Homeಚಳವಳಿಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ...

ಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ ಆಕ್ರೋಶ

- Advertisement -
- Advertisement -

ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಜಾರಿಗೆ ತರಲು ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಕುರಿತ ಸ್ಥಾಯಿ ಸಮಿತಿಯ ಶಿಫಾರಸನ್ನು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ತೀವ್ರವಾಗಿ ಖಂಡಿಸಿದೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ಕಿಸಾನ ಸಭಾ, ಸ್ಥಾಯಿ ಸಮಿತಿಯ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದೆ. ಇದು ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ  ಮತ್ತು  ಈ ಹೋರಾಟದ 300 ಹುತಾತ್ಮರಿಗೆ ಮಾಡಿದ ಅವಮಾನ ಎಂದು ಎಐಕೆಎಸ್ ಅಧ್ಯಕ್ಷ ಅಶೋಕ್ ಧವಾಲೆ, ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ತಿಳಿಸಿದ್ದಾರೆ.

2020 ರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ ಜಾರಿಗೆ ತರಲು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಆಹಾರ, ಗ್ರಾಹಕ ವ್ಯವಹಾರ ಮತ್ತು ಪಿಡಿಎಸ್ ಸ್ಥಾಯಿ ಸಮಿತಿಯ ಶಿಫಾರಸನ್ನು ಎಐಕೆಎಸ್ ಖಂಡಿಸಿದೆ. ಈ ಸ್ಥಾಯಿ ಸಮಿತಿಯ ಈ ಶಿಫಾರಸು ರೈತರು ಮತ್ತು ಜನಸಾಮಾನ್ಯರ ವಿರುದ್ಧದ  ಮನೋಭಾವನೆ ಹೊಂದಿದೆ. ನಮ್ಮ ದೇಶ, ನಮ್ಮ ರೈತರು, ಐತಿಹಾಸಿಕ ಹೋರಾಟದ ಸುಮಾರು 300 ಹುತಾತ್ಮರಿಗೆ ಮಾಡಿದ ಅವಮಾನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಮೂರು ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸುವುದಾಗಿ ಹೇಳಿಕೊಳ್ಳುವ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ  ಅದೇ ರೀತಿಯ ನಿರ್ಣಯವನ್ನು ಅಂಗೀಕರಿಸಿದ ಟಿಎಂಸಿ ತನ್ನ ನಾಯಕನ ನೇತೃತ್ವದ ಸಮಿತಿಯು ರೈತರಿಗೆ ದ್ರೋಹ ಎಸಗುವ  ಶಿಫಾರಸನ್ನು ಹೇಗೆ ನೀಡಿದೆ ಎಂಬುದನ್ನು ವಿವರಿಸಬೇಕು ಎಂದಿದೆ.

“ಕೆಲವು ಅನಿವಾರ್ಯತೆ” ಯಿಂದಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಬಂಡೋಪಾಧ್ಯಾಯ 2021 ಮಾರ್ಚ್ 18 ರಂದು ನಡೆದ ಕೊನೆಯ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.  ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಅಜಯ್ ಮಿಶ್ರಾ ಟೆನಿ ಅವರ ಅಡಿಯಲ್ಲಿ ವರದಿಯನ್ನು ಅಂಗೀಕರಿಸಿದ್ದು ಜನದ್ರೋಹವಾಗಿದೆ ಎಂದು ಟಿಎಂಸಿ ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಮುಖ್ಯ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಸಮಿತಿಯ ಇತರ ಪಕ್ಷಗಳು ತಮ್ಮ ಸದಸ್ಯರು ಅಂತಹ ಶಿಫಾರಸನ್ನು ಹೇಗೆ ಅನುಮತಿಸಿದ್ದಾರೆ ಎಂಬುದಕ್ಕೆ ಉತ್ತರಿಸಬೇಕಾದ ಜರೂರು ಇದೆ ಕಿಸಾನ್ ಸಭಾ ಆಗ್ರಹಿಸಿದೆ.

ಇದನ್ನೂ ಓದಿ: ಅಸ್ಸಾಂ ವಿಧಾನಸಭಾ ಚುನಾವಣೆ – ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ; ನೀಡಿದ ಭರವಸೆಗಳೇನು?

