ಯಕ್ಷ ಅಶೋಕ್ ಧವಾಲೆ, ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ತಿಳಿಸಿದ್ದಾರೆ.

2020 ರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ ಜಾರಿಗೆ ತರಲು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಸ್ಥಾಯಿ ಸಮಿತಿಯ ಶಿಫಾರಸನ್ನು ಎಐಕೆಎಸ್ ಖಂಡಿಸಿದೆ. ಈ ಸ್ಥಾಯಿ ಸಮಿತಿಯ ಈ ಶಿಫಾರಸು ರೈತರು ಮತ್ತು ಜನಸಾಮಾನ್ಯರ ವಿರುದ್ಧದ  ಮನೋಭಾವನೆ ಹೊಂದಿದೆ. ನಮ್ಮ ದೇಶ, ನಮ್ಮ ರೈತರು, ಐತಿಹಾಸಿಕ ಹೋರಾಟದ ಸುಮಾರು 300 ಹುತಾತ್ಮರಿಗೆ ಮಾಡಿದ ಅವಮಾನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಮೂರು ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸುವುದಾಗಿ ಹೇಳಿಕೊಳ್ಳುವ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ  ಅದೇ ರೀತಿಯ ನಿರ್ಣಯವನ್ನು ಅಂಗೀಕರಿಸಿದ ಟಿಎಂಸಿ ತನ್ನ ನಾಯಕನ ನೇತೃತ್ವದ ಸಮಿತಿಯು ರೈತರಿಗೆ ದ್ರೋಹ ಎಸಗುವ  ಶಿಫಾರಸನ್ನು ಹೇಗೆ ನೀಡಿದೆ ಎಂಬುದನ್ನು ವಿವರಿಸಬೇಕು ಎಂದಿದೆ.

“ಕೆಲವು ಅನಿವಾರ್ಯತೆ” ಯಿಂದಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಬಂಡೋಪಾಧ್ಯಾಯ 2021 ಮಾರ್ಚ್ 18 ರಂದು ನಡೆದ ಕೊನೆಯ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.  ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಅಜಯ್ ಮಿಶ್ರಾ ಟೆನಿ ಅವರ ಅಡಿಯಲ್ಲಿ ವರದಿಯನ್ನು ಅಂಗೀಕರಿಸಿದ್ದು ಜನದ್ರೋಹವಾಗಿದೆ ಎಂದು ಟಿಎಂಸಿ ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಮುಖ್ಯ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಸಮಿತಿಯ ಇತರ ಪಕ್ಷಗಳು ತಮ್ಮ ಸದಸ್ಯರು ಅಂತಹ ಶಿಫಾರಸನ್ನು ಹೇಗೆ ಅನುಮತಿಸಿದ್ದಾರೆ ಎಂಬುದಕ್ಕೆ ಉತ್ತರಿಸಬೇಕಾದ ಜರೂರು ಇದೆ ಕಿಸಾನ್ ಸಭಾ ಆಗ್ರಹಿಸಿದೆ.

ಇದನ್ನೂ ಓದಿ: ಅಸ್ಸಾಂ ವಿಧಾನಸಭಾ ಚುನಾವಣೆ – ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ; ನೀಡಿದ ಭರವಸೆಗಳೇನು?

ಸ್ಥಾಯಿ ಸಮಿತಿ ವರದಿಯು ” ಈ ಕಾಯ್ದೆಯು ಕೃಷಿ ಕ್ಷೇತ್ರದಲ್ಲಿ ಅಪಾರ ಬಳಕೆಯಾಗದ ಸಂಪನ್ಮೂಲಗಳನ್ನು ಬಳಸುವ ಮೂಲಕ  ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ಇದು ವರ್ಧಿತ ಹೂಡಿಕೆಗಳಿಗೆ ವಾತಾವರಣವನ್ನು ಸೃಷ್ಟಿಸುತ್ತದೆ, ಕೃಷಿ ಮಾರುಕಟ್ಟೆಯಲ್ಲಿ ನ್ಯಾಯಯುತ ಮತ್ತು ಉತ್ಪಾದಕ ಸ್ಪರ್ಧೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ” ಎಂದು ಸ್ಥಾಯಿ ಸಮಿತಿ ನೀಡಿರುವ ಸಮರ್ಥನೆಯನ್ನು ಕಿಸಾನ್ ಸಭಾ ಪ್ರಶ್ನಿಸಿದೆ.

’ಇದು ಶುದ್ಧ ಸುಳ್ಳು. ರೈತರ ಸಂಘಟನೆಗಳು ಮತ್ತು ಸಂಯುಕ್ತಾ ಕಿಸಾನ್ ಮೋರ್ಚಾ ತೋರಿಸಿ ಕೊಟ್ಟಂತೆ ಇದು ಸಂಪೂರ್ಣವಾಗಿ ಸುಳ್ಳು ಮತ್ತು ವಾಸ್ತವದಿಂದ ದೂರವಿದೆ. ಇದು ಕಾರ್ಪೊರೇಟ್ ಹೂಡಿಕೆ  ಮತ್ತು ಕಾಳಸಂತೆ ಮಾರುಕಟ್ಟೆಗೆ ಅವಕಾಶ ನೀಡುತ್ತದೆ. ಇದರಿಂದಾಗಿ ಕೃತಕ ಕೊರತೆ ಸೃಷಿಯಾಗುತ್ತದೆ ಮತ್ತು ರೈತರಿಗೆ ಯಾವುದೇ ಪ್ರಯೋಜನವಿಲ್ಲದೆ ಜನಸಾಮಾನ್ಯರಿಗೆ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಇದು ಅಂತಿಮವಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ತೆಗೆದುಹಾಕುತ್ತದೆ’ ಎಂದು ಕಿಸಾನ್ ಸಭಾ ಆರೋಪಿಸಿದೆ.

ಈ ಶಿಫಾರಸು ಸ್ವೀಕಾರಾರ್ಹವಲ್ಲ ಮತ್ತು ಮೂರು ರೈತ ವಿರೋಧಿ ಕಾಯ್ದೆಗಳನ್ನು ಸಾರ್ವಜನಿಕವಾಗಿ ವಿರೋಧಿಸುವುದಾಗಿ ಹೇಳಿಕೊಳ್ಳುವ ಆದರೆ ಅಂತಹ ಶಿಫಾರಸಿಗೆ ಕಾರಣವಾಗಿರುವ  ಪಕ್ಷಗಳ ಬೂಟಾಟಿಕೆಗಳನ್ನು ಬಹಿರಂಗಪಡಿಸುವಂತೆ ನಾವು ರೈತರಿಗೆ ಕರೆ ನೀಡುತ್ತೇವೆ ಎಂದಿದೆ.

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ ರೈತ ವಿರೋಧಿ, ಕಾರ್ಪೊರೇಟ್ ಪರ ನೀತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಸ್ಥಾಯಿ ಸಮಿತಿಯ ಶಿಫಾರಸನ್ನು ವಿರೋಧಿಸಲು ದೇಶದ ರೈತರು ಮತ್ತು ಜನಸಾಮಾನ್ಯರಿಗೆ ಎಐಕೆಎಸ್ ಕರೆ ನೀಡಿದೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....