Homeಚಳವಳಿಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ...

ಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ ಆಕ್ರೋಶ

- Advertisement -
- Advertisement -

ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಜಾರಿಗೆ ತರಲು ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಕುರಿತ ಸ್ಥಾಯಿ ಸಮಿತಿಯ ಶಿಫಾರಸನ್ನು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ತೀವ್ರವಾಗಿ ಖಂಡಿಸಿದೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ಕಿಸಾನ ಸಭಾ, ಸ್ಥಾಯಿ ಸಮಿತಿಯ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದೆ. ಇದು ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ  ಮತ್ತು  ಈ ಹೋರಾಟದ 300 ಹುತಾತ್ಮರಿಗೆ ಮಾಡಿದ ಅವಮಾನ ಎಂದು ಎಐಕೆಎಸ್ ಅಧ್ಯಕ್ಷ ಅಶೋಕ್ ಧವಾಲೆ, ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ತಿಳಿಸಿದ್ದಾರೆ.

2020 ರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ ಜಾರಿಗೆ ತರಲು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಸ್ಥಾಯಿ ಸಮಿತಿಯ ಶಿಫಾರಸನ್ನು ಎಐಕೆಎಸ್ ಖಂಡಿಸಿದೆ. ಈ ಸ್ಥಾಯಿ ಸಮಿತಿಯ ಈ ಶಿಫಾರಸು ರೈತರು ಮತ್ತು ಜನಸಾಮಾನ್ಯರ ವಿರುದ್ಧದ  ಮನೋಭಾವನೆ ಹೊಂದಿದೆ. ನಮ್ಮ ದೇಶ, ನಮ್ಮ ರೈತರು, ಐತಿಹಾಸಿಕ ಹೋರಾಟದ ಸುಮಾರು 300 ಹುತಾತ್ಮರಿಗೆ ಮಾಡಿದ ಅವಮಾನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಮೂರು ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸುವುದಾಗಿ ಹೇಳಿಕೊಳ್ಳುವ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ  ಅದೇ ರೀತಿಯ ನಿರ್ಣಯವನ್ನು ಅಂಗೀಕರಿಸಿದ ಟಿಎಂಸಿ ತನ್ನ ನಾಯಕನ ನೇತೃತ್ವದ ಸಮಿತಿಯು ರೈತರಿಗೆ ದ್ರೋಹ ಎಸಗುವ  ಶಿಫಾರಸನ್ನು ಹೇಗೆ ನೀಡಿದೆ ಎಂಬುದನ್ನು ವಿವರಿಸಬೇಕು ಎಂದಿದೆ.

“ಕೆಲವು ಅನಿವಾರ್ಯತೆ” ಯಿಂದಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಬಂಡೋಪಾಧ್ಯಾಯ 2021 ಮಾರ್ಚ್ 18 ರಂದು ನಡೆದ ಕೊನೆಯ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.  ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಅಜಯ್ ಮಿಶ್ರಾ ಟೆನಿ ಅವರ ಅಡಿಯಲ್ಲಿ ವರದಿಯನ್ನು ಅಂಗೀಕರಿಸಿದ್ದು ಜನದ್ರೋಹವಾಗಿದೆ ಎಂದು ಟಿಎಂಸಿ ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಮುಖ್ಯ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಸಮಿತಿಯ ಇತರ ಪಕ್ಷಗಳು ತಮ್ಮ ಸದಸ್ಯರು ಅಂತಹ ಶಿಫಾರಸನ್ನು ಹೇಗೆ ಅನುಮತಿಸಿದ್ದಾರೆ ಎಂಬುದಕ್ಕೆ ಉತ್ತರಿಸಬೇಕಾದ ಜರೂರು ಇದೆ ಕಿಸಾನ್ ಸಭಾ ಆಗ್ರಹಿಸಿದೆ.

ಇದನ್ನೂ ಓದಿ: ಅಸ್ಸಾಂ ವಿಧಾನಸಭಾ ಚುನಾವಣೆ – ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ; ನೀಡಿದ ಭರವಸೆಗಳೇನು?

