Homeಚಳವಳಿಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ...

ಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ ಆಕ್ರೋಶ

- Advertisement -
- Advertisement -

ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಜಾರಿಗೆ ತರಲು ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಕುರಿತ ಸ್ಥಾಯಿ ಸಮಿತಿಯ ಶಿಫಾರಸನ್ನು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ತೀವ್ರವಾಗಿ ಖಂಡಿಸಿದೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ಕಿಸಾನ ಸಭಾ, ಸ್ಥಾಯಿ ಸಮಿತಿಯ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದೆ. ಇದು ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ  ಮತ್ತು  ಈ ಹೋರಾಟದ 300 ಹುತಾತ್ಮರಿಗೆ ಮಾಡಿದ ಅವಮಾನ ಎಂದು ಎಐಕೆಎಸ್ ಅಧ್ಯಕ್ಷ ಅಶೋಕ್ ಧವಾಲೆ, ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ತಿಳಿಸಿದ್ದಾರೆ.

2020 ರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ ಜಾರಿಗೆ ತರಲು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಸ್ಥಾಯಿ ಸಮಿತಿಯ ಶಿಫಾರಸನ್ನು ಎಐಕೆಎಸ್ ಖಂಡಿಸಿದೆ. ಈ ಸ್ಥಾಯಿ ಸಮಿತಿಯ ಈ ಶಿಫಾರಸು ರೈತರು ಮತ್ತು ಜನಸಾಮಾನ್ಯರ ವಿರುದ್ಧದ  ಮನೋಭಾವನೆ ಹೊಂದಿದೆ. ನಮ್ಮ ದೇಶ, ನಮ್ಮ ರೈತರು, ಐತಿಹಾಸಿಕ ಹೋರಾಟದ ಸುಮಾರು 300 ಹುತಾತ್ಮರಿಗೆ ಮಾಡಿದ ಅವಮಾನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಮೂರು ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸುವುದಾಗಿ ಹೇಳಿಕೊಳ್ಳುವ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ  ಅದೇ ರೀತಿಯ ನಿರ್ಣಯವನ್ನು ಅಂಗೀಕರಿಸಿದ ಟಿಎಂಸಿ ತನ್ನ ನಾಯಕನ ನೇತೃತ್ವದ ಸಮಿತಿಯು ರೈತರಿಗೆ ದ್ರೋಹ ಎಸಗುವ  ಶಿಫಾರಸನ್ನು ಹೇಗೆ ನೀಡಿದೆ ಎಂಬುದನ್ನು ವಿವರಿಸಬೇಕು ಎಂದಿದೆ.

“ಕೆಲವು ಅನಿವಾರ್ಯತೆ” ಯಿಂದಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಬಂಡೋಪಾಧ್ಯಾಯ 2021 ಮಾರ್ಚ್ 18 ರಂದು ನಡೆದ ಕೊನೆಯ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.  ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಅಜಯ್ ಮಿಶ್ರಾ ಟೆನಿ ಅವರ ಅಡಿಯಲ್ಲಿ ವರದಿಯನ್ನು ಅಂಗೀಕರಿಸಿದ್ದು ಜನದ್ರೋಹವಾಗಿದೆ ಎಂದು ಟಿಎಂಸಿ ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಮುಖ್ಯ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಸಮಿತಿಯ ಇತರ ಪಕ್ಷಗಳು ತಮ್ಮ ಸದಸ್ಯರು ಅಂತಹ ಶಿಫಾರಸನ್ನು ಹೇಗೆ ಅನುಮತಿಸಿದ್ದಾರೆ ಎಂಬುದಕ್ಕೆ ಉತ್ತರಿಸಬೇಕಾದ ಜರೂರು ಇದೆ ಕಿಸಾನ್ ಸಭಾ ಆಗ್ರಹಿಸಿದೆ.

ಇದನ್ನೂ ಓದಿ: ಅಸ್ಸಾಂ ವಿಧಾನಸಭಾ ಚುನಾವಣೆ – ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ; ನೀಡಿದ ಭರವಸೆಗಳೇನು?