ಸ್ಥಾಯಿ ಸಮಿತಿ ವರದಿಯು ” ಈ ಕಾಯ್ದೆಯು ಕೃಷಿ ಕ್ಷೇತ್ರದಲ್ಲಿ ಅಪಾರ ಬಳಕೆಯಾಗದ ಸಂಪನ್ಮೂಲಗಳನ್ನು ಬಳಸುವ ಮೂಲಕ  ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ಇದು ವರ್ಧಿತ ಹೂಡಿಕೆಗಳಿಗೆ ವಾತಾವರಣವನ್ನು ಸೃಷ್ಟಿಸುತ್ತದೆ, ಕೃಷಿ ಮಾರುಕಟ್ಟೆಯಲ್ಲಿ ನ್ಯಾಯಯುತ ಮತ್ತು ಉತ್ಪಾದಕ ಸ್ಪರ್ಧೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ” ಎಂದು ಸ್ಥಾಯಿ ಸಮಿತಿ ನೀಡಿರುವ ಸಮರ್ಥನೆಯನ್ನು ಕಿಸಾನ್ ಸಭಾ ಪ್ರಶ್ನಿಸಿದೆ.

’ಇದು ಶುದ್ಧ ಸುಳ್ಳು. ರೈತರ ಸಂಘಟನೆಗಳು ಮತ್ತು ಸಂಯುಕ್ತಾ ಕಿಸಾನ್ ಮೋರ್ಚಾ ತೋರಿಸಿ ಕೊಟ್ಟಂತೆ ಇದು ಸಂಪೂರ್ಣವಾಗಿ ಸುಳ್ಳು ಮತ್ತು ವಾಸ್ತವದಿಂದ ದೂರವಿದೆ. ಇದು ಕಾರ್ಪೊರೇಟ್ ಹೂಡಿಕೆ  ಮತ್ತು ಕಾಳಸಂತೆ ಮಾರುಕಟ್ಟೆಗೆ ಅವಕಾಶ ನೀಡುತ್ತದೆ. ಇದರಿಂದಾಗಿ ಕೃತಕ ಕೊರತೆ ಸೃಷಿಯಾಗುತ್ತದೆ ಮತ್ತು ರೈತರಿಗೆ ಯಾವುದೇ ಪ್ರಯೋಜನವಿಲ್ಲದೆ ಜನಸಾಮಾನ್ಯರಿಗೆ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಇದು ಅಂತಿಮವಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ತೆಗೆದುಹಾಕುತ್ತದೆ’ ಎಂದು ಕಿಸಾನ್ ಸಭಾ ಆರೋಪಿಸಿದೆ.

ಈ ಶಿಫಾರಸು ಸ್ವೀಕಾರಾರ್ಹವಲ್ಲ ಮತ್ತು ಮೂರು ರೈತ ವಿರೋಧಿ ಕಾಯ್ದೆಗಳನ್ನು ಸಾರ್ವಜನಿಕವಾಗಿ ವಿರೋಧಿಸುವುದಾಗಿ ಹೇಳಿಕೊಳ್ಳುವ ಆದರೆ ಅಂತಹ ಶಿಫಾರಸಿಗೆ ಕಾರಣವಾಗಿರುವ  ಪಕ್ಷಗಳ ಬೂಟಾಟಿಕೆಗಳನ್ನು ಬಹಿರಂಗಪಡಿಸುವಂತೆ ನಾವು ರೈತರಿಗೆ ಕರೆ ನೀಡುತ್ತೇವೆ ಎಂದಿದೆ.

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ ರೈತ ವಿರೋಧಿ, ಕಾರ್ಪೊರೇಟ್ ಪರ ನೀತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಸ್ಥಾಯಿ ಸಮಿತಿಯ ಶಿಫಾರಸನ್ನು ವಿರೋಧಿಸಲು ದೇಶದ ರೈತರು ಮತ್ತು ಜನಸಾಮಾನ್ಯರಿಗೆ ಎಐಕೆಎಸ್ ಕರೆ ನೀಡಿದೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...