ಸ್ಥಾಯಿ ಸಮಿತಿ ವರದಿಯು ” ಈ ಕಾಯ್ದೆಯು ಕೃಷಿ ಕ್ಷೇತ್ರದಲ್ಲಿ ಅಪಾರ ಬಳಕೆಯಾಗದ ಸಂಪನ್ಮೂಲಗಳನ್ನು ಬಳಸುವ ಮೂಲಕ  ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ಇದು ವರ್ಧಿತ ಹೂಡಿಕೆಗಳಿಗೆ ವಾತಾವರಣವನ್ನು ಸೃಷ್ಟಿಸುತ್ತದೆ, ಕೃಷಿ ಮಾರುಕಟ್ಟೆಯಲ್ಲಿ ನ್ಯಾಯಯುತ ಮತ್ತು ಉತ್ಪಾದಕ ಸ್ಪರ್ಧೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ” ಎಂದು ಸ್ಥಾಯಿ ಸಮಿತಿ ನೀಡಿರುವ ಸಮರ್ಥನೆಯನ್ನು ಕಿಸಾನ್ ಸಭಾ ಪ್ರಶ್ನಿಸಿದೆ.

’ಇದು ಶುದ್ಧ ಸುಳ್ಳು. ರೈತರ ಸಂಘಟನೆಗಳು ಮತ್ತು ಸಂಯುಕ್ತಾ ಕಿಸಾನ್ ಮೋರ್ಚಾ ತೋರಿಸಿ ಕೊಟ್ಟಂತೆ ಇದು ಸಂಪೂರ್ಣವಾಗಿ ಸುಳ್ಳು ಮತ್ತು ವಾಸ್ತವದಿಂದ ದೂರವಿದೆ. ಇದು ಕಾರ್ಪೊರೇಟ್ ಹೂಡಿಕೆ  ಮತ್ತು ಕಾಳಸಂತೆ ಮಾರುಕಟ್ಟೆಗೆ ಅವಕಾಶ ನೀಡುತ್ತದೆ. ಇದರಿಂದಾಗಿ ಕೃತಕ ಕೊರತೆ ಸೃಷಿಯಾಗುತ್ತದೆ ಮತ್ತು ರೈತರಿಗೆ ಯಾವುದೇ ಪ್ರಯೋಜನವಿಲ್ಲದೆ ಜನಸಾಮಾನ್ಯರಿಗೆ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಇದು ಅಂತಿಮವಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ತೆಗೆದುಹಾಕುತ್ತದೆ’ ಎಂದು ಕಿಸಾನ್ ಸಭಾ ಆರೋಪಿಸಿದೆ.

ಈ ಶಿಫಾರಸು ಸ್ವೀಕಾರಾರ್ಹವಲ್ಲ ಮತ್ತು ಮೂರು ರೈತ ವಿರೋಧಿ ಕಾಯ್ದೆಗಳನ್ನು ಸಾರ್ವಜನಿಕವಾಗಿ ವಿರೋಧಿಸುವುದಾಗಿ ಹೇಳಿಕೊಳ್ಳುವ ಆದರೆ ಅಂತಹ ಶಿಫಾರಸಿಗೆ ಕಾರಣವಾಗಿರುವ  ಪಕ್ಷಗಳ ಬೂಟಾಟಿಕೆಗಳನ್ನು ಬಹಿರಂಗಪಡಿಸುವಂತೆ ನಾವು ರೈತರಿಗೆ ಕರೆ ನೀಡುತ್ತೇವೆ ಎಂದಿದೆ.

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ ರೈತ ವಿರೋಧಿ, ಕಾರ್ಪೊರೇಟ್ ಪರ ನೀತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಸ್ಥಾಯಿ ಸಮಿತಿಯ ಶಿಫಾರಸನ್ನು ವಿರೋಧಿಸಲು ದೇಶದ ರೈತರು ಮತ್ತು ಜನಸಾಮಾನ್ಯರಿಗೆ ಎಐಕೆಎಸ್ ಕರೆ ನೀಡಿದೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...