ಸ್ಥಾಯಿ ಸಮಿತಿ ವರದಿಯು ” ಈ ಕಾಯ್ದೆಯು ಕೃಷಿ ಕ್ಷೇತ್ರದಲ್ಲಿ ಅಪಾರ ಬಳಕೆಯಾಗದ ಸಂಪನ್ಮೂಲಗಳನ್ನು ಬಳಸುವ ಮೂಲಕ  ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ಇದು ವರ್ಧಿತ ಹೂಡಿಕೆಗಳಿಗೆ ವಾತಾವರಣವನ್ನು ಸೃಷ್ಟಿಸುತ್ತದೆ, ಕೃಷಿ ಮಾರುಕಟ್ಟೆಯಲ್ಲಿ ನ್ಯಾಯಯುತ ಮತ್ತು ಉತ್ಪಾದಕ ಸ್ಪರ್ಧೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ” ಎಂದು ಸ್ಥಾಯಿ ಸಮಿತಿ ನೀಡಿರುವ ಸಮರ್ಥನೆಯನ್ನು ಕಿಸಾನ್ ಸಭಾ ಪ್ರಶ್ನಿಸಿದೆ.

’ಇದು ಶುದ್ಧ ಸುಳ್ಳು. ರೈತರ ಸಂಘಟನೆಗಳು ಮತ್ತು ಸಂಯುಕ್ತಾ ಕಿಸಾನ್ ಮೋರ್ಚಾ ತೋರಿಸಿ ಕೊಟ್ಟಂತೆ ಇದು ಸಂಪೂರ್ಣವಾಗಿ ಸುಳ್ಳು ಮತ್ತು ವಾಸ್ತವದಿಂದ ದೂರವಿದೆ. ಇದು ಕಾರ್ಪೊರೇಟ್ ಹೂಡಿಕೆ  ಮತ್ತು ಕಾಳಸಂತೆ ಮಾರುಕಟ್ಟೆಗೆ ಅವಕಾಶ ನೀಡುತ್ತದೆ. ಇದರಿಂದಾಗಿ ಕೃತಕ ಕೊರತೆ ಸೃಷಿಯಾಗುತ್ತದೆ ಮತ್ತು ರೈತರಿಗೆ ಯಾವುದೇ ಪ್ರಯೋಜನವಿಲ್ಲದೆ ಜನಸಾಮಾನ್ಯರಿಗೆ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಇದು ಅಂತಿಮವಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ತೆಗೆದುಹಾಕುತ್ತದೆ’ ಎಂದು ಕಿಸಾನ್ ಸಭಾ ಆರೋಪಿಸಿದೆ.

ಈ ಶಿಫಾರಸು ಸ್ವೀಕಾರಾರ್ಹವಲ್ಲ ಮತ್ತು ಮೂರು ರೈತ ವಿರೋಧಿ ಕಾಯ್ದೆಗಳನ್ನು ಸಾರ್ವಜನಿಕವಾಗಿ ವಿರೋಧಿಸುವುದಾಗಿ ಹೇಳಿಕೊಳ್ಳುವ ಆದರೆ ಅಂತಹ ಶಿಫಾರಸಿಗೆ ಕಾರಣವಾಗಿರುವ  ಪಕ್ಷಗಳ ಬೂಟಾಟಿಕೆಗಳನ್ನು ಬಹಿರಂಗಪಡಿಸುವಂತೆ ನಾವು ರೈತರಿಗೆ ಕರೆ ನೀಡುತ್ತೇವೆ ಎಂದಿದೆ.

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ ರೈತ ವಿರೋಧಿ, ಕಾರ್ಪೊರೇಟ್ ಪರ ನೀತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಸ್ಥಾಯಿ ಸಮಿತಿಯ ಶಿಫಾರಸನ್ನು ವಿರೋಧಿಸಲು ದೇಶದ ರೈತರು ಮತ್ತು ಜನಸಾಮಾನ್ಯರಿಗೆ ಎಐಕೆಎಸ್ ಕರೆ ನೀಡಿದೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...