Homeಚಳವಳಿಒಂದು ವಿವಾದಾತ್ಮಕ ಕೃಷಿ ಕಾನೂನು ಜಾರಿಗೆ ಸೂಚಿಸಿದ ಸ್ಥಾಯಿ ಸಮಿತಿ!

ಒಂದು ವಿವಾದಾತ್ಮಕ ಕೃಷಿ ಕಾನೂನು ಜಾರಿಗೆ ಸೂಚಿಸಿದ ಸ್ಥಾಯಿ ಸಮಿತಿ!

- Advertisement -
- Advertisement -

ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಎಎಪಿ, ಎನ್‌ಸಿಪಿ ಮತ್ತು ಶಿವಸೇನೆ ಸೇರಿದಂತೆ 13 ಪಕ್ಷಗಳ ಸದಸ್ಯರನ್ನು ಹೊಂದಿರುವ ಆಹಾರ, ಗ್ರಾಹಕ ವ್ಯವಹಾರ ಮತ್ತು ಸಾರ್ವಜನಿಕ ವಿತರಣೆಯ ಸ್ಥಾಯಿ ಸಮಿತಿ -2020ರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ ಜಾರಿಗೆ ತರಲು ಸರ್ಕಾರವನ್ನು ಕೋರಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೇಶದಾದ್ಯಂತ ರೈತರು ಪ್ರತಿಭಟಿಸುತತ್ತಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳಲ್ಲಿ ಈ ಕಾಯಿದೆಯು ಒಂದು. ಈ ಹೆಚ್ಚಿನ ಪಕ್ಷಗಳ ನಾಯಕರು ಈ ಎಲ್ಲಾ ಮೂರು ಕಾನೂನುಗಳಿಗೆ ವಿರುದ್ಧವಾಗಿವೆ, ಅವುಗಳನ್ನು ರದ್ದುಗೊಳಿಸಬೇಕೆಂದು ಬಯಸಿವೆ ಎಂಬುದನ್ನು ಇಲ್ಲಿ ಗಮನಿಸಬೇಕು.

ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಲಾದ ತನ್ನ ವರದಿಯಲ್ಲಿ, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಸಮಿತಿಯು, ಇತ್ತೀಚೆಗೆ ಜಾರಿಗೆ ತಂದಿರುವ ’ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020’ ಅನ್ನು ಸರ್ಕಾರ ಜಾರಿಗೆ ತರುತ್ತದೆ “ಎಂದು ಆಶಿಸಿದ್ದೇವೆ ಎಂದಿದೆ. ಈ ಕಾಯಿದೆಯು  ವರ್ಧಿತ ಹೂಡಿಕೆಗಳಿಗೆ ವಾತಾವರಣವನ್ನು ಸೃಷ್ಟಿಸುವ ಮೂಲಕ ಕೃಷಿ ಕ್ಷೇತ್ರದಲ್ಲಿ ಬಳಕೆಯಾಗದ ಅಪಾರ ಸಂಪನ್ಮೂಲಗಳನ್ನು ಬಳಕೆ  ಮಾಡಲು ವೇಗವರ್ಧಕವಾಗಲಿದೆ. ಕೃಷಿ ವ್ಯಾಪಾರೋದ್ಯಮದಲ್ಲಿ ನ್ಯಾಯಯುತ ಮತ್ತು ಉತ್ಪಾದಕ ಸ್ಪರ್ಧೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ ಎಂದಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಸಮಿತಿಯು ಸರ್ಕಾರಕ್ಕೆ “ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ, 2020 ಅನ್ನು ಜಾರಿಗೆ ತರಲು ಮತ್ತು ಯಾವುದೇ ಅಡೆತಡೆಗಳಿಲ್ಲದೆ ಈ ದೇಶದ ಕೃಷಿ ಕ್ಷೇತ್ರದ ರೈತರು ಮತ್ತು ಇತರ ಮಧ್ಯಸ್ಥಗಾರರಿಗೆ ಉದ್ದೇಶಿಸಿರುವ ಪ್ರಯೋಜನಗಳನ್ನು ಪಡೆಯಲು ನೆರವಾಗಬೇಕು’ ಎಂದು ಹೇಳಿದೆ.

30 ಸದಸ್ಯರ ಸಮಿತಿಯು ಉಭಯ ಸದನಗಳಿಂದ 13 ಪಕ್ಷಗಳಿಂದ ಸದಸ್ಯರನ್ನು ಹೊಂದಿದೆ. ಅಂದರೆ, ಎಎಪಿ, ಬಿಜೆಪಿ, ಕಾಂಗ್ರೆಸ್, ಡಿಎಂಕೆ, ಜೆಡಿಯು, ನಾಗ ಪೀಪಲ್ಸ್ ಫ್ರಂಟ್, ನ್ಯಾಷನಲ್ ಕಾನ್ಫರೆನ್ಸ್, ಎನ್‌ಸಿಪಿ, ಪಿಎಂಕೆ, ಶಿವಸೇನೆ, ಎಸ್‌ಪಿ, ಟಿಎಂಸಿ, ವೈ.ಎಸ್.ಆರ್.ಸಿ.ಪಿ. ಪಕ್ಷಗಳಿಂದ ತಲಾ ಒಬ್ಬ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಹೇರುವುದಿಲ್ಲ- ಸಿಎಂ ಯಡಿಯೂರಪ್ಪ

ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಜನವರಿ 12 ರಂದು ಸುಪ್ರೀಂ ಕೋರ್ಟ್ ಮೂರು ಕೃಷಿ ಕಾನೂನುಗಳ ಅನುಷ್ಠಾನವನ್ನು ತಡೆಹಿಡಿದ ನಂತರ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲು ಸಮಿತಿಯ ಶಿಫಾರಸು ಬಂದಿದೆ. ಇತರ ಎರಡು ಕಾನೂನುಗಳು: ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, 2020, ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ, 2020 ರ ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದಗಳು.

ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಮುಂದಿನ ದಿನಗಳಲ್ಲಿ ತನ್ನ ಶಿಫಾರಸುಗಳನ್ನು ನೀಡುವ ನಿರೀಕ್ಷೆಯಿದೆ. ಸರ್ಕಾರ ಮತ್ತು ಆಂದೋಲನ ನಡೆಸುತ್ತಿರುವ ರೈತ ಸಂಘಗಳ ನಡುವೆ ಹಲವಾರು ಸುತ್ತಿನ ಮಾತುಕತೆಗಳು ಸಮಸ್ಯೆ ಕೊನೆಗೊಳಿಸಲು ವಿಫಲವಾಗಿವೆ.

ಸ್ಥಾಯಿ ಸಮಿತಿಯು “ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳ ಬಗ್ಗೆ ನಿರಂತರವಾಗಿ ಗಮನವಿರಲಿ” ಎಂದು ಸರ್ಕಾರವನ್ನು ಕೇಳಿದೆ.

ಮಾರ್ಚ್ 18 ರಂದು ನಡೆದ ಸಮಿತಿಯ ಕೊನೆಯ ಸಭೆಯಲ್ಲಿ ಅಧ್ಯಕ್ಷ ಬಂಡ್ಯೋಪಾಧ್ಯಾಯರಿಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಸಭೆಯು ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಅಜಯ್ ಮಿಶ್ರಾ ಟೆನಿ ಅವರ ಅಡಿಯಲ್ಲಿ ವರದಿಯನ್ನು ಅಂಗೀಕರಿಸಲಾಗಿದೆ.


ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...