Homeಚಳವಳಿಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ...

ಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ ಆಕ್ರೋಶ

- Advertisement -
- Advertisement -

ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಜಾರಿಗೆ ತರಲು ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಕುರಿತ ಸ್ಥಾಯಿ ಸಮಿತಿಯ ಶಿಫಾರಸನ್ನು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ತೀವ್ರವಾಗಿ ಖಂಡಿಸಿದೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ಕಿಸಾನ ಸಭಾ, ಸ್ಥಾಯಿ ಸಮಿತಿಯ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದೆ. ಇದು ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ  ಮತ್ತು  ಈ ಹೋರಾಟದ 300 ಹುತಾತ್ಮರಿಗೆ ಮಾಡಿದ ಅವಮಾನ ಎಂದು ಎಐಕೆಎಸ್ ಅಧ್ಯಕ್ಷ ಅಶೋಕ್ ಧವಾಲೆ, ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ತಿಳಿಸಿದ್ದಾರೆ.

2020 ರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ ಜಾರಿಗೆ ತರಲು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಸ್ಥಾಯಿ ಸಮಿತಿಯ ಶಿಫಾರಸನ್ನು ಎಐಕೆಎಸ್ ಖಂಡಿಸಿದೆ. ಈ ಸ್ಥಾಯಿ ಸಮಿತಿಯ ಈ ಶಿಫಾರಸು ರೈತರು ಮತ್ತು ಜನಸಾಮಾನ್ಯರ ವಿರುದ್ಧದ  ಮನೋಭಾವನೆ ಹೊಂದಿದೆ. ನಮ್ಮ ದೇಶ, ನಮ್ಮ ರೈತರು, ಐತಿಹಾಸಿಕ ಹೋರಾಟದ ಸುಮಾರು 300 ಹುತಾತ್ಮರಿಗೆ ಮಾಡಿದ ಅವಮಾನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಮೂರು ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸುವುದಾಗಿ ಹೇಳಿಕೊಳ್ಳುವ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ  ಅದೇ ರೀತಿಯ ನಿರ್ಣಯವನ್ನು ಅಂಗೀಕರಿಸಿದ ಟಿಎಂಸಿ ತನ್ನ ನಾಯಕನ ನೇತೃತ್ವದ ಸಮಿತಿಯು ರೈತರಿಗೆ ದ್ರೋಹ ಎಸಗುವ  ಶಿಫಾರಸನ್ನು ಹೇಗೆ ನೀಡಿದೆ ಎಂಬುದನ್ನು ವಿವರಿಸಬೇಕು ಎಂದಿದೆ.

“ಕೆಲವು ಅನಿವಾರ್ಯತೆ” ಯಿಂದಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಬಂಡೋಪಾಧ್ಯಾಯ 2021 ಮಾರ್ಚ್ 18 ರಂದು ನಡೆದ ಕೊನೆಯ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.  ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಅಜಯ್ ಮಿಶ್ರಾ ಟೆನಿ ಅವರ ಅಡಿಯಲ್ಲಿ ವರದಿಯನ್ನು ಅಂಗೀಕರಿಸಿದ್ದು ಜನದ್ರೋಹವಾಗಿದೆ ಎಂದು ಟಿಎಂಸಿ ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಮುಖ್ಯ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಸಮಿತಿಯ ಇತರ ಪಕ್ಷಗಳು ತಮ್ಮ ಸದಸ್ಯರು ಅಂತಹ ಶಿಫಾರಸನ್ನು ಹೇಗೆ ಅನುಮತಿಸಿದ್ದಾರೆ ಎಂಬುದಕ್ಕೆ ಉತ್ತರಿಸಬೇಕಾದ ಜರೂರು ಇದೆ ಕಿಸಾನ್ ಸಭಾ ಆಗ್ರಹಿಸಿದೆ.

ಇದನ್ನೂ ಓದಿ: ಅಸ್ಸಾಂ ವಿಧಾನಸಭಾ ಚುನಾವಣೆ – ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ; ನೀಡಿದ ಭರವಸೆಗಳೇನು?

