Homeಚಳವಳಿಒಂದು ವಿವಾದಾತ್ಮಕ ಕೃಷಿ ಕಾನೂನು ಜಾರಿಗೆ ಸೂಚಿಸಿದ ಸ್ಥಾಯಿ ಸಮಿತಿ!

ಒಂದು ವಿವಾದಾತ್ಮಕ ಕೃಷಿ ಕಾನೂನು ಜಾರಿಗೆ ಸೂಚಿಸಿದ ಸ್ಥಾಯಿ ಸಮಿತಿ!

- Advertisement -
- Advertisement -

ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಎಎಪಿ, ಎನ್‌ಸಿಪಿ ಮತ್ತು ಶಿವಸೇನೆ ಸೇರಿದಂತೆ 13 ಪಕ್ಷಗಳ ಸದಸ್ಯರನ್ನು ಹೊಂದಿರುವ ಆಹಾರ, ಗ್ರಾಹಕ ವ್ಯವಹಾರ ಮತ್ತು ಸಾರ್ವಜನಿಕ ವಿತರಣೆಯ ಸ್ಥಾಯಿ ಸಮಿತಿ -2020ರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ ಜಾರಿಗೆ ತರಲು ಸರ್ಕಾರವನ್ನು ಕೋರಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೇಶದಾದ್ಯಂತ ರೈತರು ಪ್ರತಿಭಟಿಸುತತ್ತಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳಲ್ಲಿ ಈ ಕಾಯಿದೆಯು ಒಂದು. ಈ ಹೆಚ್ಚಿನ ಪಕ್ಷಗಳ ನಾಯಕರು ಈ ಎಲ್ಲಾ ಮೂರು ಕಾನೂನುಗಳಿಗೆ ವಿರುದ್ಧವಾಗಿವೆ, ಅವುಗಳನ್ನು ರದ್ದುಗೊಳಿಸಬೇಕೆಂದು ಬಯಸಿವೆ ಎಂಬುದನ್ನು ಇಲ್ಲಿ ಗಮನಿಸಬೇಕು.

ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಲಾದ ತನ್ನ ವರದಿಯಲ್ಲಿ, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಸಮಿತಿಯು, ಇತ್ತೀಚೆಗೆ ಜಾರಿಗೆ ತಂದಿರುವ ’ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020’ ಅನ್ನು ಸರ್ಕಾರ ಜಾರಿಗೆ ತರುತ್ತದೆ “ಎಂದು ಆಶಿಸಿದ್ದೇವೆ ಎಂದಿದೆ. ಈ ಕಾಯಿದೆಯು  ವರ್ಧಿತ ಹೂಡಿಕೆಗಳಿಗೆ ವಾತಾವರಣವನ್ನು ಸೃಷ್ಟಿಸುವ ಮೂಲಕ ಕೃಷಿ ಕ್ಷೇತ್ರದಲ್ಲಿ ಬಳಕೆಯಾಗದ ಅಪಾರ ಸಂಪನ್ಮೂಲಗಳನ್ನು ಬಳಕೆ  ಮಾಡಲು ವೇಗವರ್ಧಕವಾಗಲಿದೆ. ಕೃಷಿ ವ್ಯಾಪಾರೋದ್ಯಮದಲ್ಲಿ ನ್ಯಾಯಯುತ ಮತ್ತು ಉತ್ಪಾದಕ ಸ್ಪರ್ಧೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ ಎಂದಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಸಮಿತಿಯು ಸರ್ಕಾರಕ್ಕೆ “ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ, 2020 ಅನ್ನು ಜಾರಿಗೆ ತರಲು ಮತ್ತು ಯಾವುದೇ ಅಡೆತಡೆಗಳಿಲ್ಲದೆ ಈ ದೇಶದ ಕೃಷಿ ಕ್ಷೇತ್ರದ ರೈತರು ಮತ್ತು ಇತರ ಮಧ್ಯಸ್ಥಗಾರರಿಗೆ ಉದ್ದೇಶಿಸಿರುವ ಪ್ರಯೋಜನಗಳನ್ನು ಪಡೆಯಲು ನೆರವಾಗಬೇಕು’ ಎಂದು ಹೇಳಿದೆ.

30 ಸದಸ್ಯರ ಸಮಿತಿಯು ಉಭಯ ಸದನಗಳಿಂದ 13 ಪಕ್ಷಗಳಿಂದ ಸದಸ್ಯರನ್ನು ಹೊಂದಿದೆ. ಅಂದರೆ, ಎಎಪಿ, ಬಿಜೆಪಿ, ಕಾಂಗ್ರೆಸ್, ಡಿಎಂಕೆ, ಜೆಡಿಯು, ನಾಗ ಪೀಪಲ್ಸ್ ಫ್ರಂಟ್, ನ್ಯಾಷನಲ್ ಕಾನ್ಫರೆನ್ಸ್, ಎನ್‌ಸಿಪಿ, ಪಿಎಂಕೆ, ಶಿವಸೇನೆ, ಎಸ್‌ಪಿ, ಟಿಎಂಸಿ, ವೈ.ಎಸ್.ಆರ್.ಸಿ.ಪಿ. ಪಕ್ಷಗಳಿಂದ ತಲಾ ಒಬ್ಬ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಹೇರುವುದಿಲ್ಲ- ಸಿಎಂ ಯಡಿಯೂರಪ್ಪ

ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಜನವರಿ 12 ರಂದು ಸುಪ್ರೀಂ ಕೋರ್ಟ್ ಮೂರು ಕೃಷಿ ಕಾನೂನುಗಳ ಅನುಷ್ಠಾನವನ್ನು ತಡೆಹಿಡಿದ ನಂತರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲು ಸಮಿತಿಯ ಶಿಫಾರಸು ಬಂದಿದೆ. ಇತರ ಎರಡು ಕಾನೂನುಗಳು: ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, 2020, ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ, 2020 ರ ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದಗಳು.

ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಮುಂದಿನ ದಿನಗಳಲ್ಲಿ ತನ್ನ ಶಿಫಾರಸುಗಳನ್ನು ನೀಡುವ ನಿರೀಕ್ಷೆಯಿದೆ. ಸರ್ಕಾರ ಮತ್ತು ಆಂದೋಲನ ನಡೆಸುತ್ತಿರುವ ರೈತ ಸಂಘಗಳ ನಡುವೆ ಹಲವಾರು ಸುತ್ತಿನ ಮಾತುಕತೆಗಳು ಸಮಸ್ಯೆ ಕೊನೆಗೊಳಿಸಲು ವಿಫಲವಾಗಿವೆ.

ಸ್ಥಾಯಿ ಸಮಿತಿಯು “ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳ ಬಗ್ಗೆ ನಿರಂತರವಾಗಿ ಗಮನವಿರಲಿ” ಎಂದು ಸರ್ಕಾರವನ್ನು ಕೇಳಿದೆ.

ಮಾರ್ಚ್ 18 ರಂದು ನಡೆದ ಸಮಿತಿಯ ಕೊನೆಯ ಸಭೆಯಲ್ಲಿ ಅಧ್ಯಕ್ಷ ಬಂಡ್ಯೋಪಾಧ್ಯಾಯರಿಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಸಭೆಯು ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಅಜಯ್ ಮಿಶ್ರಾ ಟೆನಿ ಅವರ ಅಡಿಯಲ್ಲಿ ವರದಿಯನ್ನು ಅಂಗೀಕರಿಸಲಾಗಿದೆ.


ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...