ಸ್ಥಾಯಿ ಸಮಿತಿ ವರದಿಯು ” ಈ ಕಾಯ್ದೆಯು ಕೃಷಿ ಕ್ಷೇತ್ರದಲ್ಲಿ ಅಪಾರ ಬಳಕೆಯಾಗದ ಸಂಪನ್ಮೂಲಗಳನ್ನು ಬಳಸುವ ಮೂಲಕ  ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ಇದು ವರ್ಧಿತ ಹೂಡಿಕೆಗಳಿಗೆ ವಾತಾವರಣವನ್ನು ಸೃಷ್ಟಿಸುತ್ತದೆ, ಕೃಷಿ ಮಾರುಕಟ್ಟೆಯಲ್ಲಿ ನ್ಯಾಯಯುತ ಮತ್ತು ಉತ್ಪಾದಕ ಸ್ಪರ್ಧೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ” ಎಂದು ಸ್ಥಾಯಿ ಸಮಿತಿ ನೀಡಿರುವ ಸಮರ್ಥನೆಯನ್ನು ಕಿಸಾನ್ ಸಭಾ ಪ್ರಶ್ನಿಸಿದೆ.

’ಇದು ಶುದ್ಧ ಸುಳ್ಳು. ರೈತರ ಸಂಘಟನೆಗಳು ಮತ್ತು ಸಂಯುಕ್ತಾ ಕಿಸಾನ್ ಮೋರ್ಚಾ ತೋರಿಸಿ ಕೊಟ್ಟಂತೆ ಇದು ಸಂಪೂರ್ಣವಾಗಿ ಸುಳ್ಳು ಮತ್ತು ವಾಸ್ತವದಿಂದ ದೂರವಿದೆ. ಇದು ಕಾರ್ಪೊರೇಟ್ ಹೂಡಿಕೆ  ಮತ್ತು ಕಾಳಸಂತೆ ಮಾರುಕಟ್ಟೆಗೆ ಅವಕಾಶ ನೀಡುತ್ತದೆ. ಇದರಿಂದಾಗಿ ಕೃತಕ ಕೊರತೆ ಸೃಷಿಯಾಗುತ್ತದೆ ಮತ್ತು ರೈತರಿಗೆ ಯಾವುದೇ ಪ್ರಯೋಜನವಿಲ್ಲದೆ ಜನಸಾಮಾನ್ಯರಿಗೆ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಇದು ಅಂತಿಮವಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ತೆಗೆದುಹಾಕುತ್ತದೆ’ ಎಂದು ಕಿಸಾನ್ ಸಭಾ ಆರೋಪಿಸಿದೆ.

ಈ ಶಿಫಾರಸು ಸ್ವೀಕಾರಾರ್ಹವಲ್ಲ ಮತ್ತು ಮೂರು ರೈತ ವಿರೋಧಿ ಕಾಯ್ದೆಗಳನ್ನು ಸಾರ್ವಜನಿಕವಾಗಿ ವಿರೋಧಿಸುವುದಾಗಿ ಹೇಳಿಕೊಳ್ಳುವ ಆದರೆ ಅಂತಹ ಶಿಫಾರಸಿಗೆ ಕಾರಣವಾಗಿರುವ  ಪಕ್ಷಗಳ ಬೂಟಾಟಿಕೆಗಳನ್ನು ಬಹಿರಂಗಪಡಿಸುವಂತೆ ನಾವು ರೈತರಿಗೆ ಕರೆ ನೀಡುತ್ತೇವೆ ಎಂದಿದೆ.

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ ರೈತ ವಿರೋಧಿ, ಕಾರ್ಪೊರೇಟ್ ಪರ ನೀತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಸ್ಥಾಯಿ ಸಮಿತಿಯ ಶಿಫಾರಸನ್ನು ವಿರೋಧಿಸಲು ದೇಶದ ರೈತರು ಮತ್ತು ಜನಸಾಮಾನ್ಯರಿಗೆ ಎಐಕೆಎಸ್ ಕರೆ ನೀಡಿದೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...